<p><strong>ನವದೆಹಲಿ: ‘</strong>ಭ್ರಷ್ಟಾಚಾರ, ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಾಗೂ ನ್ಯಾಯಾಧೀಶರ ಅಲಭ್ಯತೆ ಇದು ಪ್ರಸಕ್ತ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಪ್ರಮುಖ ಸವಾಲುಗಳು’ ಹೀಗೆಂದು ಎನ್ಸಿಇಆರ್ಟಿ ರೂಪಿಸರುವ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ.</p>.<p>ಈ ಹಿಂದಿನ ಪಠ್ಯದಲ್ಲಿ ನ್ಯಾಯಾಲಯಗಳ ಪಾತ್ರ, ರಚನೆಯ ಬಗ್ಗೆ ಗಮನಹರಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಪಠ್ಯದಲ್ಲಿ ‘ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಯದ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿವಿಧ ಸ್ತರ ಹಾಗೂ ನ್ಯಾಯ ಖಾತರಿಯ ವಿಚಾರ, ಸವಾಲುಗಳ ಬಗ್ಗೆ ಉಲ್ಲೇಖಿಸಲಾಗಿದೆ.</p>.<p>‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಪ್ರತ್ಯೇಕ ವಿಭಾಗದಲ್ಲಿ ‘ನ್ಯಾಯಾಲಯದ ಒಳಗೆ ಮಾತ್ರವಲ್ಲದೆ ಹೊರಗೂ ತಮ್ಮ ನಡವಳಿಗಳನ್ನು ನಿಯಂತ್ರಿಸುವ ನೀತಿ ಸಂಹಿತೆಗೆ ನ್ಯಾಯಾಧೀಶರು ಬದ್ಧರಾಗಿರುತ್ತಾರೆ’ ಎಂಬ ಅಂಶವನ್ನು ಹೇಳಲಾಗಿದೆ. </p>.<p>ನ್ಯಾಯಾಂಗದ ವಿವಿಧ ಹಂತಗಳಲ್ಲಿ ಜನರು ಭ್ರಷ್ಟಾಚಾರವನ್ನು ಎದುರಿಸಿದ್ದಾರೆ. ಇದು ಬಡವರಿಗೆ ನ್ಯಾಯ ಖಾತರಿಪಡಿಸಿಕೊಳ್ಳಲು ಅಡಚಣೆ ಉಂಟುಮಾಡಬಹುದಾಗಿದೆ. ಹೀಗಾಗಿ ಅವುಗಳನ್ನು ತಡೆಗಟ್ಟಿ ಜನರಲ್ಲಿ ವಿಶ್ವಾಸವನ್ನು ವೃದ್ಧಿಸಲು, ನ್ಯಾಯಾಂಗದಲ್ಲಿ ಪಾದರ್ಶಕತೆ ತರಲು ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಉಲ್ಲೇಖಿಸಲಾಗಿದೆ.</p>.<p>ಜತೆಗೆ ಸುಪ್ರೀಂ ಕೋರ್ಟ್ನಲ್ಲಿ 81 ಸಾವಿರ ಪ್ರಕರಣಗಳು ಬಾಕಿ ಉಳಿದಿದ್ದು, ಹೈಕೋರ್ಟ್ಗಳಲ್ಲಿ 62.40 ಲಕ್ಷ ಪ್ರಕರಣಗಳು, ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಲಯಗಳಲ್ಲಿ 4.70 ಕೋಟಿ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ ಎಂಬ ಅಂಶವನ್ನೂ ಪಠ್ಯ ಒಳಗೊಂಡಿದೆ.</p>.