<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ಎನ್ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಸೆಪ್ಟೆಂಬರ್ 9ಕ್ಕೆ ನಿಗದಿಯಾಗಿರುವ ಉಪರಾಷ್ಟ್ರಪತಿ ಚುನಾವಣೆ ಘೋಷಣೆಯಾದ ಬಳಿಕ ಈ ಸಭೆ ನಡೆಯುತ್ತಿದೆ.</p><p>ಆಗಸ್ಟ್ 7ರಿಂದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗಲಿದೆ. ಮುಂಗಾರು ಅಧಿವೇಶ ಮುಗಿಯುವ ವೇಳೆಗೆ ಉಪರಾಷ್ಟ್ರಪತಿ ಆಯ್ಕೆ ಮಾಡಬೇಕಿದ್ದು, ಈ ಹಿನ್ನೆಲೆ ಈ ಸಭೆ ಎನ್ನಲಾಗಿದೆ. </p><p>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಏರ್ಪಟ್ಟ ಹಿನ್ನೆಲೆ ಉಳಿದ ಚರ್ಚೆಗಳು ನಡೆದಿಲ್ಲ ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.</p><p>ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.</p><p>ಭಯೋತ್ಪಾದಕ ದಾಳಿಗೆ ಭಾರತ ನೀಡಿದ ದಿಟ್ಟ ಉತ್ತರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸದೀಯ ಪಕ್ಷದ ಸಭೆಯಲ್ಲಿ ಸನ್ಮಾನಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಇಲ್ಲಿ ಎನ್ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.</p><p>ಸೆಪ್ಟೆಂಬರ್ 9ಕ್ಕೆ ನಿಗದಿಯಾಗಿರುವ ಉಪರಾಷ್ಟ್ರಪತಿ ಚುನಾವಣೆ ಘೋಷಣೆಯಾದ ಬಳಿಕ ಈ ಸಭೆ ನಡೆಯುತ್ತಿದೆ.</p><p>ಆಗಸ್ಟ್ 7ರಿಂದ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗಲಿದೆ. ಮುಂಗಾರು ಅಧಿವೇಶ ಮುಗಿಯುವ ವೇಳೆಗೆ ಉಪರಾಷ್ಟ್ರಪತಿ ಆಯ್ಕೆ ಮಾಡಬೇಕಿದ್ದು, ಈ ಹಿನ್ನೆಲೆ ಈ ಸಭೆ ಎನ್ನಲಾಗಿದೆ. </p><p>ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಗೆ ಮುನ್ನ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯಿಂದಾಗಿ ಸಂಸತ್ತಿನಲ್ಲಿ ಗದ್ದಲ ಏರ್ಪಟ್ಟ ಹಿನ್ನೆಲೆ ಉಳಿದ ಚರ್ಚೆಗಳು ನಡೆದಿಲ್ಲ ಹೀಗಾಗಿ ಈ ಸಭೆ ಮಹತ್ವ ಪಡೆದುಕೊಂಡಿದೆ.</p><p>ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.</p><p>ಭಯೋತ್ಪಾದಕ ದಾಳಿಗೆ ಭಾರತ ನೀಡಿದ ದಿಟ್ಟ ಉತ್ತರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸದೀಯ ಪಕ್ಷದ ಸಭೆಯಲ್ಲಿ ಸನ್ಮಾನಿಸುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>