<p><strong>ನವದೆಹಲಿ:</strong> ದೇಶದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಲಾತೂರ್ ಮೂಲದ ವೈದ್ಯ (ಪೀಡಿಯಾಟ್ರಿಷಿಯನ್) ಹಾಗೂ ಭೌತಶಾಸ್ತ್ರ ಶಿಕ್ಷಕನನ್ನು ದೆಹಲಿ ನ್ಯಾಯಾಲಯವು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. </p><p>ವಿಶೇಷ ನ್ಯಾಯಾಧೀಶರಾದ ವಿದ್ಯಾ ಪ್ರಕಾಶ್ ಅವರನ್ನೊಳಗೊಂಡ ಪೀಠವು ತನಿಖಾ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿ ಈ ಆದೇಶ ನೀಡಿದೆ. ಆರೋಪಿಗಳಾದ ಡಾ. ಮನೋಜ್ ಶಿರೂರೆ ಮತ್ತು ಭೌತಶಾಸ್ತ್ರ ಶಿಕ್ಷಕ ತೇಜಸ್ ಹರ್ಷದ್ಕುಮಾರ್ ಶಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜೂನ್ 1ರವರೆಗೆ ಸಿಬಿಐ ಕಸ್ಟಡಿಗೆ ನೀಡಲಾಗಿದ್ದು, ಅಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದೆ.</p>.ಪ್ರಜಾವಾಣಿ ಪಾಡ್ಕಾಸ್ಟ್ | ಸಿಕ್ಸರ್ ವೈಭವವೋ..? ರನ್ಗಳ ಅಭಿಷೇಕವೋ..?.1-N-2-3-4-5: ಬೈಕ್ನ ಈ ಗಿಯರ್ ಪ್ಯಾಟರ್ನ್ ಹಿಂದಿರುವ ಸೀಕ್ರೆಟ್ ಗೊತ್ತಾ?. <p>ಮಹಾರಾಷ್ಟ್ರದ ಲಾತೂರ್ನಲ್ಲಿ 'ರೇಣುಕಾಯಿ ಕೆಮಿಸ್ಟ್ರಿ ಕ್ಲಾಸಸ್' ನಡೆಸುತ್ತಿರುವ ಶಿವರಾಜ್ ರಘುನಾಥ್ ಮೊಟೇಗಾಂವ್ಕರ್ ಅವರ ಮಗ ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ರಸಾಯನಶಾಸ್ತ್ರದ ಪ್ರಶ್ನೆಗಳನ್ನು ಒದಗಿಸುವಲ್ಲಿ ಡಾ. ಮನೋಜ್ ಶಿರೂರೆ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸಿಬಿಐ ಆರೋಪಿಸಿದೆ. ಈ ಪ್ರಶ್ನೆಗಳನ್ನು ನೀಟ್ ಪೇಪರ್ ಸೆಟ್ಟರ್ ಪಿ.ವಿ. ಕುಲಕರ್ಣಿ ಅವರಿಂದ ಪಡೆಯಲಾಗಿತ್ತು ಎನ್ನಲಾಗಿದೆ. ಈ ಹಿಂದೆಯೇ ಮೊಟೇಗಾಂವ್ಕರ್ ಅವರನ್ನು ಬಂಧಿಸಲಾಗಿದೆ.</p><p>ಪುಣೆ ಮೂಲದ 'ಡಾ. ಅಭಂಗ್ ಪ್ರಭು ಮೆಡಿಕಲ್ ಅಕಾಡೆಮಿ' ಕೋಚಿಂಗ್ ಸೆಂಟರ್ನ ಭೌತಶಾಸ್ತ್ರ ಶಿಕ್ಷಕ ತೇಜಸ್ ಹರ್ಷದ್ಕುಮಾರ್ ಶಾ, ಈ ಹಿಂದೆ ಬಂಧಿತಳಾಗಿದ್ದ ಮನೀಷಾ ಹವಾಲ್ದಾರ್ ಎಂಬಾಕೆಯಿಂದ 2026ರ ನೀಟ್ ಪರೀಕ್ಷೆಯ ಭೌತಶಾಸ್ತ್ರದ ಪ್ರಶ್ನೆಗಳನ್ನು ಪಡೆದುಕೊಂಡಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.</p>.ರಾಜೀನಾಮೆ ವದಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?.ಸಿಎಂ ಸ್ಥಾನಕ್ಕೆ ರಾಜೀನಾಮೆ ವದಂತಿ: ಸಿದ್ದರಾಮಯ್ಯ ನಿವಾಸದ ಮುಂದೆ ಜನಜಾತ್ರೆ. <p>ಈ ಇಬ್ಬರ ಬಂಧನದೊಂದಿಗೆ ನೀಟ್ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.