<p><strong>ಕೋಟಾ(ರಾಜಸ್ತಾನ):</strong> ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಆಕಾಂಕ್ಷಿಯಾಗಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳು ಇಲ್ಲಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಜೀಶನ್ ಜಮ್ಮು ಮತ್ತು ಕಾಶ್ಮೀರದ ನಿವಾಸಿಯಾಗಿದ್ದು, ಕೋಟಾದ ಕೋಚಿಂಗ್ ಸಂಸ್ಥೆಯೊಂದರಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದರು. ಇಲ್ಲಿನ ಪ್ರತಾಪ್ ಚೌರಾಹಾದಲ್ಲಿರುವ ಪಿಜಿಯೊಂದರಲ್ಲಿ ಉಳಿದುಕೊಂಡಿದ್ದರು.</p><p>‘ಆತ್ಮಹತ್ಯೆಗೆ ಶರಣಾಗುವ ಮುನ್ನ ತನ್ನ ಸಂಬಂಧಿ ಬುರ್ಹಾನ್ ಎಂಬುವವರಿಗೆ ಕರೆ ಮಾಡಿದ್ದ ಜೀಶನ್, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು’ ಎಂದು ಮಹಾವೀರ್ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರಮೇಶ್ ಕಾವ್ಯಾ ತಿಳಿಸಿದ್ದಾರೆ.</p><p>ಬುರ್ಹಾನ್ ಅವರು ಅದೇ ಪಿಜಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಮಮತಾಗೆ ಕರೆ ಮಾಡಿ ಜೀಶನ್ ಕೋಣೆಗೆ ತೆರಳುವಂತೆ ಹೇಳಿದ್ದಾರೆ. ಮಮತಾ ಅವರು ಜೀಶನ್ ಕೋಣೆಗೆ ಹೋದಾಗ ಒಳಗಿನಿಂದ ಚಿಲಕ ಹಾಕಿರುವುದನ್ನು ಗಮನಿಸಿದ್ದಾರೆ. ತಕ್ಷಣ ಸಹಾಯಕ್ಕಾಗಿ ಕೂಗಿದ್ದಾರೆ.</p><p>ಅಷ್ಟರಲ್ಲೇ ಜೀಶನ್ ನೇಣು ಬಿಗಿದುಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಕೋಟಾದಲ್ಲಿ ಈ ವರ್ಷದ ಜನವರಿಯಿಂದ ಈವರಗೆ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ತಿಂಗಳಲ್ಲಿ ಇದು ಎರಡನೇ ಪ್ರಕರಣವಾಗಿದ್ದು, ಮೇ 3ರಂದು ಮಧ್ಯಪ್ರದೇಶದಿಂದ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಟಾ(ರಾಜಸ್ತಾನ):</strong> ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಆಕಾಂಕ್ಷಿಯಾಗಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳು ಇಲ್ಲಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಜೀಶನ್ ಜಮ್ಮು ಮತ್ತು ಕಾಶ್ಮೀರದ ನಿವಾಸಿಯಾಗಿದ್ದು, ಕೋಟಾದ ಕೋಚಿಂಗ್ ಸಂಸ್ಥೆಯೊಂದರಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದರು. ಇಲ್ಲಿನ ಪ್ರತಾಪ್ ಚೌರಾಹಾದಲ್ಲಿರುವ ಪಿಜಿಯೊಂದರಲ್ಲಿ ಉಳಿದುಕೊಂಡಿದ್ದರು.</p><p>‘ಆತ್ಮಹತ್ಯೆಗೆ ಶರಣಾಗುವ ಮುನ್ನ ತನ್ನ ಸಂಬಂಧಿ ಬುರ್ಹಾನ್ ಎಂಬುವವರಿಗೆ ಕರೆ ಮಾಡಿದ್ದ ಜೀಶನ್, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು’ ಎಂದು ಮಹಾವೀರ್ ನಗರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರಮೇಶ್ ಕಾವ್ಯಾ ತಿಳಿಸಿದ್ದಾರೆ.</p><p>ಬುರ್ಹಾನ್ ಅವರು ಅದೇ ಪಿಜಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಮಮತಾಗೆ ಕರೆ ಮಾಡಿ ಜೀಶನ್ ಕೋಣೆಗೆ ತೆರಳುವಂತೆ ಹೇಳಿದ್ದಾರೆ. ಮಮತಾ ಅವರು ಜೀಶನ್ ಕೋಣೆಗೆ ಹೋದಾಗ ಒಳಗಿನಿಂದ ಚಿಲಕ ಹಾಕಿರುವುದನ್ನು ಗಮನಿಸಿದ್ದಾರೆ. ತಕ್ಷಣ ಸಹಾಯಕ್ಕಾಗಿ ಕೂಗಿದ್ದಾರೆ.</p><p>ಅಷ್ಟರಲ್ಲೇ ಜೀಶನ್ ನೇಣು ಬಿಗಿದುಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಕೋಟಾದಲ್ಲಿ ಈ ವರ್ಷದ ಜನವರಿಯಿಂದ ಈವರಗೆ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ತಿಂಗಳಲ್ಲಿ ಇದು ಎರಡನೇ ಪ್ರಕರಣವಾಗಿದ್ದು, ಮೇ 3ರಂದು ಮಧ್ಯಪ್ರದೇಶದಿಂದ ಬಂದಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>