<p><strong>ಪಟ್ನಾ:</strong> ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಜೆಡಿಯು ಭರವಸೆ ವ್ಯಕ್ತಪಡಿಸಿದೆ.</p>.<p>ಮಧ್ಯಾಹ್ನ 2.30ಕ್ಕೆ ಲಭ್ಯವಿದ್ದ ಮಾಹಿತಿ ಪ್ರಕಾರ ಎನ್ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಹಾಘಟಬಂಧನ್ 101 ಸ್ಥಾನಗಳಲ್ಲಿ ಮುನ್ನಡೆಯಲ್ಲಿತ್ತು.ಈ ಪೈಕಿ ಬಿಜೆಪಿ 73, ಜೆಡಿಯು 48, ಎಲ್ಜೆಪಿ 2, ಆರ್ಜೆಡಿ 67, ಕಾಂಗ್ರೆಸ್ 19, ಸಿಪಿಐ (ಎಂಎಲ್) 11, ಎಲ್ಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.</p>.<p>'ನಾನು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಎನ್ಡಿಎ ಬಿಹಾರದಲ್ಲಿ ಸರ್ಕಾರ ರಚಿಸಲಿದೆ. ಮತದಾರರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದುರುದ್ದೇಶದ ಪ್ರಚಾರ ನಡೆಸಿದವು' ಎಂದು ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ವಸಿಷ್ಟ ನಾರಾಯಣ ಸಿಂಗ್ ಹೇಳಿದರು.</p>.<p>'ಬಿಎಪಿ ಅಥವಾ ಜೆಡಿಯು- ಯಾವ ಪಕ್ಷಕ್ಕೆ ಸೇರಿದವರು ಮುಖ್ಯಮಂತ್ರಿಯಾಗ್ತಾರೆ' ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಲವು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಹೇಳಿದರು.</p>.<p>ಬಿಹಾರದಲ್ಲಿ ಎನ್ಡಿಎಗೆ ಬಹುಮತ ಬಂದರೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಮತ್ತೊಮ್ಮೆ ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಜೆಡಿಯು ಭರವಸೆ ವ್ಯಕ್ತಪಡಿಸಿದೆ.</p>.<p>ಮಧ್ಯಾಹ್ನ 2.30ಕ್ಕೆ ಲಭ್ಯವಿದ್ದ ಮಾಹಿತಿ ಪ್ರಕಾರ ಎನ್ಡಿಎ 131 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಮಹಾಘಟಬಂಧನ್ 101 ಸ್ಥಾನಗಳಲ್ಲಿ ಮುನ್ನಡೆಯಲ್ಲಿತ್ತು.ಈ ಪೈಕಿ ಬಿಜೆಪಿ 73, ಜೆಡಿಯು 48, ಎಲ್ಜೆಪಿ 2, ಆರ್ಜೆಡಿ 67, ಕಾಂಗ್ರೆಸ್ 19, ಸಿಪಿಐ (ಎಂಎಲ್) 11, ಎಲ್ಜೆಪಿ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು.</p>.<p>'ನಾನು ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇನೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನಾಯಕತ್ವದಲ್ಲಿ ಎನ್ಡಿಎ ಬಿಹಾರದಲ್ಲಿ ಸರ್ಕಾರ ರಚಿಸಲಿದೆ. ಮತದಾರರನ್ನು ದಾರಿತಪ್ಪಿಸಲು ವಿರೋಧ ಪಕ್ಷಗಳು ದುರುದ್ದೇಶದ ಪ್ರಚಾರ ನಡೆಸಿದವು' ಎಂದು ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ವಸಿಷ್ಟ ನಾರಾಯಣ ಸಿಂಗ್ ಹೇಳಿದರು.</p>.<p>'ಬಿಎಪಿ ಅಥವಾ ಜೆಡಿಯು- ಯಾವ ಪಕ್ಷಕ್ಕೆ ಸೇರಿದವರು ಮುಖ್ಯಮಂತ್ರಿಯಾಗ್ತಾರೆ' ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ಕೇಂದ್ರ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಲವು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ' ಎಂದು ಹೇಳಿದರು.</p>.<p>ಬಿಹಾರದಲ್ಲಿ ಎನ್ಡಿಎಗೆ ಬಹುಮತ ಬಂದರೆ ನಿತೀಶ್ ಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕರು ಹೇಳಿದ್ದಾರೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>