<p><strong>ನಾಗಪುರ:</strong> ಆಡಳಿತಾರೂಢ ಬಿಜೆಪಿಗೆ ಪರ್ಯಾಯವೊಂದು ಬೇಕಾಗಿದೆ. ಅದು ನಮ್ಮ ದೇಶದಲ್ಲಿಯೇ ನಿಲ್ಲುವಂಥ ಮತ್ತು ಕಾರ್ಯಸಾಧುವಾಗುವಂಥ ವ್ಯವಸ್ಥೆ ಆಗಿರಬೇಕು ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದರು.</p>.<p>‘ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಮೈತ್ರಿಕೂಟ ರಚಿಸುವ ಪ್ರಯತ್ನಗಳು ನಡೆಯುತ್ತಿವೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದ ಕೆಲ ಭಾಗಗಳಲ್ಲಿ ಬಿಜೆಪಿ ವಿರೋಧಿ ಭಾವನೆ ಹೆಚ್ಚಾಗುತ್ತಿದೆ. ಇಂಥ ಬದಲಾವಣೆಗಳನ್ನು ಗುರುತಿಸಿ, ಪರ್ಯಾಯದ ಭರವಸೆ ಮೂಡಿಸುವವರಿಗಾಗಿ ಜನರು ನಿರೀಕ್ಷಿಸುತ್ತಿದ್ದಾರೆ. ಅಂಥ ಪರ್ಯಾಯ ಈ ದೇಶದಲ್ಲಿ ನಿಲ್ಲುವಂತಿರಬೇಕು’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಪ್ರಸ್ತಾಪಿಸಿದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವಾಗ, ರಾಹುಲ್ಗಾಂಧಿ ದಕ್ಷಿಣ ಕೋರಿಯಾಗೆ ಭೇಟಿ ನೀಡಿ, ಅಲ್ಲಿನ ಪ್ರಧಾನಿ ಲೀ ನಾಕ್ಯಾನ್ ಅವರನ್ನು ಭೇಟಿಯಾಗಿದ್ದರು.</p>.<p>ಪೌರತ್ವ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಕುರಿತು ಪ್ರಸ್ತಾಪಿಸಿದ ಅವರು, ‘ಕೆಲ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದಂತೆ ದೇಶದಬಿಜೆಪಿಯೇತರ ಪಕ್ಷಗಳು ಒಗ್ಗೂಡುತ್ತಿವೆ ಎನಿಸುತ್ತದೆ’ ಎಂದರು.</p>.<p>ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಎದುರಿಸಲು ಸಂಘಟಿತ ಪ್ರಯತ್ನ ನಡೆಯಬೇಕಿದೆ. ಅದಕ್ಕೆ ಇನ್ನಷ್ಟು ಸಮಯ ಬೇಕಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ನಿರೀಕ್ಷಿತ. ಆದರೆ ಈ ಪ್ರತಿಭಟನೆ ಕೆಲವೇ ರಾಜ್ಯಗಳಿಗೆ ಸೀಮಿತವಾಗಬಹುದು.ಕೆಲ ರಾಜ್ಯಗಳಲ್ಲಿ ಈ ಕಾಯ್ದೆಗೆ ಸ್ವಾಗತ ಸಿಕ್ಕಿರುವುದು ಬಿಜೆಪಿಗೂ ಆಶ್ಚರ್ಯ ಉಂಟು ಮಾಡಿರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಪುರ:</strong> ಆಡಳಿತಾರೂಢ ಬಿಜೆಪಿಗೆ ಪರ್ಯಾಯವೊಂದು ಬೇಕಾಗಿದೆ. ಅದು ನಮ್ಮ ದೇಶದಲ್ಲಿಯೇ ನಿಲ್ಲುವಂಥ ಮತ್ತು ಕಾರ್ಯಸಾಧುವಾಗುವಂಥ ವ್ಯವಸ್ಥೆ ಆಗಿರಬೇಕು ಎಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದರು.</p>.<p>‘ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಮೈತ್ರಿಕೂಟ ರಚಿಸುವ ಪ್ರಯತ್ನಗಳು ನಡೆಯುತ್ತಿವೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದ ಕೆಲ ಭಾಗಗಳಲ್ಲಿ ಬಿಜೆಪಿ ವಿರೋಧಿ ಭಾವನೆ ಹೆಚ್ಚಾಗುತ್ತಿದೆ. ಇಂಥ ಬದಲಾವಣೆಗಳನ್ನು ಗುರುತಿಸಿ, ಪರ್ಯಾಯದ ಭರವಸೆ ಮೂಡಿಸುವವರಿಗಾಗಿ ಜನರು ನಿರೀಕ್ಷಿಸುತ್ತಿದ್ದಾರೆ. ಅಂಥ ಪರ್ಯಾಯ ಈ ದೇಶದಲ್ಲಿ ನಿಲ್ಲುವಂತಿರಬೇಕು’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಪ್ರಸ್ತಾಪಿಸಿದರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿದೇಶದ ವಿವಿಧೆಡೆ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವಾಗ, ರಾಹುಲ್ಗಾಂಧಿ ದಕ್ಷಿಣ ಕೋರಿಯಾಗೆ ಭೇಟಿ ನೀಡಿ, ಅಲ್ಲಿನ ಪ್ರಧಾನಿ ಲೀ ನಾಕ್ಯಾನ್ ಅವರನ್ನು ಭೇಟಿಯಾಗಿದ್ದರು.</p>.<p>ಪೌರತ್ವ ಕಾಯ್ದೆ ವಿರೋಧಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದ ಕುರಿತು ಪ್ರಸ್ತಾಪಿಸಿದ ಅವರು, ‘ಕೆಲ ನಿರ್ದಿಷ್ಟ ವಿಷಯಗಳಿಗೆ ಸಂಬಂಧಿಸಿದಂತೆ ದೇಶದಬಿಜೆಪಿಯೇತರ ಪಕ್ಷಗಳು ಒಗ್ಗೂಡುತ್ತಿವೆ ಎನಿಸುತ್ತದೆ’ ಎಂದರು.</p>.<p>ಆಡಳಿತಾರೂಢ ಬಿಜೆಪಿ ಸರ್ಕಾರವನ್ನು ಎದುರಿಸಲು ಸಂಘಟಿತ ಪ್ರಯತ್ನ ನಡೆಯಬೇಕಿದೆ. ಅದಕ್ಕೆ ಇನ್ನಷ್ಟು ಸಮಯ ಬೇಕಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.</p>.<p>ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ನಿರೀಕ್ಷಿತ. ಆದರೆ ಈ ಪ್ರತಿಭಟನೆ ಕೆಲವೇ ರಾಜ್ಯಗಳಿಗೆ ಸೀಮಿತವಾಗಬಹುದು.ಕೆಲ ರಾಜ್ಯಗಳಲ್ಲಿ ಈ ಕಾಯ್ದೆಗೆ ಸ್ವಾಗತ ಸಿಕ್ಕಿರುವುದು ಬಿಜೆಪಿಗೂ ಆಶ್ಚರ್ಯ ಉಂಟು ಮಾಡಿರಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>