<p><strong>ನವದೆಹಲಿ</strong>: ‘ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಹಕ್ಕುಗಳು ಅಪಾಯದಲ್ಲಿರುವ ಸಂದರ್ಭದ ಸೃಷ್ಟಿಗೆ ಕಾರಣವಾದ ‘ಜನರು, ಅವರ ಒಲವು ಮತ್ತು ಅದಕ್ಕೆ ಕಾರಣಗಳನ್ನು ತಿಳಿಯಲು 1975ರಲ್ಲಿ ಹೇರಲಾದ ತುರ್ತುಪರಿಸ್ಥಿತಿಯ ದಿನಗಳನ್ನು ಸದಾ ನೆನಪಿನಲ್ಲಿಡಬೇಕು ಎಂದು ಆರ್ಎಸ್ಎಸ್ನ ಹಿರಿಯ ಮುಖಂಡ ಸುನಿಲ್ ಅಂಬೇಕರ್ ಹೇಳಿದರು.</p>.<p>ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಪರೋಕ್ಷವಾಗಿ ಉಲ್ಲೇಖಿಸಿ, ‘ಭಾರತ ಸ್ವತಂತ್ರ ಗಣರಾಜ್ಯವಾದ 25 ವರ್ಷಗಳ ಒಳಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಅಪಾಯಕ್ಕೆ ದೂಡಲಾಯಿತು’ ಎಂದು ಹೇಳಿದರು.</p>.<p>‘ಈ ಬೆದರಿಕೆ ವಿದೇಶದಿಂದ ಬಂದಿದ್ದಲ್ಲ; ನಮ್ಮದೇ ರಾಜಕೀಯ ವ್ಯವಸ್ಥೆಯಿಂದ ಬಂದೊದಗಿತ್ತು’ ಎಂದರು.</p>.<p>ಆರ್ಎಸ್ಎಸ್ ಅಂಗಸಂಸ್ಥೆ ಇಂದ್ರಪ್ರಸ್ಥ ವಿಶ್ವ ಸಂವಾದ ಕೇಂದ್ರದಲ್ಲಿ ಆಯೋಜಿಸಿದ್ದ ವಾರ್ಷಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾನು ಚಿಕ್ಕವನಿದ್ದೆ. ದೇಶದ ವಿದ್ಯಾರ್ಥಿಗಳು, ಸಂಘದ ಸ್ವಯಂ ಸೇವಕರು, ಜನರು, ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದರು. ಹಲವಾರು ರೀತಿಯ ಕಿರುಕುಳ ಅನುಭವಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಹಕ್ಕುಗಳು ಅಪಾಯದಲ್ಲಿರುವ ಸಂದರ್ಭದ ಸೃಷ್ಟಿಗೆ ಕಾರಣವಾದ ‘ಜನರು, ಅವರ ಒಲವು ಮತ್ತು ಅದಕ್ಕೆ ಕಾರಣಗಳನ್ನು ತಿಳಿಯಲು 1975ರಲ್ಲಿ ಹೇರಲಾದ ತುರ್ತುಪರಿಸ್ಥಿತಿಯ ದಿನಗಳನ್ನು ಸದಾ ನೆನಪಿನಲ್ಲಿಡಬೇಕು ಎಂದು ಆರ್ಎಸ್ಎಸ್ನ ಹಿರಿಯ ಮುಖಂಡ ಸುನಿಲ್ ಅಂಬೇಕರ್ ಹೇಳಿದರು.</p>.<p>ಆಗ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಪರೋಕ್ಷವಾಗಿ ಉಲ್ಲೇಖಿಸಿ, ‘ಭಾರತ ಸ್ವತಂತ್ರ ಗಣರಾಜ್ಯವಾದ 25 ವರ್ಷಗಳ ಒಳಗೆ ತುರ್ತು ಪರಿಸ್ಥಿತಿಯನ್ನು ಹೇರಲಾಯಿತು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಅಪಾಯಕ್ಕೆ ದೂಡಲಾಯಿತು’ ಎಂದು ಹೇಳಿದರು.</p>.<p>‘ಈ ಬೆದರಿಕೆ ವಿದೇಶದಿಂದ ಬಂದಿದ್ದಲ್ಲ; ನಮ್ಮದೇ ರಾಜಕೀಯ ವ್ಯವಸ್ಥೆಯಿಂದ ಬಂದೊದಗಿತ್ತು’ ಎಂದರು.</p>.<p>ಆರ್ಎಸ್ಎಸ್ ಅಂಗಸಂಸ್ಥೆ ಇಂದ್ರಪ್ರಸ್ಥ ವಿಶ್ವ ಸಂವಾದ ಕೇಂದ್ರದಲ್ಲಿ ಆಯೋಜಿಸಿದ್ದ ವಾರ್ಷಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.</p>.<p>‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾನು ಚಿಕ್ಕವನಿದ್ದೆ. ದೇಶದ ವಿದ್ಯಾರ್ಥಿಗಳು, ಸಂಘದ ಸ್ವಯಂ ಸೇವಕರು, ಜನರು, ಪ್ರತಿಯೊಬ್ಬರೂ ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದರು. ಹಲವಾರು ರೀತಿಯ ಕಿರುಕುಳ ಅನುಭವಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>