<p><strong>ಗುವಾಹಟಿ:</strong> ಮೂರು ಜಿಲ್ಲೆಗಳಲ್ಲಿ ಹರಡಿರುವ ಸುಮಾರು 1,800 ಹೆಕ್ಟೇರ್ ಭೂಮಿಯನ್ನು ನೆರೆಯ ಮಿಜೋರಾಂನ ಜನರು ಅತಿಕ್ರಮಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ.</p>.<p>ಮಿಜೋರಾಂನ ಜನರು ಅಸ್ಸಾಂ ಕ್ಯಾಚರ್ ಜಿಲ್ಲೆಯಲ್ಲಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಅಸ್ಸಾಂ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.</p>.<p>ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಶಾಸಕ ಸುಜಮ್ ಉದ್ದೀನ್ ಲಸ್ಕರ್ ಹೇಳಿಕೆಗೆ ನೀಡಿರುವ ಲಿಖಿತ ಉತ್ತರದಲ್ಲಿ, ಬರಾಕ್ ಕಣಿವೆಯಲ್ಲಿ ಒಟ್ಟು 1,777,58 ಹೆಕ್ಟೇರ್ ಭೂಮಿಯನ್ನು ಮಿಜೋರಾಂನ ಅತಿಕ್ರಮಣಕಾರರು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಈ ಪೈಕಿ ಹೈಲಾಕಂಡಿ ಜಿಲ್ಲೆಯಲ್ಲಿ 1,000 ಹೆಕ್ಟೇರ್ ಪ್ರದೇಶವನ್ನು ಅತಿಕ್ರಮಿಸಲಾಗಿದೆ. ಕ್ಯಾಚರ್ನಲ್ಲಿ 400 ಹಾಗೂ ಕರೀಮ್ಗಂಜ್ನಲ್ಲಿ 377.58 ಹೆಕ್ಟೇರ್ ಅತಿಕ್ರಮಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಅಸ್ಸಾಂನ ಜನರನ್ನು ರಕ್ಷಿಸಲು ಹಾಗೂ ಅತಿಕ್ರಮಣ ತಡೆಯಲು ಪೊಲೀಸರು ಗಸ್ತು ವ್ಯವಸ್ಥೆ ಮತ್ತು ತಡೆಗಟ್ಟುವ ಕ್ರಮ ಕೈಗೊಳ್ಳಲಾಗಿದೆ.</p>.<p>ಮಿಜೋರಾಂ ಅಸ್ಸಾಂನೊಂದಿಗೆ ಸುಮಾರು 164.6 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಮೂರು ಜಿಲ್ಲೆಗಳಲ್ಲಿ ಹರಡಿರುವ ಸುಮಾರು 1,800 ಹೆಕ್ಟೇರ್ ಭೂಮಿಯನ್ನು ನೆರೆಯ ಮಿಜೋರಾಂನ ಜನರು ಅತಿಕ್ರಮಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ಹೇಳಿದ್ದಾರೆ.</p>.<p>ಮಿಜೋರಾಂನ ಜನರು ಅಸ್ಸಾಂ ಕ್ಯಾಚರ್ ಜಿಲ್ಲೆಯಲ್ಲಿ ಭೂಮಿಯನ್ನು ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಅಸ್ಸಾಂ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.</p>.<p>ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಶಾಸಕ ಸುಜಮ್ ಉದ್ದೀನ್ ಲಸ್ಕರ್ ಹೇಳಿಕೆಗೆ ನೀಡಿರುವ ಲಿಖಿತ ಉತ್ತರದಲ್ಲಿ, ಬರಾಕ್ ಕಣಿವೆಯಲ್ಲಿ ಒಟ್ಟು 1,777,58 ಹೆಕ್ಟೇರ್ ಭೂಮಿಯನ್ನು ಮಿಜೋರಾಂನ ಅತಿಕ್ರಮಣಕಾರರು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.</p>.<p>ಈ ಪೈಕಿ ಹೈಲಾಕಂಡಿ ಜಿಲ್ಲೆಯಲ್ಲಿ 1,000 ಹೆಕ್ಟೇರ್ ಪ್ರದೇಶವನ್ನು ಅತಿಕ್ರಮಿಸಲಾಗಿದೆ. ಕ್ಯಾಚರ್ನಲ್ಲಿ 400 ಹಾಗೂ ಕರೀಮ್ಗಂಜ್ನಲ್ಲಿ 377.58 ಹೆಕ್ಟೇರ್ ಅತಿಕ್ರಮಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಅಸ್ಸಾಂನ ಜನರನ್ನು ರಕ್ಷಿಸಲು ಹಾಗೂ ಅತಿಕ್ರಮಣ ತಡೆಯಲು ಪೊಲೀಸರು ಗಸ್ತು ವ್ಯವಸ್ಥೆ ಮತ್ತು ತಡೆಗಟ್ಟುವ ಕ್ರಮ ಕೈಗೊಳ್ಳಲಾಗಿದೆ.</p>.<p>ಮಿಜೋರಾಂ ಅಸ್ಸಾಂನೊಂದಿಗೆ ಸುಮಾರು 164.6 ಕಿ.ಮೀ. ಉದ್ದದ ಗಡಿಯನ್ನು ಹಂಚಿಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>