<p><strong>ನವದೆಹಲಿ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 400 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಗುರುವಾರ ಹೇಳಿದರು. </p><p>ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯ ಮಾತ್ರವಲ್ಲದೇ ಆರ್ಥಿಕ ನ್ಯಾಯಕ್ಕೂ ಈ ಸಾಲಿನ ಬಜೆಟ್ ಒತ್ತು ನೀಡಿದೆ ಎಂದರು.</p><p>ಈ ಸಲದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಸಂಖ್ಯೆ ಕಡಿಮೆಯಾಗಿರಬಹುದು, ಆದರೆ ಮುಂಬರುವ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆಯಲಿದ್ದು ವಿರೋಧ ಪಕ್ಷಗಳ ಸ್ಥಾನಗಳು ಮತ್ತಷ್ಟು ಕುಸಿಯಲಿವೆ ಎಂದರು. </p><p>ಎಲ್ಲಾ ಸಚಿವಾಲಯಗಳಿಗೂ ಬಜೆಟ್ನಲ್ಲಿ ಗಣನೀಯ ಪ್ರಮಾಣದಲ್ಲಿ ಹಣವನ್ನು ಹಂಚಿಕೆ ಮಾಡಲಾಗಿದೆ ಎಂದರು. </p><p>ತಮ್ಮ ಪಕ್ಷವು (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ) ಸಂಸತ್ತಿನಲ್ಲಿ ಯಾವುದೇ ಚುನಾಯಿತ ಸದಸ್ಯರನ್ನು ಹೊಂದಿರದಿದ್ದರೂ ತಮಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸ್ಥಾನ ನೀಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ 400 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಕೇಂದ್ರ ಸಚಿವ ರಾಮದಾಸ್ ಅಠವಳೆ ಗುರುವಾರ ಹೇಳಿದರು. </p><p>ರಾಜ್ಯಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಾಮಾಜಿಕ ನ್ಯಾಯ ಮಾತ್ರವಲ್ಲದೇ ಆರ್ಥಿಕ ನ್ಯಾಯಕ್ಕೂ ಈ ಸಾಲಿನ ಬಜೆಟ್ ಒತ್ತು ನೀಡಿದೆ ಎಂದರು.</p><p>ಈ ಸಲದ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಸಂಖ್ಯೆ ಕಡಿಮೆಯಾಗಿರಬಹುದು, ಆದರೆ ಮುಂಬರುವ ಚುನಾವಣೆಯಲ್ಲಿ 400 ಸ್ಥಾನಗಳನ್ನು ಪಡೆಯಲಿದ್ದು ವಿರೋಧ ಪಕ್ಷಗಳ ಸ್ಥಾನಗಳು ಮತ್ತಷ್ಟು ಕುಸಿಯಲಿವೆ ಎಂದರು. </p><p>ಎಲ್ಲಾ ಸಚಿವಾಲಯಗಳಿಗೂ ಬಜೆಟ್ನಲ್ಲಿ ಗಣನೀಯ ಪ್ರಮಾಣದಲ್ಲಿ ಹಣವನ್ನು ಹಂಚಿಕೆ ಮಾಡಲಾಗಿದೆ ಎಂದರು. </p><p>ತಮ್ಮ ಪಕ್ಷವು (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ) ಸಂಸತ್ತಿನಲ್ಲಿ ಯಾವುದೇ ಚುನಾಯಿತ ಸದಸ್ಯರನ್ನು ಹೊಂದಿರದಿದ್ದರೂ ತಮಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಚಿವ ಸ್ಥಾನ ನೀಡಿದ್ದಾರೆ. ಅವರಿಗೆ ನನ್ನ ಕೃತಜ್ಞತೆಗಳು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>