ಮುಂಬೈ: ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರಕದೆ ಹೋಗಿದ್ದಕ್ಕೆ ಅಸಮಾಧಾನಗೊಂಡಿರುವ ಎನ್ಸಿಪಿ ಶಾಸಕ ಪ್ರಕಾಶ್ ಸೋಲಂಕಿ, ರಾಜೀನಾಮೆ ನೀಡುವುದಿಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಎನ್ಸಿಪಿ ರಾಜ್ಯ ಘಟಕ ಮುಖ್ಯಸ್ಥ ಜಯಂತ್ ಪಾಟೀಲ್ ಅವರನ್ನು ಭೇಟಿಯಾದ ಬಳಿಕ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.
‘ನಾಲ್ಕು ಬಾರಿ ಶಾಸಕನಾಗಿರುವುದರಿಂದ, ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವೇಳೆ ‘ನ್ಯಾಯ’ ದೊರಕಬಹುದು’ ಎಂದು ಅವರು ಹೇಳಿದ್ದಾರೆ.