</p><p>ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಅಕ್ರಮ ಮತ್ತು ಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಮೇ 12ರಂದು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಸದ್ಯ ಜೂನ್ 21ಕ್ಕೆ ಮರುಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಲಾತೂರ್ ಮೂಲದ ವೈದ್ಯ (ಪೀಡಿಯಾಟ್ರಿಷಿಯನ್) ಹಾಗೂ ಭೌತಶಾಸ್ತ್ರ ಶಿಕ್ಷಕನನ್ನು ದೆಹಲಿ ನ್ಯಾಯಾಲಯವು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. </p><p>ವಿಶೇಷ ನ್ಯಾಯಾಧೀಶರಾದ ವಿದ್ಯಾ ಪ್ರಕಾಶ್ ಅವರನ್ನೊಳಗೊಂಡ ಪೀಠವು ತನಿಖಾ ಸಂಸ್ಥೆಯ ಮನವಿಯನ್ನು ಪುರಸ್ಕರಿಸಿ ಈ ಆದೇಶ ನೀಡಿದೆ. ಆರೋಪಿಗಳಾದ ಡಾ. ಮನೋಜ್ ಶಿರೂರೆ ಮತ್ತು ಭೌತಶಾಸ್ತ್ರ ಶಿಕ್ಷಕ ತೇಜಸ್ ಹರ್ಷದ್ಕುಮಾರ್ ಶಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜೂನ್ 1ರವರೆಗೆ ಸಿಬಿಐ ಕಸ್ಟಡಿಗೆ ನೀಡಲಾಗಿದ್ದು, ಅಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದೆ.</p>.ಪ್ರಜಾವಾಣಿ ಪಾಡ್ಕಾಸ್ಟ್ | ಸಿಕ್ಸರ್ ವೈಭವವೋ..? ರನ್ಗಳ ಅಭಿಷೇಕವೋ..?.1-N-2-3-4-5: ಬೈಕ್ನ ಈ ಗಿಯರ್ ಪ್ಯಾಟರ್ನ್ ಹಿಂದಿರುವ ಸೀಕ್ರೆಟ್ ಗೊತ್ತಾ?. <p>ಮಹಾರಾಷ್ಟ್ರದ ಲಾತೂರ್ನಲ್ಲಿ 'ರೇಣುಕಾಯಿ ಕೆಮಿಸ್ಟ್ರಿ ಕ್ಲಾಸಸ್' ನಡೆಸುತ್ತಿರುವ ಶಿವರಾಜ್ ರಘುನಾಥ್ ಮೊಟೇಗಾಂವ್ಕರ್ ಅವರ ಮಗ ಸೇರಿದಂತೆ ಮೂವರು ವಿದ್ಯಾರ್ಥಿಗಳಿಗೆ ರಸಾಯನಶಾಸ್ತ್ರದ ಪ್ರಶ್ನೆಗಳನ್ನು ಒದಗಿಸುವಲ್ಲಿ ಡಾ. ಮನೋಜ್ ಶಿರೂರೆ ಪ್ರಮುಖ ಪಾತ್ರ ವಹಿಸಿದ್ದರು ಎಂದು ಸಿಬಿಐ ಆರೋಪಿಸಿದೆ. ಈ ಪ್ರಶ್ನೆಗಳನ್ನು ನೀಟ್ ಪೇಪರ್ ಸೆಟ್ಟರ್ ಪಿ.ವಿ. ಕುಲಕರ್ಣಿ ಅವರಿಂದ ಪಡೆಯಲಾಗಿತ್ತು ಎನ್ನಲಾಗಿದೆ. ಈ ಹಿಂದೆಯೇ ಮೊಟೇಗಾಂವ್ಕರ್ ಅವರನ್ನು ಬಂಧಿಸಲಾಗಿದೆ.</p><p>ಪುಣೆ ಮೂಲದ 'ಡಾ. ಅಭಂಗ್ ಪ್ರಭು ಮೆಡಿಕಲ್ ಅಕಾಡೆಮಿ' ಕೋಚಿಂಗ್ ಸೆಂಟರ್ನ ಭೌತಶಾಸ್ತ್ರ ಶಿಕ್ಷಕ ತೇಜಸ್ ಹರ್ಷದ್ಕುಮಾರ್ ಶಾ, ಈ ಹಿಂದೆ ಬಂಧಿತಳಾಗಿದ್ದ ಮನೀಷಾ ಹವಾಲ್ದಾರ್ ಎಂಬಾಕೆಯಿಂದ 2026ರ ನೀಟ್ ಪರೀಕ್ಷೆಯ ಭೌತಶಾಸ್ತ್ರದ ಪ್ರಶ್ನೆಗಳನ್ನು ಪಡೆದುಕೊಂಡಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.</p>.ರಾಜೀನಾಮೆ ವದಂತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?.ಸಿಎಂ ಸ್ಥಾನಕ್ಕೆ ರಾಜೀನಾಮೆ ವದಂತಿ: ಸಿದ್ದರಾಮಯ್ಯ ನಿವಾಸದ ಮುಂದೆ ಜನಜಾತ್ರೆ. <p>ಈ ಇಬ್ಬರ ಬಂಧನದೊಂದಿಗೆ ನೀಟ್ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧಿಸಲ್ಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.</p><p>ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಅಕ್ರಮ ಮತ್ತು ಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಮೇ 12ರಂದು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಸದ್ಯ ಜೂನ್ 21ಕ್ಕೆ ಮರುಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>