<p><strong>ಮುಂಬೈ</strong>: ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಬಾಬಾ ಸಿದ್ಧೀಕಿ ಅವರ ಹತ್ಯೆ ಪ್ರಕರಣ ಸಂಬಂಧ ಮುಂಬೈ ಪೊಲೀಸರು, ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆಯನ್ನು (ಎಂಸಿಒಸಿಎ) ಶನಿವಾರ ಜಾರಿಗೊಳಿಸಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಸಚಿವರೂ ಆದ ಸಿದ್ಧೀಕಿ ಅವರನ್ನು ಅಕ್ಟೋಬರ್ 12ರಂದು ರಾತ್ರಿ ಹತ್ಯೆ ಮಾಡಲಾಗಿತ್ತು. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ತಮ್ಮ ಮಗ ಹಾಗೂ ಕಾಂಗ್ರೆಸ್ ಶಾಸಕ ಜೀಶನ್ ಅವರ ಕಚೇರಿಯಿಂದ ಹೊರಗೆ ಬಂದಾಗ ಸಿದ್ದೀಕಿ ಮೇಲೆ ಗುಂಡಿನ ದಾಳಿ ನಡೆದಿತ್ತು.</p><p>ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದರು.</p><p>ಪ್ರಕರಣ ಸಂಬಂಧ ಈವರೆಗೆ 26 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.ಮಹಾರಾಷ್ಟ್ರ ಚುನಾವಣೆ: ಹತ್ಯೆಯಾದ ಬಾಬಾ ಸಿದ್ದಿಕಿ ಮಗನಿಗೆ ಮುಂಬೈನಲ್ಲಿ ಸೋಲು.ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ: 25ನೇ ಆರೋಪಿ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಅಜಿತ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಬಾಬಾ ಸಿದ್ಧೀಕಿ ಅವರ ಹತ್ಯೆ ಪ್ರಕರಣ ಸಂಬಂಧ ಮುಂಬೈ ಪೊಲೀಸರು, ಮಹಾರಾಷ್ಟ್ರ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆಯನ್ನು (ಎಂಸಿಒಸಿಎ) ಶನಿವಾರ ಜಾರಿಗೊಳಿಸಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಸಚಿವರೂ ಆದ ಸಿದ್ಧೀಕಿ ಅವರನ್ನು ಅಕ್ಟೋಬರ್ 12ರಂದು ರಾತ್ರಿ ಹತ್ಯೆ ಮಾಡಲಾಗಿತ್ತು. ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ತಮ್ಮ ಮಗ ಹಾಗೂ ಕಾಂಗ್ರೆಸ್ ಶಾಸಕ ಜೀಶನ್ ಅವರ ಕಚೇರಿಯಿಂದ ಹೊರಗೆ ಬಂದಾಗ ಸಿದ್ದೀಕಿ ಮೇಲೆ ಗುಂಡಿನ ದಾಳಿ ನಡೆದಿತ್ತು.</p><p>ಕೂಡಲೇ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದರು.</p><p>ಪ್ರಕರಣ ಸಂಬಂಧ ಈವರೆಗೆ 26 ಮಂದಿಯನ್ನು ಬಂಧಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.</p>.ಮಹಾರಾಷ್ಟ್ರ ಚುನಾವಣೆ: ಹತ್ಯೆಯಾದ ಬಾಬಾ ಸಿದ್ದಿಕಿ ಮಗನಿಗೆ ಮುಂಬೈನಲ್ಲಿ ಸೋಲು.ಎನ್ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ: 25ನೇ ಆರೋಪಿ ಬಂಧನ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>