<p><strong>ನವದೆಹಲಿ : </strong>ನೈಸರ್ಗಿಕ ವಿಕೋಪಗಳಾದ ಭೂಕಂಪ ಹಾಗೂ ಪ್ರವಾಹ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ದೇಶದ ಸುಮಾರು 66 ಲಕ್ಷ ಜನರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತರಬೇತಿ ನೀಡಿದೆ.</p>.<p>ನೈಸರ್ಗಿಕ ಅಥವಾ ಮಾನವ ನಿರ್ಮಿತ ವಿಕೋಪಗಳಿಂದ ಚೇತರಿಸಿಕೊಳ್ಳುವಂತೆ ಮಾಡುವುದು ಹಾಗೂ ಸ್ಥಳೀಯ ಜನರನ್ನು ಯಾವುದೇ ಪರಿಸ್ಥಿತಿಗೆ ಸನ್ನದ್ಧರನ್ನಾಗಿ ಮಾಡುವುದು ತರಬೇತಿ ಕಾರ್ಯಕ್ರಮಗಳ ಉದ್ದೇಶ ಎಂದುಎನ್ಡಿಆರ್ಎಫ್ ನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದ್ದಾರೆ.</p>.<p>ತರಬೇತಿಯ ವೇಳೆ ಏನು ಮಾಡಬೇಕು ಏನನ್ನು ಮಾಡಬಾರದು ಎಂದು ಮಾಹಿತಿ ನೀಡಲಾಗುತ್ತದೆ. ಕಳೆದ ವರ್ಷದಿಂದ ತರಬೇತಿ ಅವಧಿಗಳನ್ನು ಹೆಚ್ಚಿಸಲಾಗಿದ್ದು, ಮುಂದಿನ ದಿನಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪ್ರವಾಹ ಪೀಡಿತ ರಾಜ್ಯಗಳಲ್ಲಿ ಈಗಾಗಲೇ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.</p>.<p>==<br /><strong>ಎನ್ಡಿಆರ್ಎಫ್ ಜಾಗೃತಿ ಕಾರ್ಯಕ್ರಮಗಳು</strong></p>.<p>* ಸಮುದಾಯ ಜಾಗೃತಿ ಕಾರ್ಯಕ್ರಮ<br />* ಶಾಲಾ ಸುರಕ್ಷತಾ ಕಾರ್ಯಕ್ರಮ<br />* ಅಣಕು ಕಾರ್ಯಾಚರಣೆ<br />–––––</p>.<p>2006<br />ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆರಂಭ<br />–––––<br />2,095<br />ಈವರೆಗೆ ನಡೆಸಿದ ಕಾರ್ಯಾಚರಣೆಗಳು<br />–––––<br />10,193<br />ಜಾಗೃತಿ ತರಬೇತಿ ಕಾರ್ಯಕ್ರಮಗಳು<br />––––––<br />12<br />ಬೆಟಾಲಿಯನ್ಗಳು<br />––––––<br />13,000<br />ಸಿಬ್ಬಂದಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ : </strong>ನೈಸರ್ಗಿಕ ವಿಕೋಪಗಳಾದ ಭೂಕಂಪ ಹಾಗೂ ಪ್ರವಾಹ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ದೇಶದ ಸುಮಾರು 66 ಲಕ್ಷ ಜನರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತರಬೇತಿ ನೀಡಿದೆ.</p>.<p>ನೈಸರ್ಗಿಕ ಅಥವಾ ಮಾನವ ನಿರ್ಮಿತ ವಿಕೋಪಗಳಿಂದ ಚೇತರಿಸಿಕೊಳ್ಳುವಂತೆ ಮಾಡುವುದು ಹಾಗೂ ಸ್ಥಳೀಯ ಜನರನ್ನು ಯಾವುದೇ ಪರಿಸ್ಥಿತಿಗೆ ಸನ್ನದ್ಧರನ್ನಾಗಿ ಮಾಡುವುದು ತರಬೇತಿ ಕಾರ್ಯಕ್ರಮಗಳ ಉದ್ದೇಶ ಎಂದುಎನ್ಡಿಆರ್ಎಫ್ ನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದ್ದಾರೆ.</p>.<p>ತರಬೇತಿಯ ವೇಳೆ ಏನು ಮಾಡಬೇಕು ಏನನ್ನು ಮಾಡಬಾರದು ಎಂದು ಮಾಹಿತಿ ನೀಡಲಾಗುತ್ತದೆ. ಕಳೆದ ವರ್ಷದಿಂದ ತರಬೇತಿ ಅವಧಿಗಳನ್ನು ಹೆಚ್ಚಿಸಲಾಗಿದ್ದು, ಮುಂದಿನ ದಿನಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ಪ್ರವಾಹ ಪೀಡಿತ ರಾಜ್ಯಗಳಲ್ಲಿ ಈಗಾಗಲೇ ವಿಪತ್ತು ನಿರ್ವಹಣಾ ಪಡೆಯನ್ನು ನಿಯೋಜಿಸಲಾಗಿದೆ.</p>.<p>==<br /><strong>ಎನ್ಡಿಆರ್ಎಫ್ ಜಾಗೃತಿ ಕಾರ್ಯಕ್ರಮಗಳು</strong></p>.<p>* ಸಮುದಾಯ ಜಾಗೃತಿ ಕಾರ್ಯಕ್ರಮ<br />* ಶಾಲಾ ಸುರಕ್ಷತಾ ಕಾರ್ಯಕ್ರಮ<br />* ಅಣಕು ಕಾರ್ಯಾಚರಣೆ<br />–––––</p>.<p>2006<br />ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಆರಂಭ<br />–––––<br />2,095<br />ಈವರೆಗೆ ನಡೆಸಿದ ಕಾರ್ಯಾಚರಣೆಗಳು<br />–––––<br />10,193<br />ಜಾಗೃತಿ ತರಬೇತಿ ಕಾರ್ಯಕ್ರಮಗಳು<br />––––––<br />12<br />ಬೆಟಾಲಿಯನ್ಗಳು<br />––––––<br />13,000<br />ಸಿಬ್ಬಂದಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>