ನವದೆಹಲಿ: ಪಿಡುಗು ಇದ್ದಾಗ ಅಥವಾ ಇಲ್ಲದಿದ್ದಾಗ, ಮೃತದೇಹಗಳ ಅಂತ್ಯಸಂಸ್ಕಾರ ಗೌರವಯುತವಾಗಿ ನೆರವೇರಬೇಕು. ಇದಕ್ಕಾಗಿ, ಏಕರೂಪ ರಾಷ್ಟ್ರೀಯ ನೀತಿಯನ್ನು ರೂಪಿಸುವ ಅಗತ್ಯ ಇದೆ ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.
ಅರ್ಜಿ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್ಗೆ ಮುಂದೂಡಿತು.