<p><strong>ಮುಂಬೈ:</strong> ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಎರಡು ಬಣಗಳು ಶೀಘ್ರದಲ್ಲೇ ಒಂದಾಗಲಿವೆ ಎಂಬುದು ವದಂತಿಯಷ್ಟೇ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ಚಂದ್ರಕಾಂತ್ ಪಾಟೀಲ್ ಬುಧವಾರ ಹೇಳಿದ್ದಾರೆ.</p><p>ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಹಾಗೂ ಶರದ್ ಪವಾರ್ ಅವರ ಎನ್ಸಿಪಿ (ಎಸ್ಪಿ) ಬಣಗಳು ಒಂದಾಗಲಿವೆ ಎಂಬ ಸುದ್ದಿ ಹರಿದಾಡಿತ್ತು.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಚಂದ್ರಕಾಂತ್ ಪಾಟೀಲ್, 'ವೀಲಿನದ ವದಂತಿಗಳು ಯಾವುದೇ ರೂಪ ಪಡೆದುಕೊಂಡಿಲ್ಲ. ಅವು ಊಹಾಪೋಹವಾಗಿಯೇ ಉಳಿದಿದ್ದು, ಕಾರ್ಯರೂಪಗೊಳ್ಳುವ ನಿಟ್ಟಿನಲ್ಲಿ ಏನೂ ಆಗಿಲ್ಲ' ಎಂದು ಹೇಳಿದ್ದಾರೆ.</p><p>ಎನ್ಸಿಪಿಯಲ್ಲಿ ಒಡಕು ಮೂಡುವ ಮುನ್ನ, ಶರದ್ ಪವಾರ್, ಅವರ ಮಗಳು ಸುಪ್ರಿಯಾ ಸುಳೆ ಮತ್ತು ಅವರ ಸಂಬಂಧಿ ಅಜಿತ್ ಪವಾರ್ ಅವರು ಪಕ್ಷದಲ್ಲಿ ಪ್ರಭಾವ ಹೊಂದಿದ್ದರು ಎಂದಿದ್ದಾರೆ.</p><p>ಶರದ್ ಪವಾರ್ ಅವರು 1999ರಲ್ಲಿ ಎನ್ಸಿಪಿ ಸ್ಥಾಪಿಸಿದ್ದರು. ಆದರೆ, ಶರದ್ ಅವರ ಸಂಬಂಧಿಯೂ ಆಗಿರುವ ಅಜಿತ್ ಪವಾರ್ ಅವರು 2023ರ ಜುಲೈನಲ್ಲಿ ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ, ಶಿವಸೇನಾ ನೇತೃತ್ವದ 'ಮಹಾಯುತಿ' ಮೈತ್ರಿ ಸರ್ಕಾರದೊಂದಿಗೆ ಕೈಜೋಡಿಸುವ ಮೂಲಕ ಪಕ್ಷದಲ್ಲಿ ಒಡಕು ಮೂಡಿತ್ತು.</p><p>ಕಾನೂನು ಸಮರದ ಬಳಿಕ, 2024ರ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಅಧಿಕೃತ ಹೆಸರು, ಚಿಹ್ನೆ ಅಜಿತ್ ಪವಾರ್ ಬಣಕ್ಕೆ ಒಲಿದಿದ್ದವು. ಶರದ್ ಬಣಕ್ಕೆ ಎನ್ಸಿಪಿ (ಶರದ್ಚಂದ್ರ ಪವಾರ್) ಎಂಬ ಹೆಸರು ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಎರಡು ಬಣಗಳು ಶೀಘ್ರದಲ್ಲೇ ಒಂದಾಗಲಿವೆ ಎಂಬುದು ವದಂತಿಯಷ್ಟೇ ಎಂದು ಮಹಾರಾಷ್ಟ್ರ ಸಚಿವ ಮತ್ತು ಬಿಜೆಪಿ ನಾಯಕ ಚಂದ್ರಕಾಂತ್ ಪಾಟೀಲ್ ಬುಧವಾರ ಹೇಳಿದ್ದಾರೆ.</p><p>ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಹಾಗೂ ಶರದ್ ಪವಾರ್ ಅವರ ಎನ್ಸಿಪಿ (ಎಸ್ಪಿ) ಬಣಗಳು ಒಂದಾಗಲಿವೆ ಎಂಬ ಸುದ್ದಿ ಹರಿದಾಡಿತ್ತು.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಚಂದ್ರಕಾಂತ್ ಪಾಟೀಲ್, 'ವೀಲಿನದ ವದಂತಿಗಳು ಯಾವುದೇ ರೂಪ ಪಡೆದುಕೊಂಡಿಲ್ಲ. ಅವು ಊಹಾಪೋಹವಾಗಿಯೇ ಉಳಿದಿದ್ದು, ಕಾರ್ಯರೂಪಗೊಳ್ಳುವ ನಿಟ್ಟಿನಲ್ಲಿ ಏನೂ ಆಗಿಲ್ಲ' ಎಂದು ಹೇಳಿದ್ದಾರೆ.</p><p>ಎನ್ಸಿಪಿಯಲ್ಲಿ ಒಡಕು ಮೂಡುವ ಮುನ್ನ, ಶರದ್ ಪವಾರ್, ಅವರ ಮಗಳು ಸುಪ್ರಿಯಾ ಸುಳೆ ಮತ್ತು ಅವರ ಸಂಬಂಧಿ ಅಜಿತ್ ಪವಾರ್ ಅವರು ಪಕ್ಷದಲ್ಲಿ ಪ್ರಭಾವ ಹೊಂದಿದ್ದರು ಎಂದಿದ್ದಾರೆ.</p><p>ಶರದ್ ಪವಾರ್ ಅವರು 1999ರಲ್ಲಿ ಎನ್ಸಿಪಿ ಸ್ಥಾಪಿಸಿದ್ದರು. ಆದರೆ, ಶರದ್ ಅವರ ಸಂಬಂಧಿಯೂ ಆಗಿರುವ ಅಜಿತ್ ಪವಾರ್ ಅವರು 2023ರ ಜುಲೈನಲ್ಲಿ ತಮ್ಮ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿ, ಶಿವಸೇನಾ ನೇತೃತ್ವದ 'ಮಹಾಯುತಿ' ಮೈತ್ರಿ ಸರ್ಕಾರದೊಂದಿಗೆ ಕೈಜೋಡಿಸುವ ಮೂಲಕ ಪಕ್ಷದಲ್ಲಿ ಒಡಕು ಮೂಡಿತ್ತು.</p><p>ಕಾನೂನು ಸಮರದ ಬಳಿಕ, 2024ರ ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಅಧಿಕೃತ ಹೆಸರು, ಚಿಹ್ನೆ ಅಜಿತ್ ಪವಾರ್ ಬಣಕ್ಕೆ ಒಲಿದಿದ್ದವು. ಶರದ್ ಬಣಕ್ಕೆ ಎನ್ಸಿಪಿ (ಶರದ್ಚಂದ್ರ ಪವಾರ್) ಎಂಬ ಹೆಸರು ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>