<p><strong>ಬುಡೌನ್:</strong> ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ಮೊಸರಿನ ‘ರೈತಾ’ ಸೇವಿಸಿದ ಪರಿಣಾಮ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ ರೇಬೀಸ್ ಹರಡಿರುವ ಆತಂಕ ಮೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೇಬೀಸ್ ವಿರೋಧಿ ಲಸಿಕೆಯನ್ನು ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಜನರು ರೈತಾ ಸೇರಿದಂತೆ ಇತರೆ ಖಾದ್ಯಗಳನ್ನು ಸೇವಿಸಿದ್ದರು. ರೈತಾ ತಯಾರಿಸಲು ಹಾಲು ಬಳಸಿದ ಎಮ್ಮೆಯನ್ನು ಕೆಲವು ದಿನಗಳ ಹಿಂದೆ ನಾಯಿ ಕಚ್ಚಿತ್ತು ಎಂದು ತಿಳಿದುಬಂದಿದೆ. </p><p>ಡಿಸೆಂಬರ್ 26ರಂದು ಎಮ್ಮೆ ಮೃತಪಟ್ಟಿತ್ತು. ಇದರಿಂದಾಗಿ ರೇಬೀಸ್ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ತಕ್ಷಣ ಗ್ರಾಮಸ್ಥರಿಗೆ ಲಸಿಕೆ ಹಾಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>‘ಗ್ರಾಮದಲ್ಲಿ ಎಮ್ಮೆಯೊಂದು ನಾಯಿ ಕಚ್ಚಿ ರೇಬೀಸ್ ಲಕ್ಷಣಗಳಿಂದ ಸಾವಿಗೀಡಾಗಿದೆ. ಗ್ರಾಮಸ್ಥರು ಸೋಂಕಿತ ಎಮ್ಮೆಯ ಹಾಲಿನಿಂದ ತಯಾರಿಸಿದ ರೈತಾ ಸೇವಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ರೇಬೀಸ್ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಮೇಶ್ವರ ಮಿಶ್ರಾ ತಿಳಿಸಿದ್ದಾರೆ.</p><p>‘ಹಾಲನ್ನು ಕುದಿಸಿದ ನಂತರ ರೇಬೀಸ್ ಅಪಾಯ ಇರುವುದಿಲ್ಲ. ಆದರೆ, ಯಾವುದೇ ಸಂಭಾವ್ಯ ಅಪಾಯವನ್ನು ತಡೆಗಟ್ಟುವ ಸಲುವಾಗಿ ಎಲ್ಲರಿಗೂ ರೇಬೀಸ್ ವಿರೋಧಿ ಲಸಿಕೆ ನೀಡುತ್ತಿದ್ದೇವೆ. ಜತೆಗೆ, ಯಾವುದೇ ವದಂತಿಗಳನ್ನು ಹರಡದಂತೆ ಗ್ರಾಮದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಮಿಶ್ರಾ ವಿವರಿಸಿದ್ದಾರೆ. </p><p>‘ನಾಯಿ ಕಚ್ಚಿದ್ದರಿಂದ ಎಮ್ಮೆ ಅನಾರೋಗ್ಯಕ್ಕೆ ಒಳಗಾಗಿತ್ತು. ಬಳಿಕ ಅದು ಮೃತಪಟ್ಟಿತ್ತು. ಪುಣ್ಯತಿಥಿ ಸಮಾರಂಭದಲ್ಲಿ ತಯಾರಿಸಿದ್ದ ರೈತಾವನ್ನು ಅದೇ ಎಮ್ಮೆಯ ಹಾಲಿನಿಂದ ತಯಾರಿಸಲಾಗಿತ್ತು. ಇದರಿಂದ ಸೋಂಕಿನ ಭೀತಿ ಕಾಡಲಾರಂಭಿಸಿತು. ಈಗ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದೇವೆ’ ಎಂದು ಗ್ರಾಮಸ್ಥ ಧರ್ಮಪಾಲ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬುಡೌನ್:</strong> ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ಮೊಸರಿನ ‘ರೈತಾ’ ಸೇವಿಸಿದ ಪರಿಣಾಮ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ ರೇಬೀಸ್ ಹರಡಿರುವ ಆತಂಕ ಮೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೇಬೀಸ್ ವಿರೋಧಿ ಲಸಿಕೆಯನ್ನು ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಜನರು ರೈತಾ ಸೇರಿದಂತೆ ಇತರೆ ಖಾದ್ಯಗಳನ್ನು ಸೇವಿಸಿದ್ದರು. ರೈತಾ ತಯಾರಿಸಲು ಹಾಲು ಬಳಸಿದ ಎಮ್ಮೆಯನ್ನು ಕೆಲವು ದಿನಗಳ ಹಿಂದೆ ನಾಯಿ ಕಚ್ಚಿತ್ತು ಎಂದು ತಿಳಿದುಬಂದಿದೆ. </p><p>ಡಿಸೆಂಬರ್ 26ರಂದು ಎಮ್ಮೆ ಮೃತಪಟ್ಟಿತ್ತು. ಇದರಿಂದಾಗಿ ರೇಬೀಸ್ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ತಕ್ಷಣ ಗ್ರಾಮಸ್ಥರಿಗೆ ಲಸಿಕೆ ಹಾಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p><p>‘ಗ್ರಾಮದಲ್ಲಿ ಎಮ್ಮೆಯೊಂದು ನಾಯಿ ಕಚ್ಚಿ ರೇಬೀಸ್ ಲಕ್ಷಣಗಳಿಂದ ಸಾವಿಗೀಡಾಗಿದೆ. ಗ್ರಾಮಸ್ಥರು ಸೋಂಕಿತ ಎಮ್ಮೆಯ ಹಾಲಿನಿಂದ ತಯಾರಿಸಿದ ರೈತಾ ಸೇವಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ರೇಬೀಸ್ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಮೇಶ್ವರ ಮಿಶ್ರಾ ತಿಳಿಸಿದ್ದಾರೆ.</p><p>‘ಹಾಲನ್ನು ಕುದಿಸಿದ ನಂತರ ರೇಬೀಸ್ ಅಪಾಯ ಇರುವುದಿಲ್ಲ. ಆದರೆ, ಯಾವುದೇ ಸಂಭಾವ್ಯ ಅಪಾಯವನ್ನು ತಡೆಗಟ್ಟುವ ಸಲುವಾಗಿ ಎಲ್ಲರಿಗೂ ರೇಬೀಸ್ ವಿರೋಧಿ ಲಸಿಕೆ ನೀಡುತ್ತಿದ್ದೇವೆ. ಜತೆಗೆ, ಯಾವುದೇ ವದಂತಿಗಳನ್ನು ಹರಡದಂತೆ ಗ್ರಾಮದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಮಿಶ್ರಾ ವಿವರಿಸಿದ್ದಾರೆ. </p><p>‘ನಾಯಿ ಕಚ್ಚಿದ್ದರಿಂದ ಎಮ್ಮೆ ಅನಾರೋಗ್ಯಕ್ಕೆ ಒಳಗಾಗಿತ್ತು. ಬಳಿಕ ಅದು ಮೃತಪಟ್ಟಿತ್ತು. ಪುಣ್ಯತಿಥಿ ಸಮಾರಂಭದಲ್ಲಿ ತಯಾರಿಸಿದ್ದ ರೈತಾವನ್ನು ಅದೇ ಎಮ್ಮೆಯ ಹಾಲಿನಿಂದ ತಯಾರಿಸಲಾಗಿತ್ತು. ಇದರಿಂದ ಸೋಂಕಿನ ಭೀತಿ ಕಾಡಲಾರಂಭಿಸಿತು. ಈಗ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದೇವೆ’ ಎಂದು ಗ್ರಾಮಸ್ಥ ಧರ್ಮಪಾಲ್ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>