<p><strong>ನವದೆಹಲಿ</strong>: ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.</p>.<p>ಕೂಲಂಕಷ ಪರಾಮರ್ಶೆಗಾಗಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಒಪ್ಪಿಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಲಿಲ್ಲ. ನಂತರ, ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.</p>.<p>ಇದರ ನಡುವೆಯೇ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್ಎಚ್ಎಎನ್ಟಿಐ– ಶಾಂತಿ ಮಸೂದೆ) ಮಸೂದೆ’ಯನ್ನು ಧ್ವನಿಮತ ಮೂಲಕ ಸದನ ಅಂಗೀಕರಿಸಿತು.</p>.<p>ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ‘2047ರ ವೇಳೆಗೆ 100 ಗಿಗಾವಾಟ್ ಅಣು ವಿದ್ಯುತ್ ಉತ್ಪಾದನೆ ಗುರಿ ಸಾಧಿಸಲು ಈ ಮಸೂದೆ ನೆರವಾಗಲಿದೆ’ ಎಂದು ಹೇಳಿದರು.</p>.<p>‘ಈ ಮಸೂದೆ ಮೈಲುಗಲ್ಲಾಗಿದ್ದು, ದೇಶದ ಅಭಿವೃದ್ಧಿ ಪಯಣಕ್ಕೆ ಹೊಸ ದಿಕ್ಕು ತೋರಲಿದೆ’ ಎಂದರು.</p>.<p>‘ಜಾಗತಿಕ ಮಟ್ಟದಲ್ಲಿ ಭಾರತ ತನ್ನ ಛಾಪು ಮೂಡಿಸಬೇಕು ಎಂದಾದಲ್ಲಿ, ಜಾಗತಿಕ ರಾಜಕಾರಣದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲೇಬೇಕು. ಜಗತ್ತಿನ ವಿವಿಧೆಡೆ ಬಳಸುತ್ತಿರುವ ಕಾರ್ಯತಂತ್ರಗಳನ್ನು ನಾವು ಅನುಸರಿಸಬೇಕು’ ಎಂದು ಹೇಳಿದರು.</p>.<p>ಪರ–ವಿರೋಧ ಮಾತು: ಇದಕ್ಕೂ ಮುನ್ನ ನಡೆದ ಚರ್ಚೆ ವೇಳೆ, ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಸಂಸದರು ಈ ಮಸೂದೆಯನ್ನು ಬೆಂಬಲಿಸಿದರೆ, ವ್ಯಾಪಕ ಸಮಾಲೋಚನೆಗಳಿಗಾಗಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ(ಜೆಪಿಸಿ) ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳ ಸಂಸದರು ಪಟ್ಟು ಹಿಡಿದರು.</p>.