2005–06ರಲ್ಲಿನ ಪ್ರಕರಣ ಇದಾಗಿದ್ದು, ಛಗನ್ ಭುಜಬಲ್ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ನಿರ್ಮಾಣದ ಗುತ್ತಿಗೆಯನ್ನು ಕಂಪನಿಯೊಂದಕ್ಕೆ ನೀಡಿದ್ದರು. ಗುತ್ತಿಗೆ ಪಡೆದ ಕಂಪನಿ ಶೇಕಡ 80ರಷ್ಟು ಲಾಭ ಮಾಡಿಕೊಂಡಿದೆ. ಆದರೆ, ಸರ್ಕಾರದ ಸುತ್ತೋಲೆ ಅನ್ವಯ ಶೇಕಡ 20ರಷ್ಟು ಮಾತ್ರ ಗುತ್ತಿಗೆದಾರರು ಲಾಭ ಮಾಡಿಕೊಳ್ಳಲು ಅವಕಾಶವಿದೆ ಎಂದು ಎಸಿಬಿ ಆರೋಪಿಸಿತ್ತು.