<p><strong>ಪಟ್ನಾ: </strong>‘ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, 11 ಜಿಲ್ಲೆಗಳ ಅಂದಾಜು 15 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ’ ಎಂದು ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿ ಭಾನುವಾರ ತಿಳಿಸಿದೆ.</p>.<p>ದರ್ಭಾಂಗ ಜಿಲ್ಲೆಯಲ್ಲಿ ಒಟ್ಟು 5.36 ಲಕ್ಷ ಜನ ಪ್ರವಾಹದಿಂದ ಬಾಧಿತರಾಗಿದ್ದಾರೆ. ಈ ಜಿಲ್ಲೆಯ ಬಿಷಣ್ಪುರ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.</p>.<p>‘ಪ್ರವಾಹ ನಮಗೇನೂ ಹೊಸತಲ್ಲ. ಪ್ರತಿ ವರ್ಷವೂ ನಮಗೆ ಅದರ ಅನುಭವವಾಗುತ್ತದೆ. ಆದರೆ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಹಾನಿಯಾಗಿದೆ’ ಎಂದು ಬಿಷಣ್ಪುರ ಗ್ರಾಮದ ನಿವಾಸಿಯೊಬ್ಬರು ಹೇಳಿದ್ದಾರೆ.</p>.<p>ಮಾಬಿ ಗ್ರಾಮದ ಮನೆಗಳಿಗೂ ನೀರು ನುಗ್ಗಿದ್ದರಿಂದ ಅಲ್ಲಿನ ಜನರೆಲ್ಲಾ ಈಗ ಬೀದಿಗೆ ಬಿದ್ದಿದ್ದಾರೆ.</p>.<p>ಎನ್ಡಿಆರ್ಎಫ್ನ 17 ಹಾಗೂ ಎಸ್ಡಿಆರ್ಎಫ್ನ ಎಂಟು ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದುವರೆಗೂ ಒಟ್ಟು 1.36 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರಿಗೆ ಹೆಲಿಕಾಪ್ಟರ್ಗಳ ನೆರವಿನಿಂದ ಆಹಾರ ಸಾಮಾಗ್ರಿಗಳನ್ನು ಪೂರೈಸಲಾಗುತ್ತಿದೆ.</p>.<p>ಭಾಗಮತಿ, ಬುರ್ಹಿ ಗಂಡಕ್, ಕಮಲಬಾಲನ್, ಲಾಲ್ಬಕೆಯಾ, ಅಧ್ವಾರ, ಮಹಾನಂದ ಸೇರಿದಂತೆ ಹಲವು ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ: </strong>‘ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, 11 ಜಿಲ್ಲೆಗಳ ಅಂದಾಜು 15 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ’ ಎಂದು ಪ್ರಕೃತಿ ವಿಕೋಪ ನಿರ್ವಹಣಾ ಮಂಡಳಿ ಭಾನುವಾರ ತಿಳಿಸಿದೆ.</p>.<p>ದರ್ಭಾಂಗ ಜಿಲ್ಲೆಯಲ್ಲಿ ಒಟ್ಟು 5.36 ಲಕ್ಷ ಜನ ಪ್ರವಾಹದಿಂದ ಬಾಧಿತರಾಗಿದ್ದಾರೆ. ಈ ಜಿಲ್ಲೆಯ ಬಿಷಣ್ಪುರ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ.</p>.<p>‘ಪ್ರವಾಹ ನಮಗೇನೂ ಹೊಸತಲ್ಲ. ಪ್ರತಿ ವರ್ಷವೂ ನಮಗೆ ಅದರ ಅನುಭವವಾಗುತ್ತದೆ. ಆದರೆ ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಹಾನಿಯಾಗಿದೆ’ ಎಂದು ಬಿಷಣ್ಪುರ ಗ್ರಾಮದ ನಿವಾಸಿಯೊಬ್ಬರು ಹೇಳಿದ್ದಾರೆ.</p>.<p>ಮಾಬಿ ಗ್ರಾಮದ ಮನೆಗಳಿಗೂ ನೀರು ನುಗ್ಗಿದ್ದರಿಂದ ಅಲ್ಲಿನ ಜನರೆಲ್ಲಾ ಈಗ ಬೀದಿಗೆ ಬಿದ್ದಿದ್ದಾರೆ.</p>.<p>ಎನ್ಡಿಆರ್ಎಫ್ನ 17 ಹಾಗೂ ಎಸ್ಡಿಆರ್ಎಫ್ನ ಎಂಟು ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದುವರೆಗೂ ಒಟ್ಟು 1.36 ಲಕ್ಷ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.</p>.<p>ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರಿಗೆ ಹೆಲಿಕಾಪ್ಟರ್ಗಳ ನೆರವಿನಿಂದ ಆಹಾರ ಸಾಮಾಗ್ರಿಗಳನ್ನು ಪೂರೈಸಲಾಗುತ್ತಿದೆ.</p>.<p>ಭಾಗಮತಿ, ಬುರ್ಹಿ ಗಂಡಕ್, ಕಮಲಬಾಲನ್, ಲಾಲ್ಬಕೆಯಾ, ಅಧ್ವಾರ, ಮಹಾನಂದ ಸೇರಿದಂತೆ ಹಲವು ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>