ಎಂವಿಎ ಅಂಗ ಪಕ್ಷ ಆಗಿರುವ ಎನ್ಸಿಪಿಯ ಮುಖಂಡ ಹಾಗೂ ಸಚಿವ ನವಾಬ್ ಮಲಿಕ್, ‘ಮೈತ್ರಿಕೂಟದ ಮೂರೂ ಪಕ್ಷಗಳು ಒಗ್ಗಟ್ಟಾಗಿದ್ದು, ಸರ್ಕಾರ ಸದೃಢವಾಗಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲಾಗುತ್ತದೆ ಎಂಬ ವದಂತಿ ಹಬ್ಬಿಸುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ’ ಎಂದು ಟಿ.ವಿ. ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಟೀಕಿಸಿದ್ದಾರೆ.