<p><strong>ತಿರುವನಂತಪುರ</strong>: ಬಾಬರಿ ಮಸೀದಿ ಧ್ವಂಸದ ವಿಷಯವನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ಕೇರಳದ ಸಚಿವ ಎಂ.ಬಿ. ರಾಜೇಶ್ ಟೀಕಿಸಿದ್ದು ‘ಸರ್ಕಾರದ ಎಲ್ಲ ವ್ಯವಸ್ಥೆಯನ್ನು ಕೋಮುವಾದಗೊಳಿಸುವ ಕ್ರಮವಿದು, ಇದರ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು‘ ಎಂದು ಹೇಳಿದ್ದಾರೆ.</p>.<p>‘ಕಳೆದ 10 ವರ್ಷದಿಂದಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಂತಹದ್ದೇ ಕೆಲಸಗಳನ್ನು ಮಾಡುತ್ತಿದೆ. ಅವರ ಈ ಕ್ರಮದ ಹಿಂದೆ ಯಾವುದೇ ಅಜೆಂಡಾ ಇಲ್ಲ’ ಎಂದು ಸಿಪಿಎಂ ನಾಯಕರೂ ಆಗಿರುವ ರಾಜೇಶ್ ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಬಿಜೆಪಿಗೆ ಸ್ಥಾನಗಳು ಕಡಿಮೆಯಾಗಿದ್ದರೂ, ಸ್ವತಂತ್ರವಾಗಿ ಆಡಳಿತ ನಡೆಸುವಷ್ಟು ಬಹುಮತ ಇಲ್ಲದಿದ್ದರೂ, ಸಂಘ ಪರಿವಾರ ತನ್ನ ಕೋಮು ಕಾರ್ಯಸೂಚಿಯಿಂದ ಹಿಂದೆ ಸರಿಯುತ್ತಿಲ್ಲ ಎಂಬುದನ್ನು ಎನ್ಸಿಇಆರ್ಟಿಯ ಪ್ರಸ್ತುತ ಕ್ರಮವು ಸಾಬೀತುಪಡಿಸಿದೆ ಎಂದು ಅವರು ಟೀಕಿಸಿದ್ದಾರೆ. </p>.<p>‘ಇದು ಎಲ್ಲರಿಗೂ ಎಚ್ಚರಿಕೆ. ಪಠ್ಯಪುಸ್ತಕಗಳು ಮತ್ತು ಸರ್ಕಾರದ ಎಲ್ಲ ವ್ಯವಸ್ಥೆಯನ್ನು ಕೋಮುವಾದಗೊಳಿಸುವ ಸಂಘ ಪರಿವಾರ ಮತ್ತು ಎಲ್ಲ ಪ್ರಯತ್ನಗಳ ವಿರುದ್ಧ ಹೋರಾಟ ಮುಂದುವರಿಸಬೇಕಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಬಾಬರಿ ಮಸೀದಿ ಧ್ವಂಸದ ವಿಷಯವನ್ನು ಶಾಲಾ ಪಠ್ಯದಿಂದ ಕೈಬಿಟ್ಟಿರುವುದನ್ನು ಕೇರಳದ ಸಚಿವ ಎಂ.ಬಿ. ರಾಜೇಶ್ ಟೀಕಿಸಿದ್ದು ‘ಸರ್ಕಾರದ ಎಲ್ಲ ವ್ಯವಸ್ಥೆಯನ್ನು ಕೋಮುವಾದಗೊಳಿಸುವ ಕ್ರಮವಿದು, ಇದರ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು‘ ಎಂದು ಹೇಳಿದ್ದಾರೆ.</p>.<p>‘ಕಳೆದ 10 ವರ್ಷದಿಂದಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಂತಹದ್ದೇ ಕೆಲಸಗಳನ್ನು ಮಾಡುತ್ತಿದೆ. ಅವರ ಈ ಕ್ರಮದ ಹಿಂದೆ ಯಾವುದೇ ಅಜೆಂಡಾ ಇಲ್ಲ’ ಎಂದು ಸಿಪಿಎಂ ನಾಯಕರೂ ಆಗಿರುವ ರಾಜೇಶ್ ತಿಳಿಸಿದ್ದಾರೆ.</p>.<p>ಲೋಕಸಭೆಯಲ್ಲಿ ಬಿಜೆಪಿಗೆ ಸ್ಥಾನಗಳು ಕಡಿಮೆಯಾಗಿದ್ದರೂ, ಸ್ವತಂತ್ರವಾಗಿ ಆಡಳಿತ ನಡೆಸುವಷ್ಟು ಬಹುಮತ ಇಲ್ಲದಿದ್ದರೂ, ಸಂಘ ಪರಿವಾರ ತನ್ನ ಕೋಮು ಕಾರ್ಯಸೂಚಿಯಿಂದ ಹಿಂದೆ ಸರಿಯುತ್ತಿಲ್ಲ ಎಂಬುದನ್ನು ಎನ್ಸಿಇಆರ್ಟಿಯ ಪ್ರಸ್ತುತ ಕ್ರಮವು ಸಾಬೀತುಪಡಿಸಿದೆ ಎಂದು ಅವರು ಟೀಕಿಸಿದ್ದಾರೆ. </p>.<p>‘ಇದು ಎಲ್ಲರಿಗೂ ಎಚ್ಚರಿಕೆ. ಪಠ್ಯಪುಸ್ತಕಗಳು ಮತ್ತು ಸರ್ಕಾರದ ಎಲ್ಲ ವ್ಯವಸ್ಥೆಯನ್ನು ಕೋಮುವಾದಗೊಳಿಸುವ ಸಂಘ ಪರಿವಾರ ಮತ್ತು ಎಲ್ಲ ಪ್ರಯತ್ನಗಳ ವಿರುದ್ಧ ಹೋರಾಟ ಮುಂದುವರಿಸಬೇಕಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>