<p>ವಿದ್ಯುತ್ ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಈ ಮಸೂದೆ ನೆರವಾಗಲಿದೆ ಎಂಬುದು ಎನ್ಡಿಯ ಪಾಳಯದ ಸಂಸದರ ಪ್ರತಿಪಾದನೆಯಾದರೆ, ಈ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸುವುದು ಅಪಾಯಕಾರಿ ಎಂದು ಹೇಳುವ ಮೂಲಕ ವಿಪಕ್ಷಗಳ ಸಂಸದರು ಮಸೂದೆಗೆ ಬಲವಾದ ಪ್ರತಿರೋಧ ವ್ಯಕ್ತಪಡಿಸಿದರು.</p>.<div><blockquote>- ಜಗತ್ತು ಈಗ ಶುದ್ಧ ಇಂಧನ ಯುಗದತ್ತ ಹೆಜ್ಜೆ ಹಾಕುತ್ತಿದೆ. ನಾವು ಕೂಡ 2047ರ ವೇಳೆಗೆ 100 ಗಿಗಾವಾಟ್ ಅಣುಶಕ್ತಿ ಉತ್ಪಾದಿಸುವ ಗುರಿ ನಿಗದಿ ಮಾಡಿದ್ದೇವೆ</blockquote><span class="attribution">ಜಿತೇಂದ್ರ ಸಿಂಗ್, ಕೇಂದ್ರ ಸಚಿವ</span></div>.<p>ಬಿಜೆಪಿಯ ಶಶಾಂಕ ಮಣಿ ಮಾತನಾಡಿ, ‘ನಾಗರಿಕ ಅಣು ವಿದ್ಯುತ್ ಕ್ಷೇತ್ರ ಪ್ರವೇಶಿಸುವುದಕ್ಕೆ ಖಾಸಗಿಯವರಿಗೂ ಅವಕಾಶ ಕಲ್ಪಿಸುವುದರಿಂದ ಪ್ರತಿಯೊಬ್ಬ ಭಾರತೀಯನಿಗೂ ಪ್ರಯೋಜನವಾಗಲಿದೆ’ ಎಂದು ಹೇಳಿದರು.</p>.<p>ಈ ಮಸೂದೆಯನ್ನು ಬಲವಾಗಿ ವಿರೋಧಿಸಿದ ಕಾಂಗ್ರೆಸ್ನ ಮನೀಷ್ ತಿವಾರಿ,‘ಅಣುಸ್ಥಾವರಗಳಿಗೆ ಅಗತ್ಯವಿರುವ ಉಪಕರಣಗಳನ್ನು ಪೂರೈಕೆ ಮಾಡುವವರಿಗೆ ಹೊಣೆಗಾರಿಕೆ ನಿಗದಿ ಮಾಡುವ ನಿಬಂಧನೆಯನ್ನು ಪ್ರಸ್ತಾವಿತ ಮಸೂದೆಯಲ್ಲಿ ತೆಗೆದು ಹಾಕಲಾಗಿದೆ. ಅಣು ಸ್ಥಾವರಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ಅದು ದೇಶಕ್ಕೆ ಭಾರಿ ಹಾನಿಗೆ ಕಾರಣವಾಗಲಿದೆ’ ಎಂದರು.</p>.<p>ಅಣು ಶಕ್ತಿ ಕಾಯ್ದೆ–1962 ಹಾಗೂ ನಾಗರಿಕ ಹೊಣೆಗಾರಿಕೆ (ಪರಮಾಣು ಹಾನಿ) ಕಾಯ್ದೆ–2010ರಲ್ಲಿದ್ದ ಅಂಶಗಳನ್ನು ನೂತನ ಮಸೂದೆಯಲ್ಲಿ ತೆಗೆದು ಹಾಕಿರುವುದಕ್ಕೂ ತಿವಾರಿ ವಿರೋಧ ವ್ಯಕ್ತಪಡಿಸಿದರು.</p>.<p>‘ಈ ಮಸೂದೆ ಕುರಿತು ಕೂಲಂಕಷ ಪರಿಶೀಲನೆ ಅಗತ್ಯ ಇದೆ. ಹೀಗಾಗಿ ಇದನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ತಿವಾರಿ ಆಗ್ರಹಿಸಿದರು.