<p><strong>ಮುಂಬೈ:</strong> ಮುಂಬೈನ ಉಪನಗರ ರೈಲು ಜಾಲದಲ್ಲಿ ಸಂಭವಿಸಿದ ಅವಘಡಗಳಲ್ಲಿ ಕಳೆದ 11 ವರ್ಷಗಳಲ್ಲಿ 29,970 ಮಂದಿ ಮೃತಪಟ್ಟಿದ್ದು, 30,214 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.</p>.<p>2014ರ ಜನವರಿಯಿಂದ ಕಳೆದ ಮೇವರೆಗೆ, ರೈಲುಗಳಿಂದ ಬಿದ್ದ ಕಾರಣ 6,760 ಪ್ರಯಾಣಿಕರು ಮೃತಪಟ್ಟಿದ್ದರೆ, 14,257 ಜನರು ಗಾಯಗೊಂಡಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಮುಂಬೈ ಉಪನಗರ ರೈಲ್ವೆ ಜಾಲದಲ್ಲಿ ನಿತ್ಯವೂ ಅಂದಾಜು 75 ಲಕ್ಷ ಜನರು ಪ್ರಯಾಣಿಸುತ್ತಾರೆ.</p>.<p><strong>‘ಸುರಕ್ಷತೆಗೆ ಯೋಜನೆ’:</strong> ‘ಉಪನಗರ ರೈಲುಗಳಲ್ಲಿ ಸಂಚರಿಸುವವರ ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಸ್ಟರ್ ಪ್ಲಾನ್ ರೂಪಿಸುತ್ತಿವೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮಂಗಳವಾರ ಹೇಳಿದ್ದಾರೆ.</p>.<p>‘ಮೆಟ್ರೊ ರೈಲು ಯೋಜನೆಗಳು ಪೂರ್ಣಗೊಳ್ಳುವುದು ವಿಳಂಬವಾಗುತ್ತಿದೆ. ಇದರಿಂದಾಗಿ ಉಪನಗರ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ’ ಎಂದೂ ಹೇಳಿದ್ದಾರೆ.</p>.<p>* 16087 ಹಳಿ ದಾಟುವಾಗ ಮೃತಪಟ್ಟವರ ಸಂಖ್ಯೆ </p><p>* 3369 ಹಳಿ ದಾಟುವಾಗ ಗಾಯಗೊಂಡವರ ಸಂಖ್ಯೆ </p><p>* 103 ರೈಲ್ವೆ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ </p><p>* 655 ರೈಲ್ವೆ ಕಂಬಕ್ಕೆ ಡಿಕ್ಕಿ ಹೊಡೆದು ಗಾಯಗೊಂಡವರ ಸಂಖ್ಯೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮುಂಬೈನ ಉಪನಗರ ರೈಲು ಜಾಲದಲ್ಲಿ ಸಂಭವಿಸಿದ ಅವಘಡಗಳಲ್ಲಿ ಕಳೆದ 11 ವರ್ಷಗಳಲ್ಲಿ 29,970 ಮಂದಿ ಮೃತಪಟ್ಟಿದ್ದು, 30,214 ಜನರು ಗಾಯಗೊಂಡಿದ್ದಾರೆ ಎಂದು ರೈಲ್ವೆ ಪೊಲೀಸ್ ಮೂಲಗಳು ಹೇಳಿವೆ.</p>.<p>2014ರ ಜನವರಿಯಿಂದ ಕಳೆದ ಮೇವರೆಗೆ, ರೈಲುಗಳಿಂದ ಬಿದ್ದ ಕಾರಣ 6,760 ಪ್ರಯಾಣಿಕರು ಮೃತಪಟ್ಟಿದ್ದರೆ, 14,257 ಜನರು ಗಾಯಗೊಂಡಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.</p>.<p>ಮುಂಬೈ ಉಪನಗರ ರೈಲ್ವೆ ಜಾಲದಲ್ಲಿ ನಿತ್ಯವೂ ಅಂದಾಜು 75 ಲಕ್ಷ ಜನರು ಪ್ರಯಾಣಿಸುತ್ತಾರೆ.</p>.<p><strong>‘ಸುರಕ್ಷತೆಗೆ ಯೋಜನೆ’:</strong> ‘ಉಪನಗರ ರೈಲುಗಳಲ್ಲಿ ಸಂಚರಿಸುವವರ ಸುರಕ್ಷತೆ ಹಾಗೂ ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಸ್ಟರ್ ಪ್ಲಾನ್ ರೂಪಿಸುತ್ತಿವೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮಂಗಳವಾರ ಹೇಳಿದ್ದಾರೆ.</p>.<p>‘ಮೆಟ್ರೊ ರೈಲು ಯೋಜನೆಗಳು ಪೂರ್ಣಗೊಳ್ಳುವುದು ವಿಳಂಬವಾಗುತ್ತಿದೆ. ಇದರಿಂದಾಗಿ ಉಪನಗರ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗುತ್ತಿದ್ದು, ಅಪಘಾತಗಳಿಗೂ ಕಾರಣವಾಗುತ್ತಿದೆ’ ಎಂದೂ ಹೇಳಿದ್ದಾರೆ.</p>.<p>* 16087 ಹಳಿ ದಾಟುವಾಗ ಮೃತಪಟ್ಟವರ ಸಂಖ್ಯೆ </p><p>* 3369 ಹಳಿ ದಾಟುವಾಗ ಗಾಯಗೊಂಡವರ ಸಂಖ್ಯೆ </p><p>* 103 ರೈಲ್ವೆ ಕಂಬಕ್ಕೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ </p><p>* 655 ರೈಲ್ವೆ ಕಂಬಕ್ಕೆ ಡಿಕ್ಕಿ ಹೊಡೆದು ಗಾಯಗೊಂಡವರ ಸಂಖ್ಯೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>