<p><strong>ನವದೆಹಲಿ:</strong> ಗಡಿ ವಿಷಯವಾಗಿ ಪದೇ ಪದೇ ತಂಟೆ ತೆಗೆಯುವ ಚೀನಾಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಚಾಟಿ ಬೀಸಿದ್ದಾರೆ. ಪರಿಸ್ಥಿತಿಯನ್ನು ಮತ್ತಷ್ಟೂ ಸಂಕೀರ್ಣಗೊಳಿಸುವ ಚಟುವಟಿಕೆಗಳನ್ನು ಬಿಡಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.</p>.<p>ಆಕ್ರಮಣಕಾರಿ ಚಟುವಟಿಕೆಗಳನ್ನು ಕೈಬಿಡುವ ನಿಟ್ಟಿನಲ್ಲಿ ಸ್ವಯಂ ನಿಯಂತ್ರಣ ಹಾಗೂ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಕ್ರಮಗಳಿಂದ ದೂರ ಇರುವುದರಿಂದ ಉಭಯ ದೇಶಗಳ ನಡುವೆ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಹೇಳಿದರು.</p>.<p>ಆಸಿಯಾನ್ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ರಕ್ಷಣಾ ಸಚಿವರ ಸಭೆಯಲ್ಲಿ (ಎಡಿಎಂಎಂ–ಪ್ಲಸ್) ಅವರು ಮಾತನಾಡಿದರು. ಆನ್ಲೈನ್ ಮೂಲಕ ನಡೆದ ಸಭೆಯಲ್ಲಿ ಚೀನಾ ರಕ್ಷಣಾ ಸಚಿವ ವೀ ಫೆಂಗ್ ಅವರೂ ಇದ್ದರು. ಈ ಒಕ್ಕೂಟದ ಸದಸ್ಯ ರಾಷ್ಟ್ರಗಳ ಸಂಖ್ಯೆ 10.</p>.<p>ಲಡಾಖ್ನ ಪೂರ್ವ ಗಡಿಯಲ್ಲಿ ಚೀನಾ ಕ್ಯಾತೆ ತೆಗೆದ ಕಾರಣ ಕಳೆದ ಏಳು ತಿಂಗಳಿನಿಂದ ನಿರ್ಮಾಣವಾಗಿರುವ ಪ್ರಕ್ಷುಬ್ಧ ಸ್ಥಿತಿ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ಏಷ್ಯಾದ ಈ ಪ್ರದೇಶದಲ್ಲಿ ಸದ್ಯದ ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಆದರೆ, ಪ್ರಾದೇಶಿಕ ಸಹಕಾರದ ಮೂಲಕ ಭದ್ರತೆ, ಬಹುತ್ವವನ್ನು ಕಾಪಾಡುವಲ್ಲಿ ಆಸಿಯಾನ್ ನೇತೃತ್ವದ ವಿವಿಧ ವೇದಿಕೆಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯ’ ಎಂದು ರಾಜನಾಥ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಗಡಿ ವಿಷಯವಾಗಿ ಪದೇ ಪದೇ ತಂಟೆ ತೆಗೆಯುವ ಚೀನಾಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಚಾಟಿ ಬೀಸಿದ್ದಾರೆ. ಪರಿಸ್ಥಿತಿಯನ್ನು ಮತ್ತಷ್ಟೂ ಸಂಕೀರ್ಣಗೊಳಿಸುವ ಚಟುವಟಿಕೆಗಳನ್ನು ಬಿಡಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.</p>.<p>ಆಕ್ರಮಣಕಾರಿ ಚಟುವಟಿಕೆಗಳನ್ನು ಕೈಬಿಡುವ ನಿಟ್ಟಿನಲ್ಲಿ ಸ್ವಯಂ ನಿಯಂತ್ರಣ ಹಾಗೂ ಪರಿಸ್ಥಿತಿಯನ್ನು ಸಂಕೀರ್ಣಗೊಳಿಸುವ ಕ್ರಮಗಳಿಂದ ದೂರ ಇರುವುದರಿಂದ ಉಭಯ ದೇಶಗಳ ನಡುವೆ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ಹೇಳಿದರು.</p>.<p>ಆಸಿಯಾನ್ (ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ) ರಕ್ಷಣಾ ಸಚಿವರ ಸಭೆಯಲ್ಲಿ (ಎಡಿಎಂಎಂ–ಪ್ಲಸ್) ಅವರು ಮಾತನಾಡಿದರು. ಆನ್ಲೈನ್ ಮೂಲಕ ನಡೆದ ಸಭೆಯಲ್ಲಿ ಚೀನಾ ರಕ್ಷಣಾ ಸಚಿವ ವೀ ಫೆಂಗ್ ಅವರೂ ಇದ್ದರು. ಈ ಒಕ್ಕೂಟದ ಸದಸ್ಯ ರಾಷ್ಟ್ರಗಳ ಸಂಖ್ಯೆ 10.</p>.<p>ಲಡಾಖ್ನ ಪೂರ್ವ ಗಡಿಯಲ್ಲಿ ಚೀನಾ ಕ್ಯಾತೆ ತೆಗೆದ ಕಾರಣ ಕಳೆದ ಏಳು ತಿಂಗಳಿನಿಂದ ನಿರ್ಮಾಣವಾಗಿರುವ ಪ್ರಕ್ಷುಬ್ಧ ಸ್ಥಿತಿ ಹಿನ್ನೆಲೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆಗೆ ಮಹತ್ವ ಬಂದಿದೆ.</p>.<p>‘ಏಷ್ಯಾದ ಈ ಪ್ರದೇಶದಲ್ಲಿ ಸದ್ಯದ ಪರಿಸ್ಥಿತಿ ತೀವ್ರ ಒತ್ತಡದಲ್ಲಿದೆ. ಆದರೆ, ಪ್ರಾದೇಶಿಕ ಸಹಕಾರದ ಮೂಲಕ ಭದ್ರತೆ, ಬಹುತ್ವವನ್ನು ಕಾಪಾಡುವಲ್ಲಿ ಆಸಿಯಾನ್ ನೇತೃತ್ವದ ವಿವಿಧ ವೇದಿಕೆಗಳು ವಹಿಸುತ್ತಿರುವ ಪಾತ್ರ ಶ್ಲಾಘನೀಯ’ ಎಂದು ರಾಜನಾಥ್ ಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>