<p><strong>ಮುಂಬೈ</strong>: ಇತರ ಎಲ್ಲ ವರದಿಗಳಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದ್ದರೂ, ಆರ್ಟಿಪಿಸಿಆರ್ ವರದಿಯಲ್ಲಿ ಸೋಂಕು ದೃಢಪಟ್ಟಿಲ್ಲ ಎಂಬುದು ಪರಿಹಾರ ನಿರಾಕರಣೆಗೆ ಮಾನದಂಡವಾಗಬಾರದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. </p>.<p>ಆರೋಗ್ಯ ಕಾರ್ಯಕರ್ತೆಯಾಗಿದ್ದ ತನ್ನ ಪತ್ನಿಯನ್ನು ಕೋವಿಡ್ ಸೋಂಕಿನಿಂದಾಗಿ ಕಳೆದುಕೊಂಡ ವ್ಯಕ್ತಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ₹50 ಲಕ್ಷ ವಿಮಾ ಪರಿಹಾರ ವಿತರಿಸುವ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಹೈಕೋರ್ಟ್ನ ಔರಂಗಬಾದ್ ಪೀಠವು ಅಹಲ್ಯಾನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.</p>.<p>‘ಮೃತ ಮಹಿಳೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು ಎಂಬುದನ್ನು ದೃಢಪಡಿಸುವ ಆರ್ಟಿಪಿಸಿಆರ್ ವರದಿಯನ್ನು ನೀಡಿಲ್ಲ ಎಂಬ ಏಕೈಕ ಕಾರಣಕ್ಕೆ ಪರಿಹಾರ ವಿತರಣೆಯನ್ನು ನಿರಾಕರಿಸಿರುವುದು ಸರಿಯಲ್ಲ’ ಎಂದು ನ್ಯಾಯಮೂರ್ತಿಗಳಾದ ಅರುಣ್ ಪೆಡ್ನೆಕರ್ ಮತ್ತು ವೈಶಾಲಿ ಜಾಧವ್ ಅವರ ಪೀಠ ಹೇಳಿದೆ. </p>.<p>ಇತರ ವೈದ್ಯಕೀಯ ದಾಖಲೆಗಳಾದ ಸಿ.ಟಿ. ಸ್ಕ್ಯಾನ್ ವರದಿ, ಆಮ್ಲಜನಕ ಮಟ್ಟ ಮತ್ತು ಮರಣ ಪ್ರಮಾಣಪತ್ರವು ಮಹಿಳೆ ಕೋವಿಡ್ನಿಂದ ಮೃತಪಟ್ಟಿರುವುದನ್ನು ದೃಢಪಡಿಸಿದೆ. ಹಾಗಾಗಿ ಕೋವಿಡ್ ಸೋಂಕನ್ನು ನಿರ್ಧರಿಸಲು ಆರ್ಟಿಪಿಸಿಆರ್ ಒಂದೇ ಮಾನದಂಡವಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>ಕೋವಿಡ್ ಸೋಂಕಿನ ಸಂದರ್ಭದಲ್ಲಿ ಮೃತಪಟ್ಟ ಕೋವಿಡ್–19 ವಾರಿಯರ್ಸ್, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸರ್ಕಾರ ಪರಿಹಾರ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಇತರ ಎಲ್ಲ ವರದಿಗಳಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದ್ದರೂ, ಆರ್ಟಿಪಿಸಿಆರ್ ವರದಿಯಲ್ಲಿ ಸೋಂಕು ದೃಢಪಟ್ಟಿಲ್ಲ ಎಂಬುದು ಪರಿಹಾರ ನಿರಾಕರಣೆಗೆ ಮಾನದಂಡವಾಗಬಾರದು ಎಂದು ಬಾಂಬೆ ಹೈಕೋರ್ಟ್ ಹೇಳಿದೆ. </p>.<p>ಆರೋಗ್ಯ ಕಾರ್ಯಕರ್ತೆಯಾಗಿದ್ದ ತನ್ನ ಪತ್ನಿಯನ್ನು ಕೋವಿಡ್ ಸೋಂಕಿನಿಂದಾಗಿ ಕಳೆದುಕೊಂಡ ವ್ಯಕ್ತಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ₹50 ಲಕ್ಷ ವಿಮಾ ಪರಿಹಾರ ವಿತರಿಸುವ ಪ್ರಕ್ರಿಯೆಯನ್ನು ಮುಂದುವರಿಸುವಂತೆ ಹೈಕೋರ್ಟ್ನ ಔರಂಗಬಾದ್ ಪೀಠವು ಅಹಲ್ಯಾನಗರ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.</p>.<p>‘ಮೃತ ಮಹಿಳೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು ಎಂಬುದನ್ನು ದೃಢಪಡಿಸುವ ಆರ್ಟಿಪಿಸಿಆರ್ ವರದಿಯನ್ನು ನೀಡಿಲ್ಲ ಎಂಬ ಏಕೈಕ ಕಾರಣಕ್ಕೆ ಪರಿಹಾರ ವಿತರಣೆಯನ್ನು ನಿರಾಕರಿಸಿರುವುದು ಸರಿಯಲ್ಲ’ ಎಂದು ನ್ಯಾಯಮೂರ್ತಿಗಳಾದ ಅರುಣ್ ಪೆಡ್ನೆಕರ್ ಮತ್ತು ವೈಶಾಲಿ ಜಾಧವ್ ಅವರ ಪೀಠ ಹೇಳಿದೆ. </p>.<p>ಇತರ ವೈದ್ಯಕೀಯ ದಾಖಲೆಗಳಾದ ಸಿ.ಟಿ. ಸ್ಕ್ಯಾನ್ ವರದಿ, ಆಮ್ಲಜನಕ ಮಟ್ಟ ಮತ್ತು ಮರಣ ಪ್ರಮಾಣಪತ್ರವು ಮಹಿಳೆ ಕೋವಿಡ್ನಿಂದ ಮೃತಪಟ್ಟಿರುವುದನ್ನು ದೃಢಪಡಿಸಿದೆ. ಹಾಗಾಗಿ ಕೋವಿಡ್ ಸೋಂಕನ್ನು ನಿರ್ಧರಿಸಲು ಆರ್ಟಿಪಿಸಿಆರ್ ಒಂದೇ ಮಾನದಂಡವಲ್ಲ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>ಕೋವಿಡ್ ಸೋಂಕಿನ ಸಂದರ್ಭದಲ್ಲಿ ಮೃತಪಟ್ಟ ಕೋವಿಡ್–19 ವಾರಿಯರ್ಸ್, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸರ್ಕಾರ ಪರಿಹಾರ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>