<p><strong>ನವದೆಹಲಿ:</strong> ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.</p>.<p>ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಬಂಧಿತರು. ಬೊಕಾರೊ ನಿವಾಸಿಯಾದ ಪಂಕಜ್ ಕುಮಾರ್ ಅವರನ್ನು ಪಟ್ನಾದಲ್ಲಿ ಹಾಗೂ ರಾಜು ಸಿಂಗ್ ಅವರನ್ನು ಹಜಾರಿಬಾಗ್ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಇದರೊಂದಿಗೆ ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದಂತಾಗಿದೆ.</p>.<p>ಪಂಕಜ್ ಕುಮಾರ್ ಸಿಂಗ್, ಜಾರ್ಖಂಡ್ನ ಹಜಾರಿಬಾಗ್ನಲ್ಲಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್ಟಿಎ) ಕಚೇರಿಯಲ್ಲಿನ ಪೆಟ್ಟಿಗೆಯಿಂದ ಪ್ರಶ್ನೆಪತ್ರಿಕೆ ಕಳವು ಮಾಡಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಪ್ರಶ್ನೆಪತ್ರಿಕೆ ಕಳವು ಮಾಡಲು ಹಾಗೂ ಅವುಗಳನ್ನು ಇತರ ಗುಂಪಿಗೆ ಸಾಗಿಸುವಲ್ಲಿ ಪಂಕಜ್ಕಮಾರ್ಗೆ ರಾಜು ಸಿಂಗ್ ನೆರವಾಗುತ್ತಿದ್ದ ಎನ್ನಲಾಗಿದೆ.</p>.<p>ಪಂಕಜ್ಕುಮಾರ್, 2017ರಲ್ಲಿ ಜೆಮ್ಶೆಡ್ಪುರದ ನ್ಯಾಷನಲ್ ಇನ್ಸ್ಟಿಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. </p>.ನೀಟ್– ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.</p>.<p>ಪಂಕಜ್ ಕುಮಾರ್ ಹಾಗೂ ರಾಜು ಸಿಂಗ್ ಬಂಧಿತರು. ಬೊಕಾರೊ ನಿವಾಸಿಯಾದ ಪಂಕಜ್ ಕುಮಾರ್ ಅವರನ್ನು ಪಟ್ನಾದಲ್ಲಿ ಹಾಗೂ ರಾಜು ಸಿಂಗ್ ಅವರನ್ನು ಹಜಾರಿಬಾಗ್ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.</p>.<p>ಇದರೊಂದಿಗೆ ನೀಟ್–ಯುಜಿ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಬಂಧಿತರ ಸಂಖ್ಯೆ 14ಕ್ಕೆ ಏರಿದಂತಾಗಿದೆ.</p>.<p>ಪಂಕಜ್ ಕುಮಾರ್ ಸಿಂಗ್, ಜಾರ್ಖಂಡ್ನ ಹಜಾರಿಬಾಗ್ನಲ್ಲಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್ಟಿಎ) ಕಚೇರಿಯಲ್ಲಿನ ಪೆಟ್ಟಿಗೆಯಿಂದ ಪ್ರಶ್ನೆಪತ್ರಿಕೆ ಕಳವು ಮಾಡಿದ ಆರೋಪ ಎದುರಿಸುತ್ತಿದ್ದಾರೆ.</p>.<p>ಪ್ರಶ್ನೆಪತ್ರಿಕೆ ಕಳವು ಮಾಡಲು ಹಾಗೂ ಅವುಗಳನ್ನು ಇತರ ಗುಂಪಿಗೆ ಸಾಗಿಸುವಲ್ಲಿ ಪಂಕಜ್ಕಮಾರ್ಗೆ ರಾಜು ಸಿಂಗ್ ನೆರವಾಗುತ್ತಿದ್ದ ಎನ್ನಲಾಗಿದೆ.</p>.<p>ಪಂಕಜ್ಕುಮಾರ್, 2017ರಲ್ಲಿ ಜೆಮ್ಶೆಡ್ಪುರದ ನ್ಯಾಷನಲ್ ಇನ್ಸ್ಟಿಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. </p>.ನೀಟ್– ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಆರಂಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>