<p><strong>ನವದೆಹಲಿ</strong>: ದೇಶದಲ್ಲಿನ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಕೈ ಜೋಡಿಸುವುದಕ್ಕಾಗಿ ಎನ್ಸಿಸಿಯ (ನ್ಯಾಷನಲ್ ಕೆಡೆಟ್ ಕಾಪ್ಸ್) 1 ಲಕ್ಷ ಕೆಡೆಟ್ಗಳನ್ನು ಸಿದ್ದಗೊಳಿಸಲಾಗುತ್ತಿದೆ.</p><p>ಈ ಮಾಹಿತಿಯನ್ನು ದೆಹಲಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಎನ್ಸಿಸಿಯ ಮಹಾ ನಿರ್ದೇಶಕ ಲೆಫ್ಟಿನಂಟ್ ಜನರಲ್ ವೀರೆಂದ್ರ ವತ್ಸಾ ಅವರು ತಿಳಿಸಿದರು.</p><p>ದೇಶದ ಐದು ಕಡೆಗೆ ಶಿಬಿರಗಳನ್ನು ಆಯೋಜಿಸಿ 1 ಲಕ್ಷ ಕೆಡೆಟ್ಗಳನ್ನು ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿನ ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p><p>ಇದರ ಜೊತೆ 10 ಸಾವಿರ ಕೆಡೆಟ್ಗಳನ್ನು ಸೈಬರ್ ವಾರಿಯರ್ಗಳೆಂದು ಗುರುತಿಸಿ ಸೈಬರ್ ಅಪರಾಧ ಸಂಬಂಧಿತ ಕೆಲಸಗಳಿಗೆ ಸೇನೆ ಹಾಗೂ ಪೊಲೀಸ್ರಿಗೆ ಅನುಕೂಲ ಕಲ್ಪಿಸಲು ತಯಾರು ಮಾಡಲಾಗುವುದು ಎಂದು ತಿಳಿಸಿದರು.</p><p>ಇತ್ತೀಚೆಗೆ ಸೈಬರ್ ಅಪರಾಧಗಳು ವ್ಯಾಪಕವಾಗುತ್ತಿವೆ. ಈ ನಿಟ್ಟಿನಲ್ಲಿ ಎಲ್ಲ ಕೆಡೆಟ್ಗಳಿಗೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಜಾಗೃತಿಯಲ್ಲಿ ಉತ್ತಮ ತಿಳಿವಳಿಕೆ ಹೊಂದಿರುವವರನ್ನು ಸೈಬರ್ ವಾರಿಯರ್ಗಳನ್ನಾಗಿ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.</p><p>ಈ ಸಾರಿ 809 ಹೆಣ್ಣು ಮಕ್ಕಳು ಸೇರಿ 2406 ಎನ್ಸಿಸಿ ಕೆಡೆಟ್ಗಳು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿನ ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಕೈ ಜೋಡಿಸುವುದಕ್ಕಾಗಿ ಎನ್ಸಿಸಿಯ (ನ್ಯಾಷನಲ್ ಕೆಡೆಟ್ ಕಾಪ್ಸ್) 1 ಲಕ್ಷ ಕೆಡೆಟ್ಗಳನ್ನು ಸಿದ್ದಗೊಳಿಸಲಾಗುತ್ತಿದೆ.</p><p>ಈ ಮಾಹಿತಿಯನ್ನು ದೆಹಲಿಯಲ್ಲಿ ಇಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಎನ್ಸಿಸಿಯ ಮಹಾ ನಿರ್ದೇಶಕ ಲೆಫ್ಟಿನಂಟ್ ಜನರಲ್ ವೀರೆಂದ್ರ ವತ್ಸಾ ಅವರು ತಿಳಿಸಿದರು.</p><p>ದೇಶದ ಐದು ಕಡೆಗೆ ಶಿಬಿರಗಳನ್ನು ಆಯೋಜಿಸಿ 1 ಲಕ್ಷ ಕೆಡೆಟ್ಗಳನ್ನು ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿನ ರಕ್ಷಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ವಿವರಿಸಿದರು.</p><p>ಇದರ ಜೊತೆ 10 ಸಾವಿರ ಕೆಡೆಟ್ಗಳನ್ನು ಸೈಬರ್ ವಾರಿಯರ್ಗಳೆಂದು ಗುರುತಿಸಿ ಸೈಬರ್ ಅಪರಾಧ ಸಂಬಂಧಿತ ಕೆಲಸಗಳಿಗೆ ಸೇನೆ ಹಾಗೂ ಪೊಲೀಸ್ರಿಗೆ ಅನುಕೂಲ ಕಲ್ಪಿಸಲು ತಯಾರು ಮಾಡಲಾಗುವುದು ಎಂದು ತಿಳಿಸಿದರು.</p><p>ಇತ್ತೀಚೆಗೆ ಸೈಬರ್ ಅಪರಾಧಗಳು ವ್ಯಾಪಕವಾಗುತ್ತಿವೆ. ಈ ನಿಟ್ಟಿನಲ್ಲಿ ಎಲ್ಲ ಕೆಡೆಟ್ಗಳಿಗೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಜಾಗೃತಿಯಲ್ಲಿ ಉತ್ತಮ ತಿಳಿವಳಿಕೆ ಹೊಂದಿರುವವರನ್ನು ಸೈಬರ್ ವಾರಿಯರ್ಗಳನ್ನಾಗಿ ಮಾಡಿಕೊಳ್ಳಲಾಗುವುದು ಎಂದು ವಿವರಿಸಿದರು.</p><p>ಈ ಸಾರಿ 809 ಹೆಣ್ಣು ಮಕ್ಕಳು ಸೇರಿ 2406 ಎನ್ಸಿಸಿ ಕೆಡೆಟ್ಗಳು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>