<p><strong>ಲಾತೂರ್ (ಮಹಾರಾಷ್ಟ್ರ):</strong> ನೀಟ್–ಯುಜಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ಪಡೆ ಬಂಧಿಸಿದ್ದ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕರೊಬ್ಬರನ್ನು ಇಲ್ಲಿನ ನ್ಯಾಯಾಲಯ ಜುಲೈ 2ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. </p>.<p>ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಶಿಕ್ಷಕ ಸಂಜಯ್ ಜಾಧವ್ ಅವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದರು. ಮಂಗಳವಾರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. </p>.<p>ಮೇ 5ರಂದು ನಡೆದಿದ್ದ ‘ನೀಟ್’ನಲ್ಲಿ ಹಣ ನೀಡಲು ಸಿದ್ಧವಿದ್ದ ಅಭ್ಯರ್ಥಿಗಳಿಗೆ ನೆರವಾಗುವುದಕ್ಕಾಗಿ ಅಕ್ರಮ ಜಾಲವೊಂದನ್ನು ನಿರ್ವಹಿಸುತ್ತಿದ್ದ ಆರೋಪದಲ್ಲಿ ಎಟಿಎಸ್ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪೈಕಿ ಜಿಲ್ಲಾ ಪರಿಷತ್ ಶಾಲೆಯ ಮುಖ್ಯ ಶಿಕ್ಷಕ ಜಲೀಲ್ ಖಾನ್ ಉಮರ್ ಖಾನ್ ಪಠಾಣ್ ಮತ್ತು ಜಾಧವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ. </p>.<p>ಪಠಾಣ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನೂ ಜುಲೈ 2ರವರೆಗೆ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿತ್ತು. </p>.<p><strong>ನೀಟ್ ರದ್ದತಿಗೆ ಎಸ್ಪಿ ಆಗ್ರಹ (ಲಖನೌ ವರದಿ)</strong>: ನೀಟ್–ಯುಜಿ ಅಕ್ರಮದ ವಿರುದ್ಧ ಮಂಗಳವಾರ ಲಖನೌದಲ್ಲಿ ಪ್ರತಿಭಟನೆ ನಡೆಸಿರುವ ಸಮಾಜವಾದಿ ಪಕ್ಷದ ಯುವ ಘಟಕ, ನೀಟ್ ರದ್ದು ಮಾಡಬೇಕು ಮತ್ತು ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. </p>.<p>ಪಕ್ಷದ ಪ್ರಧಾನ ಕಚೇರಿಯಿಂದ ಮೆರಣಿಗೆ ಆರಂಭಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೆರವಣಿಗೆ ತಡೆಯಲು ವಿಕ್ರಮಾದಿತ್ಯ ಮಾರ್ಗದಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರವನ್ನು ನಡೆಸಿದರಲ್ಲದೆ, ಎಲ್ಲರನ್ನೂ ವಶಕ್ಕೆ ಪಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾತೂರ್ (ಮಹಾರಾಷ್ಟ್ರ):</strong> ನೀಟ್–ಯುಜಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ಪಡೆ ಬಂಧಿಸಿದ್ದ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕರೊಬ್ಬರನ್ನು ಇಲ್ಲಿನ ನ್ಯಾಯಾಲಯ ಜುಲೈ 2ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. </p>.<p>ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ಶಿಕ್ಷಕ ಸಂಜಯ್ ಜಾಧವ್ ಅವರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದರು. ಮಂಗಳವಾರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. </p>.<p>ಮೇ 5ರಂದು ನಡೆದಿದ್ದ ‘ನೀಟ್’ನಲ್ಲಿ ಹಣ ನೀಡಲು ಸಿದ್ಧವಿದ್ದ ಅಭ್ಯರ್ಥಿಗಳಿಗೆ ನೆರವಾಗುವುದಕ್ಕಾಗಿ ಅಕ್ರಮ ಜಾಲವೊಂದನ್ನು ನಿರ್ವಹಿಸುತ್ತಿದ್ದ ಆರೋಪದಲ್ಲಿ ಎಟಿಎಸ್ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಪೈಕಿ ಜಿಲ್ಲಾ ಪರಿಷತ್ ಶಾಲೆಯ ಮುಖ್ಯ ಶಿಕ್ಷಕ ಜಲೀಲ್ ಖಾನ್ ಉಮರ್ ಖಾನ್ ಪಠಾಣ್ ಮತ್ತು ಜಾಧವ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ. </p>.<p>ಪಠಾಣ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನೂ ಜುಲೈ 2ರವರೆಗೆ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿತ್ತು. </p>.<p><strong>ನೀಟ್ ರದ್ದತಿಗೆ ಎಸ್ಪಿ ಆಗ್ರಹ (ಲಖನೌ ವರದಿ)</strong>: ನೀಟ್–ಯುಜಿ ಅಕ್ರಮದ ವಿರುದ್ಧ ಮಂಗಳವಾರ ಲಖನೌದಲ್ಲಿ ಪ್ರತಿಭಟನೆ ನಡೆಸಿರುವ ಸಮಾಜವಾದಿ ಪಕ್ಷದ ಯುವ ಘಟಕ, ನೀಟ್ ರದ್ದು ಮಾಡಬೇಕು ಮತ್ತು ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ. </p>.<p>ಪಕ್ಷದ ಪ್ರಧಾನ ಕಚೇರಿಯಿಂದ ಮೆರಣಿಗೆ ಆರಂಭಿಸಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೆರವಣಿಗೆ ತಡೆಯಲು ವಿಕ್ರಮಾದಿತ್ಯ ಮಾರ್ಗದಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್ಗಳನ್ನು ಹತ್ತಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರವನ್ನು ನಡೆಸಿದರಲ್ಲದೆ, ಎಲ್ಲರನ್ನೂ ವಶಕ್ಕೆ ಪಡೆದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>