<p><strong>ನವದೆಹಲಿ</strong>: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿರುವ ವಿಶೇಷ ಪಠ್ಯದ ಮಾದರಿ ವಿರುದ್ಧ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಮಂಗಳವಾರ ಪ್ರತಿಭಟನೆ ನಡೆಸಿತು.</p>.<p>ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ ಎನ್ಎಸ್ಯುಐ, ‘ಬಿಜೆಪಿ, ಆರ್ಎಸ್ಎಸ್ ಸೇರಿ ಎನ್ಸಿಇಆರ್ಟಿ ಪಠ್ಯ ಮಾದರಿಯನ್ನು ತಿರುಚಿವೆ’ ಎಂದು ಆರೋಪಿಸಿತು. ಭಾರತೀಯ ಸ್ವಾತಂತ್ರ್ಯ ಹೋರಾಟದ ನೈಜ ಪರಂಪರೆಯನ್ನು ರಕ್ಷಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>ಎನ್ಸಿಇಆರ್ಟಿಯು ‘ದೇಶ ವಿಭಜನೆಯ ಕರಾಳ ದಿನ’ ಎಂಬ ವಿಶೇಷ ಪಠ್ಯ ಮಾದರಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಭಾರತ ವಿಭಜನೆಗೆ ಕಾಂಗ್ರೆಸ್, ಮಹಮ್ಮದ್ ಅಲಿ ಜಿನ್ನಾ ಮತ್ತು ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರೇ ಕಾರಣ’ ಎಂದು ಉಲ್ಲೇಖಿಸಿದೆ.</p>.<p>ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ, ‘ಭಾರತದ ಇತಿಹಾಸವನ್ನು ಸುಳ್ಳು ಮತ್ತು ದ್ವೇಷದಿಂದ ಬರೆಯಲು ಸಾಧ್ಯವಿಲ್ಲ. ಭಾರತವು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ, ‘ಇವರು’ ಬ್ರಿಟಿಷರ ಪರ ಇದ್ದರು’ ಎಂದು ಹೇಳಿದರು.</p>.<p>‘ಅದೇ ದೇಶದ್ರೋಹಿಗಳು ಇಂದು ಸುಳ್ಳು ಕತೆ ಕಟ್ಟಿ ಗಾಂಧಿ, ನೆಹರೂ ಮತ್ತು ಸರ್ದಾರ್ ಪಟೇಲ್ ಅವರನ್ನು ದೂರುತ್ತಿದ್ದಾರೆ. ದೇಶದ ಮುಗ್ಧ ಮಕ್ಕಳು ಆರ್ಎಸ್ಎಸ್ ಮತ್ತು ಬಿಜೆಪಿಯ ತಿರುಚಿದ ಇತಿಹಾಸ ಓದಿ, ಸಂತ್ರಸ್ತರಾಗಲು ಅವಕಾಶ ನೀಡುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿರುವ ವಿಶೇಷ ಪಠ್ಯದ ಮಾದರಿ ವಿರುದ್ಧ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್ಎಸ್ಯುಐ) ಮಂಗಳವಾರ ಪ್ರತಿಭಟನೆ ನಡೆಸಿತು.</p>.<p>ದೆಹಲಿ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದ ಎನ್ಎಸ್ಯುಐ, ‘ಬಿಜೆಪಿ, ಆರ್ಎಸ್ಎಸ್ ಸೇರಿ ಎನ್ಸಿಇಆರ್ಟಿ ಪಠ್ಯ ಮಾದರಿಯನ್ನು ತಿರುಚಿವೆ’ ಎಂದು ಆರೋಪಿಸಿತು. ಭಾರತೀಯ ಸ್ವಾತಂತ್ರ್ಯ ಹೋರಾಟದ ನೈಜ ಪರಂಪರೆಯನ್ನು ರಕ್ಷಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>ಎನ್ಸಿಇಆರ್ಟಿಯು ‘ದೇಶ ವಿಭಜನೆಯ ಕರಾಳ ದಿನ’ ಎಂಬ ವಿಶೇಷ ಪಠ್ಯ ಮಾದರಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ‘ಭಾರತ ವಿಭಜನೆಗೆ ಕಾಂಗ್ರೆಸ್, ಮಹಮ್ಮದ್ ಅಲಿ ಜಿನ್ನಾ ಮತ್ತು ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರೇ ಕಾರಣ’ ಎಂದು ಉಲ್ಲೇಖಿಸಿದೆ.</p>.<p>ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ವರುಣ್ ಚೌಧರಿ, ‘ಭಾರತದ ಇತಿಹಾಸವನ್ನು ಸುಳ್ಳು ಮತ್ತು ದ್ವೇಷದಿಂದ ಬರೆಯಲು ಸಾಧ್ಯವಿಲ್ಲ. ಭಾರತವು ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದಾಗ, ‘ಇವರು’ ಬ್ರಿಟಿಷರ ಪರ ಇದ್ದರು’ ಎಂದು ಹೇಳಿದರು.</p>.<p>‘ಅದೇ ದೇಶದ್ರೋಹಿಗಳು ಇಂದು ಸುಳ್ಳು ಕತೆ ಕಟ್ಟಿ ಗಾಂಧಿ, ನೆಹರೂ ಮತ್ತು ಸರ್ದಾರ್ ಪಟೇಲ್ ಅವರನ್ನು ದೂರುತ್ತಿದ್ದಾರೆ. ದೇಶದ ಮುಗ್ಧ ಮಕ್ಕಳು ಆರ್ಎಸ್ಎಸ್ ಮತ್ತು ಬಿಜೆಪಿಯ ತಿರುಚಿದ ಇತಿಹಾಸ ಓದಿ, ಸಂತ್ರಸ್ತರಾಗಲು ಅವಕಾಶ ನೀಡುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>