<p>ನವದೆಹಲಿ (ಪಿಟಿಐ): ಇತರ ಹಿಂದುಳಿದ ವರ್ಗಗಳ (ಒಬಿಸಿ) ‘ಕೆನೆಪದರ’ ಆದಾಯ ಮಿತಿಯನ್ನು ತುರ್ತಾಗಿ ಪರಿಷ್ಕರಿಸಬೇಕಿದೆ ಎಂದು ಸಂಸದೀಯ ಸಮಿತಿ ತಿಳಿಸಿದೆ.</p>.<p>ಬಿಜೆಪಿ ಸಂಸದ ಗಣೇಶ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ಸಮಿತಿಯು ಶುಕ್ರವಾರ ಎಂಟನೇ ವರದಿಯನ್ನು ಸಂಸತ್ತಿಗೆ ಸಲ್ಲಿಸಿದ್ದು, ‘2017ರಲ್ಲಿ ಕೆನೆಪದರ ಆದಾಯ ಮಿತಿಯನ್ನು ವಾರ್ಷಿಕ ₹6.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ನಂತರ ಈ ಮಿತಿಯನ್ನು ಏರಿಸಿಲ್ಲ’ ಎಂದು ಹೇಳಿದೆ.</p>.<p>‘ಈಗಿರುವ ಮಿತಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಅರ್ಹ ಒಬಿಸಿ ಕುಟುಂಬದವರು ಮೀಸಲಾತಿ ಮತ್ತು ಸರ್ಕಾರ ಕಲ್ಯಾಣ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಅದು ತಿಳಿಸಿದೆ.</p>.<p>ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿಯಮಗಳ ಪ್ರಕಾರ, ‘ಕೆನೆಪದರದ ಮಿತಿಯನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಅಥವಾ ಅಗತ್ಯವಿದ್ದರೆ ಅದಕ್ಕೂ ಮುನ್ನ ಪರಿಷ್ಕರಿಸಬಹುದು’ ಎಂದೂ ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.</p>.<p>‘ಈಗಿರುವ ಕೆನೆಪದರದ ಮಿತಿ ಕಡಿಮೆಯಾಗಿದ್ದು, ಒಬಿಸಿಯ ಕೆಲವೇ ಕುಟುಂಬಗಳಿಗೆ ಅನುಕೂಲವಾಗುತ್ತಿದೆ. ಹಣದುಬ್ಬರ ಮತ್ತು ಆದಾಯದಲ್ಲಿನ ಏರಿಕೆಯನ್ನು ಗಣನೆಗೆ ತೆಗೆದುಕೊಂಡು ತುರ್ತಾಗಿ ಕೆನೆಪದರದ ಮಿತಿಯನ್ನು ಪರಿಷ್ಕರಿಸುವ ಅಗತ್ಯವಿದೆ’ ಎಂದು ಅದು ಪ್ರತಿಪಾದಿಸಿದೆ.</p>.<p>‘ಮೂರು ವರ್ಷಗಳು ಅಥವಾ ಅದಕ್ಕೂ ಮುನ್ನವೇ ಈ ಮಿತಿಯನ್ನು ಪರಿಷ್ಕರಿಸಲು ನಿಯಮದಲ್ಲಿ ಅವಕಾಶವಿದ್ದರೂ 2017ರ ಬಳಿಕ ಪರಿಷ್ಕರಣೆ ಆಗಿಲ್ಲ’ ಎಂದು ಅದು ವರದಿಯಲ್ಲಿ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಇತರ ಹಿಂದುಳಿದ ವರ್ಗಗಳ (ಒಬಿಸಿ) ‘ಕೆನೆಪದರ’ ಆದಾಯ ಮಿತಿಯನ್ನು ತುರ್ತಾಗಿ ಪರಿಷ್ಕರಿಸಬೇಕಿದೆ ಎಂದು ಸಂಸದೀಯ ಸಮಿತಿ ತಿಳಿಸಿದೆ.</p>.<p>ಬಿಜೆಪಿ ಸಂಸದ ಗಣೇಶ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ಸಮಿತಿಯು ಶುಕ್ರವಾರ ಎಂಟನೇ ವರದಿಯನ್ನು ಸಂಸತ್ತಿಗೆ ಸಲ್ಲಿಸಿದ್ದು, ‘2017ರಲ್ಲಿ ಕೆನೆಪದರ ಆದಾಯ ಮಿತಿಯನ್ನು ವಾರ್ಷಿಕ ₹6.5 ಲಕ್ಷದಿಂದ ₹8 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ನಂತರ ಈ ಮಿತಿಯನ್ನು ಏರಿಸಿಲ್ಲ’ ಎಂದು ಹೇಳಿದೆ.</p>.<p>‘ಈಗಿರುವ ಮಿತಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಅರ್ಹ ಒಬಿಸಿ ಕುಟುಂಬದವರು ಮೀಸಲಾತಿ ಮತ್ತು ಸರ್ಕಾರ ಕಲ್ಯಾಣ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಅದು ತಿಳಿಸಿದೆ.</p>.<p>ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿಯಮಗಳ ಪ್ರಕಾರ, ‘ಕೆನೆಪದರದ ಮಿತಿಯನ್ನು ಪ್ರತಿ ಮೂರು ವರ್ಷಗಳಿಗೊಮ್ಮೆ ಅಥವಾ ಅಗತ್ಯವಿದ್ದರೆ ಅದಕ್ಕೂ ಮುನ್ನ ಪರಿಷ್ಕರಿಸಬಹುದು’ ಎಂದೂ ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.</p>.<p>‘ಈಗಿರುವ ಕೆನೆಪದರದ ಮಿತಿ ಕಡಿಮೆಯಾಗಿದ್ದು, ಒಬಿಸಿಯ ಕೆಲವೇ ಕುಟುಂಬಗಳಿಗೆ ಅನುಕೂಲವಾಗುತ್ತಿದೆ. ಹಣದುಬ್ಬರ ಮತ್ತು ಆದಾಯದಲ್ಲಿನ ಏರಿಕೆಯನ್ನು ಗಣನೆಗೆ ತೆಗೆದುಕೊಂಡು ತುರ್ತಾಗಿ ಕೆನೆಪದರದ ಮಿತಿಯನ್ನು ಪರಿಷ್ಕರಿಸುವ ಅಗತ್ಯವಿದೆ’ ಎಂದು ಅದು ಪ್ರತಿಪಾದಿಸಿದೆ.</p>.<p>‘ಮೂರು ವರ್ಷಗಳು ಅಥವಾ ಅದಕ್ಕೂ ಮುನ್ನವೇ ಈ ಮಿತಿಯನ್ನು ಪರಿಷ್ಕರಿಸಲು ನಿಯಮದಲ್ಲಿ ಅವಕಾಶವಿದ್ದರೂ 2017ರ ಬಳಿಕ ಪರಿಷ್ಕರಣೆ ಆಗಿಲ್ಲ’ ಎಂದು ಅದು ವರದಿಯಲ್ಲಿ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>