</p>.<p>ಈ ವಿಷಯವಾಗಿ ಮಾತನಾಡಿದ ಡಿಎಂಕೆಯ ಅರುಣ್ ನೆಹರು, ಟಿಎಂಸಿಯ ಸೌಗತ ರಾಯ್, ಶಿವಸೇನಾದ(ಯುಬಿಟಿ) ಅರವಿಂದ ಸಾವಂತ್ ಕೂಡ, ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಯಾರು ಏನಂದರು?</strong></p><p>ಅಣು ಶಕ್ತಿ ಉತ್ಪಾದನೆ ಹೆಚ್ಚಿಸುವುದಕ್ಕಾಗಿ ಈ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಅಪಾಯಕಾರಿ ನಡೆ. ಜನರ ಸುರಕ್ಷತೆ ಪರಿಸರ ಸಂರಕ್ಷಣೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸುವುದನ್ನು ಕಡೆಗಣಿಸಿ ಈ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಣೆ ಹಾಕುವುದು ಸರಿಯಲ್ಲ –ಶಶಿ ತರೂರ್ ಕಾಂಗ್ರೆಸ್ ಸದಸ್ಯ </p><p>ಸಾರ್ವಜನಿಕ ವಲಯದ ಸಂಸ್ಥೆಯೊಂದು ಒದಗಿಸುವಷ್ಟೇ ಸುರಕ್ಷತೆಯನ್ನು ಖಾಸಗಿ ಕಂಪನಿಯೊಂದು ಕಲ್ಪಿಸುತ್ತದೆ ಎಂಬುದನ್ನು ಸರ್ಕಾರಿ ಹೇಗೆ ಖಾತ್ರಿಪಡಿಸುತ್ತದೆ –ಅರವಿಂದ ಸಾವಂತ್ ಶಿವಸೇನಾ(ಯುಬಿಟಿ) ಸದಸ್ಯ </p><p>ಅಣು ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆಗೆ ಪರವಾನಗಿ ನೀಡುವ ವ್ಯವಸ್ಥೆ ಅತ್ಯುತ್ತಮವಾಗಿರುವಂತೆ ನೋಡಿಕೊಳ್ಳಬೇಕು. ವಿಕಿರಣಶೀಲ ತ್ಯಾಜ್ಯ ವಿಲೇವಾರಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಬೇಕು –ಅಲೋಕ್ ಕುಮಾರ್ ಸುಮನ್ ಜೆಡಿಯು ಸದಸ್ಯ </p><p>ವಿಕಿರಣಶೀಲ ಧಾತುಗಳ ಸುರಕ್ಷತೆಗೆ ಸಂಬಂಧಿಸಿದ ವಿಶೇಷ ಅಧಿಕಾರವನ್ನು ಸರ್ಕಾರ ತನ್ನ ಬಳಿಯೆ ಇಟ್ಟುಕೊಂಡಿದೆ. ಇದರಿಂದ ಈ ಕ್ಷೇತ್ರದಲ್ಲಿ ಆವಿಷ್ಕಾರವನ್ನು ಖಾಸಗಿಯವರು ಮಾಡಿದರೆ ಅದರ ನಿಯಂತ್ರಣ ಸರ್ಕಾರದ ಕೈಯಲ್ಲಿಯೇ ಇರಲಿದೆ – ಧೈರ್ಯಶೀಲ ಸಂಭಾಜಿರಾವ್ ಮಾನೆ ಶಿವಸೇನಾ ಸದಸ್ಯ </p><p>ಅಮೆರಿಕ ಹಾಗೂ ಫ್ರಾನ್ಸ್ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಆಹ್ವಾನಿಸುವ ಪ್ರಯತ್ನ ಇದಾಗಿದೆ. ಖಾಸಗಿಯವರಿಗೆ ಅವಕಾಶ ನೀಡಿದರೆ ನಿಮ್ಮ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಗತಿ ಏನು? –ಆದಿತ್ಯ ಯಾದವ್ ಸಮಾಜವಾದಿ ಪಕ್ಷದ ಸದಸ್ಯ </p><p>ಅಣು ವಿದ್ಯುತ್ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಅಗತ್ಯ ಪ್ರಮಾಣದಲ್ಲಿ ಭಾರತದಲ್ಲಿ ಇಲ್ಲ. ಈ ಮಸೂದೆ ಮೂಲಕ ಸರ್ಕಾರವು ವಿದೇಶಿ ಹೂಡಿಕೆ ಹಾಗೂ ಕಚ್ಚಾವಸ್ತುಗಳನ್ನು ತರುವ ಜವಾಬ್ದಾರಿಯನ್ನು ಖಾಸಗಿ ಕಂಪನಿಗಳಿಗೆ ವಹಿಸುತ್ತಿದೆ –ಸೌಗತ ರಾಯ್ ಟಿಎಂಸಿ ಸದಸ್ಯ </p>.<p><strong>ವಿಪಕ್ಷಗಳ ವಾದ </strong></p><p>* ಅಣು ಸ್ಥಾವರಗಳಲ್ಲಿನ ವಿಕಿರಣಶೀಲ ತ್ಯಾಜ್ಯ(ರೇಡಿಯೊ ಆ್ಯಕ್ಟಿವ್ ವೇಸ್ಟ್) ನಿರ್ವಹಣೆ ಕುರಿತಂತೆ ಮಸೂದೆಯಲ್ಲಿ ಯಾವುದೇ ಚೌಕಟ್ಟು ಇಲ್ಲ</p><p> * ಈ ಮಸೂದೆ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಓಲೈಸಲು ಯತ್ನಿಸುತ್ತಿದೆ. ಆ ಮೂಲಕ ಅಮೆರಿಕ ಹೇರಿರುವ ಪ್ರತಿಸುಂಕವನ್ನು ತಗ್ಗಿಸುವ ಉದ್ದೇಶ ಹೊಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.</p>.<p>ಕೂಲಂಕಷ ಪರಾಮರ್ಶೆಗಾಗಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ (ಜೆಪಿಸಿ) ಒಪ್ಪಿಸಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಲಿಲ್ಲ. ನಂತರ, ವಿಪಕ್ಷಗಳ ಸದಸ್ಯರು ಸಭಾತ್ಯಾಗ ಮಾಡಿದರು.</p>.<p>ಇದರ ನಡುವೆಯೇ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್ಎಚ್ಎಎನ್ಟಿಐ– ಶಾಂತಿ ಮಸೂದೆ) ಮಸೂದೆ’ಯನ್ನು ಧ್ವನಿಮತ ಮೂಲಕ ಸದನ ಅಂಗೀಕರಿಸಿತು.</p>.<p>ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ‘2047ರ ವೇಳೆಗೆ 100 ಗಿಗಾವಾಟ್ ಅಣು ವಿದ್ಯುತ್ ಉತ್ಪಾದನೆ ಗುರಿ ಸಾಧಿಸಲು ಈ ಮಸೂದೆ ನೆರವಾಗಲಿದೆ’ ಎಂದು ಹೇಳಿದರು.