<p><strong>ಇಂದೋರ್:</strong> ವೈದ್ಯಕೀಯ ಪದವಿ ಕೋರ್ಸ್ಗೆ ಪ್ರವೇಶ ಕಲ್ಪಿಸುವ ನೀಟ್–ಯುಜಿ ಫಲಿತಾಂಶವನ್ನು ಪ್ರಕಟಿಸದಂತೆ ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿತು. </p>.<p>‘ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದ ಕಾರಣ ಪ್ರವೇಶ ಪರೀಕ್ಷೆಯಲ್ಲಿ ನನ್ನ ಸಾಧನೆಗೆ ತೊಡಕಾಗಿದೆ’ ಎಂದು ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ಪೀಠವು ಈ ಆದೇಶ ನೀಡಿತು.</p>.<p class="title">‘ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಲು ನನಗೆ ಅವಕಾಶ ಕಲ್ಪಿಸಬೇಕು’ ಎಂದು ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. ಮಧ್ಯಂತರ ತಡೆಯಾಜ್ಞೆಯ ಪರಿಣಾಮವು ಈ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸುಮಾರು 21 ಲಕ್ಷ ವಿದ್ಯಾರ್ಥಿಗಳ ಮೇಲೆ ಉಂಟಾಗಲಿದೆ. </p>.<p class="title">ನೀಟ್–ಯುಜಿ ಪರೀಕ್ಷೆಯು ಮೇ 4ರಂದು ನಡೆದಿತ್ತು. ಹವಾಮಾನ ವೈಪರೀತ್ಯದ ಪರಿಣಾಮ ಆ ದಿನ ಇಂದೋರ್ನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.</p>.<p>ವಿದ್ಯುತ್ ವ್ಯತ್ಯಯದ ವ್ಯತಿರಿಕ್ತ ಪರಿಣಾಮವು ವಿದ್ಯಾರ್ಥಿನಿಯ ಪರೀಕ್ಷೆಯ ಉಂಟಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್ ಅವರು, ಮುಂದಿನ ವಿಚಾರಣೆವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಸೂಚಿಸಿದರು. ಜೂನ್ 30ಕ್ಕೆ ವಿಚಾರಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್:</strong> ವೈದ್ಯಕೀಯ ಪದವಿ ಕೋರ್ಸ್ಗೆ ಪ್ರವೇಶ ಕಲ್ಪಿಸುವ ನೀಟ್–ಯುಜಿ ಫಲಿತಾಂಶವನ್ನು ಪ್ರಕಟಿಸದಂತೆ ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿತು. </p>.<p>‘ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದ ಕಾರಣ ಪ್ರವೇಶ ಪರೀಕ್ಷೆಯಲ್ಲಿ ನನ್ನ ಸಾಧನೆಗೆ ತೊಡಕಾಗಿದೆ’ ಎಂದು ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ಪೀಠವು ಈ ಆದೇಶ ನೀಡಿತು.</p>.<p class="title">‘ಮತ್ತೊಮ್ಮೆ ಪರೀಕ್ಷೆಯನ್ನು ಎದುರಿಸಲು ನನಗೆ ಅವಕಾಶ ಕಲ್ಪಿಸಬೇಕು’ ಎಂದು ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. ಮಧ್ಯಂತರ ತಡೆಯಾಜ್ಞೆಯ ಪರಿಣಾಮವು ಈ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸುಮಾರು 21 ಲಕ್ಷ ವಿದ್ಯಾರ್ಥಿಗಳ ಮೇಲೆ ಉಂಟಾಗಲಿದೆ. </p>.<p class="title">ನೀಟ್–ಯುಜಿ ಪರೀಕ್ಷೆಯು ಮೇ 4ರಂದು ನಡೆದಿತ್ತು. ಹವಾಮಾನ ವೈಪರೀತ್ಯದ ಪರಿಣಾಮ ಆ ದಿನ ಇಂದೋರ್ನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.</p>.<p>ವಿದ್ಯುತ್ ವ್ಯತ್ಯಯದ ವ್ಯತಿರಿಕ್ತ ಪರಿಣಾಮವು ವಿದ್ಯಾರ್ಥಿನಿಯ ಪರೀಕ್ಷೆಯ ಉಂಟಾಗಿದೆ ಎಂದು ಹೇಳಿದ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್ ಅವರು, ಮುಂದಿನ ವಿಚಾರಣೆವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಸೂಚಿಸಿದರು. ಜೂನ್ 30ಕ್ಕೆ ವಿಚಾರಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>