‘ರೆಂಕೋಜಿ ದೇಗುಲದಲ್ಲಿ ಬೋಸ್ ಚಿತಾಭಸ್ಮದ ಸಂರಕ್ಷಣೆಗೆ ಭಾರತ ಸರ್ಕಾರ ಹಣ ಸಂದಾಯ ಮಾಡುತ್ತಿದೆ. ಆದರೆ, ಚಿತಾಭಸ್ಮವನ್ನು ದೇಶಕ್ಕೆ ಮರಳಿ ತರುವ ಬಗ್ಗೆ ಗಂಭೀರ ಪ್ರಯತ್ನ ಮಾಡುತ್ತಿಲ್ಲ. 1995ರಲ್ಲಿ ಆಗಿನ ಪ್ರಧಾನಿ ಪಿ.ವಿ.ನರಸಿಂಹರಾವ್, ವಿದೇಶಾಂಗ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದರೂ, ಅದನ್ನು ಪೂರ್ಣಗೊಳಿಸಲಿಲ್ಲ’ ಎಂದು ಅವರು ಲಂಡನ್ನಿಂದ ದೂರವಾಣಿ ಮೂಲಕ ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.