ಬೆಳಿಗ್ಗೆಯಿಂದಲೇ ಪಕ್ಷದ ಕಚೇರಿ ಮುಂದೆ ಜಮಾಯಿಸಿರುವ ಎನ್ಸಿಪಿ ಕಾರ್ಯಕರ್ತರು, ಅಭಿಮಾನಿಗಳು, ಶರದ್ ಪವಾರ್ ಹುದ್ದೆ ತೊರೆಯಬಾರದು ಎಂದು ಆಗ್ರಹಿಸಿದ್ದಾರೆ.
ಎನ್ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ಘೋಷಿಸಿದ ಎರಡು ದಿನಗಳ ನಂತರ ಅವರ ಉತ್ತರಾಧಿಕಾರಿ ಸ್ಥಾನವನ್ನು ಅಜಿತ್ ಪವಾರ್ ಅಥವಾ ಸುಪ್ರಿಯಾ ಸುಳೆ ಅಥವಾ ಕುಟುಂಬದ ಹೊರಗಿನವರು ವಹಿಸಿಕೊಳ್ಳಬಹುದಾ? ಎನ್ನುವ ಕುತೂಹಲವನ್ನು ಶುಕ್ರವಾರ ಸಭೆ ಹೆಚ್ಚಿಸಿತ್ತು. ಆದರೆ, ಶರದ್ ಪವಾರ್ ಅವರ ಮುಂದಿನ ನಡೆ ಏನಿರಬಹುದು ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ.
ಮಹಾರಾಷ್ಟ್ರ ರಾಜ್ಯ ರಾಜಕಾರಣದಲ್ಲಿ ಕಳೆದ 24 ವರ್ಷಗಳಿಂದ ಪ್ರಮುಖ ಪಾತ್ರ ವಹಿಸಿರುವ ಶರದ್ ಪವಾರ್ ಅವರು, ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಕುರಿತು ಅಷ್ಟೊಂದು ಆಸಕ್ತಿ ತೋರಿಸುತ್ತಿಲ್ಲ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ತಮ್ಮ ಉತ್ತರಾಧಿಕಾರಿ ಆಯ್ಕೆಗೆ ಅವರು ಸಮಿತಿ ರಚಿಸಿದ್ದರು.