<p><strong>ನವದೆಹಲಿ</strong>: ಹೊಸ ಶಿಕ್ಷಣ ನೀತಿಗೆ (ಎಇಪಿ) ಅನುಗುಣವಾಗಿ ರೂಪಿಸಲಾಗಿರುವ ಪಠ್ಯಪುಸ್ತಕಗಳ ಕುರಿತು ಬಂದಿರುವ ಪ್ರತಿಕ್ರಿಯೆಗಳನ್ನು ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ನೇಮಿಸಿದೆ.</p>.<p>ಯಾವ ಪಠ್ಯಪುಸ್ತಕಕ್ಕೆ ಬಂದ ಪ್ರತಿಕ್ರಿಯೆಗಳ ಕುರಿತು ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ‘ಕೆಲವು ಪಠ್ಯಪುಸ್ತಕದಲ್ಲಿ ಇರುವ ಪಠ್ಯಗಳ ಕುರಿತು ಪ್ರತಿಕ್ರಿಯೆಗಳು ಬಂದಿವೆ. ಇದಕ್ಕಾಗಿ ಹಿರಿಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಶೀಘ್ರವೇ ವರದಿ ನೀಡಲಿದೆ’ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.</p>.<p>‘ನಾವು ಸಿದ್ಧಪಡಿಸಿದ ಪಠ್ಯಗಳ ಬಗ್ಗೆ ನಿರಂತರವಾಗಿ ಪ್ರತಿಕ್ರಿಯೆಗಳನ್ನು ಕೇಳುತ್ತೇವೆ. ಬಳಿಕ ತಜ್ಞರ ಸಮಿತಿ ರಚಿಸುತ್ತೇವೆ. ನಮ್ಮ ಕೆಲವು ಪಠ್ಯಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಬಂದಿವೆ. ಅಂತೆಯೇ ಈಗಲೂ ತಜ್ಞರ ಸಮಿತಿ ರಚಿಸಿದ್ದೇವೆ’ ಎಂದು ಹೇಳಿದರು.</p>.<p>‘ಎಕ್ಸ್ಪ್ಲೋರಿಂಗ್ ಸೊಸೈಟಿ: ಇಂಡಿಯಾ ಆ್ಯಂಡ್ ಬಿಯಾಂಡ್’ ಹೆಸರಿನ ಪಠ್ಯಪುಸ್ತಕವನ್ನು ಇತ್ತೀಚೆಗಷ್ಟೇ 8ನೇ ತರಗತಿಗಾಗಿ ಎನ್ಸಿಇಆರ್ಟಿ ಹೊಸದಾಗಿ ಸಿದ್ಧಪಡಿಸಿತ್ತು. ಈ ಪಠ್ಯಪುಸ್ತಕವು ಭಾರಿ ವಿವಾದಕ್ಕೂ ಕಾರಣವಾಗಿತ್ತು. ಅಕ್ಬರ್ ಆಡಳಿತವು ‘ಕ್ರೌರ್ಯ’ ಮತ್ತು ‘ಸಹಿಷ್ಣುತೆ’ಯ ಮಿಶ್ರಣವಾಗಿತ್ತು. ಬಾಬರ್ ಒಬ್ಬ ‘ನಿರ್ದಯಿ ರಾಜ’ನಾಗಿದ್ದ. ಮುಸ್ಲಿಮೇತರರ ಮೇಲೆ ತೆರಿಗೆಯನ್ನು ಮತ್ತೊಮ್ಮೆ ಹೇರಿದಂಥ ಔರಂಗಜೇಬ್ ಸೇನಾ ಆಡಳಿತಗಾರನಾಗಿದ್ದ ಎಂಬೆಲ್ಲಾ ವಿಚಾರಗಳನ್ನು ಪಠ್ಯದಲ್ಲಿ ಸೇರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೊಸ ಶಿಕ್ಷಣ ನೀತಿಗೆ (ಎಇಪಿ) ಅನುಗುಣವಾಗಿ ರೂಪಿಸಲಾಗಿರುವ ಪಠ್ಯಪುಸ್ತಕಗಳ ಕುರಿತು ಬಂದಿರುವ ಪ್ರತಿಕ್ರಿಯೆಗಳನ್ನು ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ನೇಮಿಸಿದೆ.</p>.<p>ಯಾವ ಪಠ್ಯಪುಸ್ತಕಕ್ಕೆ ಬಂದ ಪ್ರತಿಕ್ರಿಯೆಗಳ ಕುರಿತು ಸಮಿತಿ ರಚಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ‘ಕೆಲವು ಪಠ್ಯಪುಸ್ತಕದಲ್ಲಿ ಇರುವ ಪಠ್ಯಗಳ ಕುರಿತು ಪ್ರತಿಕ್ರಿಯೆಗಳು ಬಂದಿವೆ. ಇದಕ್ಕಾಗಿ ಹಿರಿಯ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ಶೀಘ್ರವೇ ವರದಿ ನೀಡಲಿದೆ’ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.</p>.<p>‘ನಾವು ಸಿದ್ಧಪಡಿಸಿದ ಪಠ್ಯಗಳ ಬಗ್ಗೆ ನಿರಂತರವಾಗಿ ಪ್ರತಿಕ್ರಿಯೆಗಳನ್ನು ಕೇಳುತ್ತೇವೆ. ಬಳಿಕ ತಜ್ಞರ ಸಮಿತಿ ರಚಿಸುತ್ತೇವೆ. ನಮ್ಮ ಕೆಲವು ಪಠ್ಯಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ಬಂದಿವೆ. ಅಂತೆಯೇ ಈಗಲೂ ತಜ್ಞರ ಸಮಿತಿ ರಚಿಸಿದ್ದೇವೆ’ ಎಂದು ಹೇಳಿದರು.</p>.<p>‘ಎಕ್ಸ್ಪ್ಲೋರಿಂಗ್ ಸೊಸೈಟಿ: ಇಂಡಿಯಾ ಆ್ಯಂಡ್ ಬಿಯಾಂಡ್’ ಹೆಸರಿನ ಪಠ್ಯಪುಸ್ತಕವನ್ನು ಇತ್ತೀಚೆಗಷ್ಟೇ 8ನೇ ತರಗತಿಗಾಗಿ ಎನ್ಸಿಇಆರ್ಟಿ ಹೊಸದಾಗಿ ಸಿದ್ಧಪಡಿಸಿತ್ತು. ಈ ಪಠ್ಯಪುಸ್ತಕವು ಭಾರಿ ವಿವಾದಕ್ಕೂ ಕಾರಣವಾಗಿತ್ತು. ಅಕ್ಬರ್ ಆಡಳಿತವು ‘ಕ್ರೌರ್ಯ’ ಮತ್ತು ‘ಸಹಿಷ್ಣುತೆ’ಯ ಮಿಶ್ರಣವಾಗಿತ್ತು. ಬಾಬರ್ ಒಬ್ಬ ‘ನಿರ್ದಯಿ ರಾಜ’ನಾಗಿದ್ದ. ಮುಸ್ಲಿಮೇತರರ ಮೇಲೆ ತೆರಿಗೆಯನ್ನು ಮತ್ತೊಮ್ಮೆ ಹೇರಿದಂಥ ಔರಂಗಜೇಬ್ ಸೇನಾ ಆಡಳಿತಗಾರನಾಗಿದ್ದ ಎಂಬೆಲ್ಲಾ ವಿಚಾರಗಳನ್ನು ಪಠ್ಯದಲ್ಲಿ ಸೇರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>