<p>ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 2025ರ ಜುಲೈನಲ್ಲಿ ಪಾದರ್ಶಕತೆ ಮತ್ತು ಹೊಣೆಗಾರಿಕೆ ಕುರಿತಂತೆ ಹೇಳಿದ್ದ ಹೇಳಿಕೆಯನ್ನೂ ಪಠ್ಯ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಭ್ರಷ್ಟಾಚಾರ, ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಾಗೂ ನ್ಯಾಯಾಧೀಶರ ಅಲಭ್ಯತೆ ಇದು ಪ್ರಸಕ್ತ ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಪ್ರಮುಖ ಸವಾಲುಗಳು’ ಹೀಗೆಂದು ಎನ್ಸಿಇಆರ್ಟಿ ರೂಪಿಸರುವ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ.</p>.<p>ಈ ಹಿಂದಿನ ಪಠ್ಯದಲ್ಲಿ ನ್ಯಾಯಾಲಯಗಳ ಪಾತ್ರ, ರಚನೆಯ ಬಗ್ಗೆ ಗಮನಹರಿಸಲಾಗಿತ್ತು. ಆದರೆ ಈಗ ಪರಿಷ್ಕೃತ ಪಠ್ಯದಲ್ಲಿ ‘ಸಮಾಜದಲ್ಲಿ ನ್ಯಾಯಾಂಗದ ಪಾತ್ರ’ ಎಂಬ ಅಧ್ಯಯದ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿವಿಧ ಸ್ತರ ಹಾಗೂ ನ್ಯಾಯ ಖಾತರಿಯ ವಿಚಾರ, ಸವಾಲುಗಳ ಬಗ್ಗೆ ಉಲ್ಲೇಖಿಸಲಾಗಿದೆ.</p>.<p>‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ಪ್ರತ್ಯೇಕ ವಿಭಾಗದಲ್ಲಿ ‘ನ್ಯಾಯಾಲಯದ ಒಳಗೆ ಮಾತ್ರವಲ್ಲದೆ ಹೊರಗೂ ತಮ್ಮ ನಡವಳಿಗಳನ್ನು ನಿಯಂತ್ರಿಸುವ ನೀತಿ ಸಂಹಿತೆಗೆ ನ್ಯಾಯಾಧೀಶರು ಬದ್ಧರಾಗಿರುತ್ತಾರೆ’ ಎಂಬ ಅಂಶವನ್ನು ಹೇಳಲಾಗಿದೆ. </p>.<p>ನ್ಯಾಯಾಂಗದ ವಿವಿಧ ಹಂತಗಳಲ್ಲಿ ಜನರು ಭ್ರಷ್ಟಾಚಾರವನ್ನು ಎದುರಿಸಿದ್ದಾರೆ. ಇದು ಬಡವರಿಗೆ ನ್ಯಾಯ ಖಾತರಿಪಡಿಸಿಕೊಳ್ಳಲು ಅಡಚಣೆ ಉಂಟುಮಾಡಬಹುದಾಗಿದೆ. ಹೀಗಾಗಿ ಅವುಗಳನ್ನು ತಡೆಗಟ್ಟಿ ಜನರಲ್ಲಿ ವಿಶ್ವಾಸವನ್ನು ವೃದ್ಧಿಸಲು, ನ್ಯಾಯಾಂಗದಲ್ಲಿ ಪಾದರ್ಶಕತೆ ತರಲು ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದೂ ಉಲ್ಲೇಖಿಸಲಾಗಿದೆ.</p>.<p>ಜತೆಗೆ ಸುಪ್ರೀಂ ಕೋರ್ಟ್ನಲ್ಲಿ 81 ಸಾವಿರ ಪ್ರಕರಣಗಳು ಬಾಕಿ ಉಳಿದಿದ್ದು, ಹೈಕೋರ್ಟ್ಗಳಲ್ಲಿ 62.40 ಲಕ್ಷ ಪ್ರಕರಣಗಳು, ಜಿಲ್ಲಾ ಮತ್ತು ಕೆಳ ಹಂತದ ನ್ಯಾಯಾಲಯಗಳಲ್ಲಿ 4.70 ಕೋಟಿ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ ಎಂಬ ಅಂಶವನ್ನೂ ಪಠ್ಯ ಒಳಗೊಂಡಿದೆ.</p>.<p>ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು 2025ರ ಜುಲೈನಲ್ಲಿ ಪಾದರ್ಶಕತೆ ಮತ್ತು ಹೊಣೆಗಾರಿಕೆ ಕುರಿತಂತೆ ಹೇಳಿದ್ದ ಹೇಳಿಕೆಯನ್ನೂ ಪಠ್ಯ ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>