‘ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಮೈತ್ರಿಕೂಟ ರಚಿಸುವ ಪ್ರಯತ್ನಗಳು ನಡೆಯುತ್ತಿವೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದ ಕೆಲ ಭಾಗಗಳಲ್ಲಿ ಬಿಜೆಪಿ ವಿರೋಧಿ ಭಾವನೆ ಹೆಚ್ಚಾಗುತ್ತಿದೆ. ಇಂಥ ಬದಲಾವಣೆಗಳನ್ನು ಗುರುತಿಸಿ, ಪರ್ಯಾಯದ ಭರವಸೆ ಮೂಡಿಸುವವರಿಗಾಗಿ ಜನರು ನಿರೀಕ್ಷಿಸುತ್ತಿದ್ದಾರೆ. ಅಂಥ ಪರ್ಯಾಯ ಈ ದೇಶದಲ್ಲಿ ನಿಲ್ಲುವಂತಿರಬೇಕು’ ಎಂದು ಪರೋಕ್ಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಪ್ರಸ್ತಾಪಿಸಿದರು.