<p><strong>ನವದೆಹಲಿ</strong>: ಎನ್ಡಿಎ ಸರ್ಕಾರವು ಬಡವರಿಂದ ಕಸಿದುಕೊಂಡು ಶ್ರೀಮಂತರಿಗೆ ನೀಡುವ ಕಲೆಯನ್ನು ಕರಗತ ಮಾಡಿಕೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಇಂದು (ಶುಕ್ರವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಬ್ಯಾನರ್ಜಿ, ಕೇಂದ್ರ ಸರ್ಕಾರವು ಆರ್ಥಿಕ ನ್ಯಾಯದಲ್ಲಿ ನಂಬಿಕೆ ಹೊಂದಿಲ್ಲ, ಬದಲಿಗೆ ಆರ್ಥಿಕ ಪಕ್ಷಪಾತದಲ್ಲಿ ನಂಬಿಕೆ ಹೊಂದಿದೆ ಎಂದು ಹೇಳಿದ್ದಾರೆ.</p><p>‘ಎನ್ಡಿಎ ಸರ್ಕಾರದಲ್ಲಿ ಒಂದು ಮಾದರಿ ಇದೆ. ಅದರನ್ವಯ ಸರ್ಕಾರವು ಬಡವರಿಂದ ಕಸಿದುಕೊಂಡು ಶ್ರೀಮಂತರಿಗೆ ನೀಡುವ ಕಲೆಯನ್ನು ಕರಗತ ಮಾಡಿಕೊಂಡಿದೆ. ಬಡ ರೈತರು ಸಾಲಬಾಧೆಯಿಂದ ಬಳಲುತ್ತಿರುವಾಗ ಕಾರ್ಪೊರೇಟ್ ಸಾಲಗಳನ್ನು ಮನ್ನಾ ಮಾಡುವುದು ಇದಕ್ಕೆ ಒಂದು ಉದಾಹರಣೆಯಾಗಿದೆ’ ಎಂದು ಅಭಿಷೇಕ್ ವಾಗ್ದಾಳಿ ನಡೆಸಿದ್ದಾರೆ.</p><p>‘ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿಗಳನ್ನು ಹೆಚ್ಚಿಸಲು ಹಣವಿಲ್ಲ ಎಂದು ಸರ್ಕಾರ ಹೇಳಿಕೊಳ್ಳುತ್ತದೆ. ಆದರೆ, ಕಾರ್ಪೊರೇಟ್ ತೆರಿಗೆ ದರಗಳನ್ನು ಕಡಿತಗೊಳಿಸುತ್ತದೆ. ಇದರಿಂದಾಗಿ ಕೋಟ್ಯಧಿಪತಿಗಳಿಗೆ ಹೆಚ್ಚಿನ ಲಾಭವಾಗುತ್ತದೆ. ಇದು ಆರ್ಥಿಕ ನ್ಯಾಯವಲ್ಲ, ಅತ್ಯಂತ ಕೆಟ್ಟ ಆರ್ಥಿಕ ಪಕ್ಷಪಾತವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎನ್ಡಿಎ ಸರ್ಕಾರವು ಬಡವರಿಂದ ಕಸಿದುಕೊಂಡು ಶ್ರೀಮಂತರಿಗೆ ನೀಡುವ ಕಲೆಯನ್ನು ಕರಗತ ಮಾಡಿಕೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.</p><p>ಇಂದು (ಶುಕ್ರವಾರ) ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ಬ್ಯಾನರ್ಜಿ, ಕೇಂದ್ರ ಸರ್ಕಾರವು ಆರ್ಥಿಕ ನ್ಯಾಯದಲ್ಲಿ ನಂಬಿಕೆ ಹೊಂದಿಲ್ಲ, ಬದಲಿಗೆ ಆರ್ಥಿಕ ಪಕ್ಷಪಾತದಲ್ಲಿ ನಂಬಿಕೆ ಹೊಂದಿದೆ ಎಂದು ಹೇಳಿದ್ದಾರೆ.</p><p>‘ಎನ್ಡಿಎ ಸರ್ಕಾರದಲ್ಲಿ ಒಂದು ಮಾದರಿ ಇದೆ. ಅದರನ್ವಯ ಸರ್ಕಾರವು ಬಡವರಿಂದ ಕಸಿದುಕೊಂಡು ಶ್ರೀಮಂತರಿಗೆ ನೀಡುವ ಕಲೆಯನ್ನು ಕರಗತ ಮಾಡಿಕೊಂಡಿದೆ. ಬಡ ರೈತರು ಸಾಲಬಾಧೆಯಿಂದ ಬಳಲುತ್ತಿರುವಾಗ ಕಾರ್ಪೊರೇಟ್ ಸಾಲಗಳನ್ನು ಮನ್ನಾ ಮಾಡುವುದು ಇದಕ್ಕೆ ಒಂದು ಉದಾಹರಣೆಯಾಗಿದೆ’ ಎಂದು ಅಭಿಷೇಕ್ ವಾಗ್ದಾಳಿ ನಡೆಸಿದ್ದಾರೆ.</p><p>‘ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿಗಳನ್ನು ಹೆಚ್ಚಿಸಲು ಹಣವಿಲ್ಲ ಎಂದು ಸರ್ಕಾರ ಹೇಳಿಕೊಳ್ಳುತ್ತದೆ. ಆದರೆ, ಕಾರ್ಪೊರೇಟ್ ತೆರಿಗೆ ದರಗಳನ್ನು ಕಡಿತಗೊಳಿಸುತ್ತದೆ. ಇದರಿಂದಾಗಿ ಕೋಟ್ಯಧಿಪತಿಗಳಿಗೆ ಹೆಚ್ಚಿನ ಲಾಭವಾಗುತ್ತದೆ. ಇದು ಆರ್ಥಿಕ ನ್ಯಾಯವಲ್ಲ, ಅತ್ಯಂತ ಕೆಟ್ಟ ಆರ್ಥಿಕ ಪಕ್ಷಪಾತವಾಗಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>