ಎನ್ಸಿಪಿಸಿಆರ್ ಅಧ್ಯಕ್ಷ ಪ್ರಿಯಾಂಕ್ ಕಾನೂನ್ಗೋ ಅವರು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ, ಮುಸ್ಲಿಂಯೇತರ ಸಮುದಾಯಗಳಿಗೆ ಸೇರಿದ ಮಕ್ಕಳು ಸರ್ಕಾರಿ ಅನುದಾನಿತ ಅಥವಾ ಮಾನ್ಯತೆ ಪಡೆದ ಮದರಸಾಗಳಲ್ಲಿ ಪ್ರವೇಶ ಪಡೆಯುತ್ತಿದ್ದು, ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಂತಹ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೂ ನೀಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದ್ದಾರೆ.