</p>.<p>‘ಈ ಮಸೂದೆ ಮೈಲುಗಲ್ಲಾಗಿದ್ದು, ದೇಶದ ಅಭಿವೃದ್ಧಿ ಪಯಣಕ್ಕೆ ಹೊಸ ದಿಕ್ಕು ತೋರಲಿದೆ’ ಎಂದರು.</p>.<p>‘ಜಾಗತಿಕ ಮಟ್ಟದಲ್ಲಿ ಭಾರತ ತನ್ನ ಛಾಪು ಮೂಡಿಸಬೇಕು ಎಂದಾದಲ್ಲಿ, ಜಾಗತಿಕ ರಾಜಕಾರಣದಲ್ಲಿ ಭಾರತ ಮಹತ್ವದ ಪಾತ್ರ ವಹಿಸಲೇಬೇಕು. ಜಗತ್ತಿನ ವಿವಿಧೆಡೆ ಬಳಸುತ್ತಿರುವ ಕಾರ್ಯತಂತ್ರಗಳನ್ನು ನಾವು ಅನುಸರಿಸಬೇಕು’ ಎಂದು ಹೇಳಿದರು.</p>.<p>ಪರ–ವಿರೋಧ ಮಾತು: ಇದಕ್ಕೂ ಮುನ್ನ ನಡೆದ ಚರ್ಚೆ ವೇಳೆ, ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಸಂಸದರು ಈ ಮಸೂದೆಯನ್ನು ಬೆಂಬಲಿಸಿದರೆ, ವ್ಯಾಪಕ ಸಮಾಲೋಚನೆಗಳಿಗಾಗಿ ಈ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ(ಜೆಪಿಸಿ) ಒಪ್ಪಿಸಬೇಕು ಎಂದು ವಿರೋಧ ಪಕ್ಷಗಳ ಸಂಸದರು ಪಟ್ಟು ಹಿಡಿದರು.</p>.<p>ವಿದ್ಯುತ್ ಉತ್ಪಾದನೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಈ ಮಸೂದೆ ನೆರವಾಗಲಿದೆ ಎಂಬುದು ಎನ್ಡಿಯ ಪಾಳಯದ ಸಂಸದರ ಪ್ರತಿಪಾದನೆಯಾದರೆ, ಈ ಕ್ಷೇತ್ರವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸುವುದು ಅಪಾಯಕಾರಿ ಎಂದು ಹೇಳುವ ಮೂಲಕ ವಿಪಕ್ಷಗಳ ಸಂಸದರು ಮಸೂದೆಗೆ ಬಲವಾದ ಪ್ರತಿರೋಧ ವ್ಯಕ್ತಪಡಿಸಿದರು.</p>.<div><blockquote>- ಜಗತ್ತು ಈಗ ಶುದ್ಧ ಇಂಧನ ಯುಗದತ್ತ ಹೆಜ್ಜೆ ಹಾಕುತ್ತಿದೆ. ನಾವು ಕೂಡ 2047ರ ವೇಳೆಗೆ 100 ಗಿಗಾವಾಟ್ ಅಣುಶಕ್ತಿ ಉತ್ಪಾದಿಸುವ ಗುರಿ ನಿಗದಿ ಮಾಡಿದ್ದೇವೆ</blockquote><span class="attribution">ಜಿತೇಂದ್ರ ಸಿಂಗ್, ಕೇಂದ್ರ ಸಚಿವ</span></div>.<p>ಬಿಜೆಪಿಯ ಶಶಾಂಕ ಮಣಿ ಮಾತನಾಡಿ, ‘ನಾಗರಿಕ ಅಣು ವಿದ್ಯುತ್ ಕ್ಷೇತ್ರ ಪ್ರವೇಶಿಸುವುದಕ್ಕೆ ಖಾಸಗಿಯವರಿಗೂ ಅವಕಾಶ ಕಲ್ಪಿಸುವುದರಿಂದ ಪ್ರತಿಯೊಬ್ಬ ಭಾರತೀಯನಿಗೂ ಪ್ರಯೋಜನವಾಗಲಿದೆ’ ಎಂದು ಹೇಳಿದರು.