<p><strong>ನವದೆಹಲಿ</strong>: 2026ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕೇಂದ್ರಬಿಂದುವಾಗಿರುವ ‘Guess Paper’ ಅನ್ನು ಖರೀದಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಆಯುರ್ವೇದ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪದವಿ(ಬಿಎಎಂಎಸ್) ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.</p><p>ಆರೋಪಿಯನ್ನು ಶುಭಂ ಖೈರ್ನರ್ ಎಂದು ಗುರುತಿಸಲಾಗಿದೆ. ಟೆಲಿಗ್ರಾಮ್ ಮೂಲಕ ಪ್ರಶ್ನೆ ಪತ್ರಿಕೆ ಖರೀದಿಸಿದ ಆತ, ಹರಿಯಾಣ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಖೈರ್ನರ್ ಅವರನ್ನು ನಾಸಿಕ್ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.</p><p>ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರ ತನಿಖಾ ದಳದ ನಾಲ್ಕು ತಂಡಗಳು ಖೈರ್ನರ್ ಅವರನ್ನು ವಶಕ್ಕೆ ಪಡೆಯಲು ನಾಸಿಕ್ಗೆ ಆಗಮಿಸಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p><p>ಈ ಬಂಧನವು ನಾಸಿಕ್ ಮುದ್ರಣಾಲಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅನುಮಾನಗಳಿಗೆ ಇಂಬು ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಅಲ್ಲಿ ಮುದ್ರಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.</p><p>ಪದವಿಪೂರ್ವ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ಮೇ 3 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅನ್ನು ನಡೆಸಿತ್ತು.</p><p>ಪರೀಕ್ಷೆ ನಡೆದು ಒಂದು ವಾರಕ್ಕೂ ಹೆಚ್ಚು ಸಮಯದ ನಂತರ ಮೇ 12 ರಂದು, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಬಳಿಕ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2026ರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಕೇಂದ್ರಬಿಂದುವಾಗಿರುವ ‘Guess Paper’ ಅನ್ನು ಖರೀದಿಸಿದ ಆರೋಪದ ಮೇಲೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಆಯುರ್ವೇದ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪದವಿ(ಬಿಎಎಂಎಸ್) ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.</p><p>ಆರೋಪಿಯನ್ನು ಶುಭಂ ಖೈರ್ನರ್ ಎಂದು ಗುರುತಿಸಲಾಗಿದೆ. ಟೆಲಿಗ್ರಾಮ್ ಮೂಲಕ ಪ್ರಶ್ನೆ ಪತ್ರಿಕೆ ಖರೀದಿಸಿದ ಆತ, ಹರಿಯಾಣ ಮೂಲದ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಖೈರ್ನರ್ ಅವರನ್ನು ನಾಸಿಕ್ ಅಪರಾಧ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.</p><p>ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರ ತನಿಖಾ ದಳದ ನಾಲ್ಕು ತಂಡಗಳು ಖೈರ್ನರ್ ಅವರನ್ನು ವಶಕ್ಕೆ ಪಡೆಯಲು ನಾಸಿಕ್ಗೆ ಆಗಮಿಸಿವೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p><p>ಈ ಬಂಧನವು ನಾಸಿಕ್ ಮುದ್ರಣಾಲಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಅನುಮಾನಗಳಿಗೆ ಇಂಬು ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಅಲ್ಲಿ ಮುದ್ರಿಸಲಾಗಿಲ್ಲ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ.</p><p>ಪದವಿಪೂರ್ವ ಮಟ್ಟದಲ್ಲಿ ವೈದ್ಯಕೀಯ ಶಿಕ್ಷಣ ಕೋರ್ಸ್ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ಟಿಎ) ಮೇ 3 ರಂದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅನ್ನು ನಡೆಸಿತ್ತು.</p><p>ಪರೀಕ್ಷೆ ನಡೆದು ಒಂದು ವಾರಕ್ಕೂ ಹೆಚ್ಚು ಸಮಯದ ನಂತರ ಮೇ 12 ರಂದು, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಕೇಳಿಬಂದ ಬಳಿಕ ಎನ್ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>