</p>.<p>ಈ ಮಸೂದೆಯನ್ನು ಬಲವಾಗಿ ವಿರೋಧಿಸಿದ ಕಾಂಗ್ರೆಸ್ನ ಮನೀಷ್ ತಿವಾರಿ,‘ಅಣುಸ್ಥಾವರಗಳಿಗೆ ಅಗತ್ಯವಿರುವ ಉಪಕರಣಗಳನ್ನು ಪೂರೈಕೆ ಮಾಡುವವರಿಗೆ ಹೊಣೆಗಾರಿಕೆ ನಿಗದಿ ಮಾಡುವ ನಿಬಂಧನೆಯನ್ನು ಪ್ರಸ್ತಾವಿತ ಮಸೂದೆಯಲ್ಲಿ ತೆಗೆದು ಹಾಕಲಾಗಿದೆ. ಅಣು ಸ್ಥಾವರಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ಅದು ದೇಶಕ್ಕೆ ಭಾರಿ ಹಾನಿಗೆ ಕಾರಣವಾಗಲಿದೆ’ ಎಂದರು.</p>.<p>ಅಣು ಶಕ್ತಿ ಕಾಯ್ದೆ–1962 ಹಾಗೂ ನಾಗರಿಕ ಹೊಣೆಗಾರಿಕೆ (ಪರಮಾಣು ಹಾನಿ) ಕಾಯ್ದೆ–2010ರಲ್ಲಿದ್ದ ಅಂಶಗಳನ್ನು ನೂತನ ಮಸೂದೆಯಲ್ಲಿ ತೆಗೆದು ಹಾಕಿರುವುದಕ್ಕೂ ತಿವಾರಿ ವಿರೋಧ ವ್ಯಕ್ತಪಡಿಸಿದರು.</p>.<p>‘ಈ ಮಸೂದೆ ಕುರಿತು ಕೂಲಂಕಷ ಪರಿಶೀಲನೆ ಅಗತ್ಯ ಇದೆ. ಹೀಗಾಗಿ ಇದನ್ನು ಜಂಟಿ ಸದನ ಸಮಿತಿಗೆ ಒಪ್ಪಿಸಬೇಕು’ ಎಂದು ತಿವಾರಿ ಆಗ್ರಹಿಸಿದರು.</p>.<p>ಈ ವಿಷಯವಾಗಿ ಮಾತನಾಡಿದ ಡಿಎಂಕೆಯ ಅರುಣ್ ನೆಹರು, ಟಿಎಂಸಿಯ ಸೌಗತ ರಾಯ್, ಶಿವಸೇನಾದ(ಯುಬಿಟಿ) ಅರವಿಂದ ಸಾವಂತ್ ಕೂಡ, ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಯಾರು ಏನಂದರು?</strong></p><p>ಅಣು ಶಕ್ತಿ ಉತ್ಪಾದನೆ ಹೆಚ್ಚಿಸುವುದಕ್ಕಾಗಿ ಈ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವುದು ಅಪಾಯಕಾರಿ ನಡೆ. ಜನರ ಸುರಕ್ಷತೆ ಪರಿಸರ ಸಂರಕ್ಷಣೆ ಹಾಗೂ ಸಂತ್ರಸ್ತರಿಗೆ ನ್ಯಾಯ ಒದಗಿಸುವುದನ್ನು ಕಡೆಗಣಿಸಿ ಈ ಕ್ಷೇತ್ರದಲ್ಲಿ ಖಾಸಗಿಯವರಿಗೆ ಮಣೆ ಹಾಕುವುದು ಸರಿಯಲ್ಲ –ಶಶಿ ತರೂರ್ ಕಾಂಗ್ರೆಸ್ ಸದಸ್ಯ </p><p>ಸಾರ್ವಜನಿಕ ವಲಯದ ಸಂಸ್ಥೆಯೊಂದು ಒದಗಿಸುವಷ್ಟೇ ಸುರಕ್ಷತೆಯನ್ನು ಖಾಸಗಿ ಕಂಪನಿಯೊಂದು ಕಲ್ಪಿಸುತ್ತದೆ ಎಂಬುದನ್ನು ಸರ್ಕಾರಿ ಹೇಗೆ ಖಾತ್ರಿಪಡಿಸುತ್ತದೆ –ಅರವಿಂದ ಸಾವಂತ್ ಶಿವಸೇನಾ(ಯುಬಿಟಿ) ಸದಸ್ಯ </p><p>ಅಣು ವಿದ್ಯುತ್ ಸ್ಥಾವರಗಳ ಕಾರ್ಯಾಚರಣೆಗೆ ಪರವಾನಗಿ ನೀಡುವ ವ್ಯವಸ್ಥೆ ಅತ್ಯುತ್ತಮವಾಗಿರುವಂತೆ ನೋಡಿಕೊಳ್ಳಬೇಕು. ವಿಕಿರಣಶೀಲ ತ್ಯಾಜ್ಯ ವಿಲೇವಾರಿಗೆ ವಿಶೇಷ ಅವಕಾಶಗಳನ್ನು ಕಲ್ಪಿಸಬೇಕು –ಅಲೋಕ್ ಕುಮಾರ್ ಸುಮನ್ ಜೆಡಿಯು ಸದಸ್ಯ </p><p>ವಿಕಿರಣಶೀಲ ಧಾತುಗಳ ಸುರಕ್ಷತೆಗೆ ಸಂಬಂಧಿಸಿದ ವಿಶೇಷ ಅಧಿಕಾರವನ್ನು ಸರ್ಕಾರ ತನ್ನ ಬಳಿಯೆ ಇಟ್ಟುಕೊಂಡಿದೆ. ಇದರಿಂದ ಈ ಕ್ಷೇತ್ರದಲ್ಲಿ ಆವಿಷ್ಕಾರವನ್ನು ಖಾಸಗಿಯವರು ಮಾಡಿದರೆ ಅದರ ನಿಯಂತ್ರಣ ಸರ್ಕಾರದ ಕೈಯಲ್ಲಿಯೇ ಇರಲಿದೆ – ಧೈರ್ಯಶೀಲ ಸಂಭಾಜಿರಾವ್ ಮಾನೆ ಶಿವಸೇನಾ ಸದಸ್ಯ </p><p>ಅಮೆರಿಕ ಹಾಗೂ ಫ್ರಾನ್ಸ್ ಕಂಪನಿಗಳಿಗೆ ರತ್ನಗಂಬಳಿ ಹಾಸಿ ಆಹ್ವಾನಿಸುವ ಪ್ರಯತ್ನ ಇದಾಗಿದೆ. ಖಾಸಗಿಯವರಿಗೆ ಅವಕಾಶ ನೀಡಿದರೆ ನಿಮ್ಮ ‘ಮೇಕ್ ಇನ್ ಇಂಡಿಯಾ’ ಕಾರ್ಯಕ್ರಮದ ಗತಿ ಏನು? –ಆದಿತ್ಯ ಯಾದವ್ ಸಮಾಜವಾದಿ ಪಕ್ಷದ ಸದಸ್ಯ </p><p>ಅಣು ವಿದ್ಯುತ್ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಅಗತ್ಯ ಪ್ರಮಾಣದಲ್ಲಿ ಭಾರತದಲ್ಲಿ ಇಲ್ಲ. ಈ ಮಸೂದೆ ಮೂಲಕ ಸರ್ಕಾರವು ವಿದೇಶಿ ಹೂಡಿಕೆ ಹಾಗೂ ಕಚ್ಚಾವಸ್ತುಗಳನ್ನು ತರುವ ಜವಾಬ್ದಾರಿಯನ್ನು ಖಾಸಗಿ ಕಂಪನಿಗಳಿಗೆ ವಹಿಸುತ್ತಿದೆ –ಸೌಗತ ರಾಯ್ ಟಿಎಂಸಿ ಸದಸ್ಯ </p>.<p><strong>ವಿಪಕ್ಷಗಳ ವಾದ </strong></p><p>* ಅಣು ಸ್ಥಾವರಗಳಲ್ಲಿನ ವಿಕಿರಣಶೀಲ ತ್ಯಾಜ್ಯ(ರೇಡಿಯೊ ಆ್ಯಕ್ಟಿವ್ ವೇಸ್ಟ್) ನಿರ್ವಹಣೆ ಕುರಿತಂತೆ ಮಸೂದೆಯಲ್ಲಿ ಯಾವುದೇ ಚೌಕಟ್ಟು ಇಲ್ಲ</p><p> * ಈ ಮಸೂದೆ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಓಲೈಸಲು ಯತ್ನಿಸುತ್ತಿದೆ. ಆ ಮೂಲಕ ಅಮೆರಿಕ ಹೇರಿರುವ ಪ್ರತಿಸುಂಕವನ್ನು ತಗ್ಗಿಸುವ ಉದ್ದೇಶ ಹೊಂದಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>