ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಸ್ ಕೊಲೆಯನ್ನು ಕಾಂಗ್ರೆಸ್‌ ಮಾಡಿಸಿದೆ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ವಿವಾದ

Last Updated 24 ಜನವರಿ 2021, 8:47 IST
ಅಕ್ಷರ ಗಾತ್ರ

ಉನ್ನಾವೊ: ಕಾಂಗ್ರೆಸ್‌ ಪಕ್ಷವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕೊಲೆ ಮಾಡಿಸಿದೆ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಉತ್ತರ ಪ್ರದೇಶದ ಉನ್ನಾವೊದಲ್ಲಿ ಬೋಸ್‌ ಜನ್ಮದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್‌, 'ಕಾಂಗ್ರೆಸ್ ಪಕ್ಷವು ಸುಭಾಷ್ ಚಂದ್ರ ಬೋಸ್ ಅವರನ್ನು ಕೊಂದಿದೆ ಎಂಬುದು ನನ್ನ ಆರೋಪವಾಗಿದೆ. ಬೋಸ್‌ ಅವರ ಜನಪ್ರಿಯತೆಯ ಮುಂದೆ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ನೆಹರೂ ಅವರಿಗೆ ನಿಲ್ಲಲು ಸಾಧ್ಯವಾಗಿರಲಿಲ್ಲ' ಎಂದು ಹೇಳಿದ್ದಾರೆ.

‘ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸುಭಾಷ್ ಚಂದ್ರ ಬೋಸ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸಾವು ಇನ್ನೂ ನಿಗೂಢವಾಗಿರುವುದು ಏಕೆ? ಅವರ ಸಾವಿನ ವಿಚಾರಣೆಯನ್ನು ಯಾಕೆ ನಡೆಸಲಿಲ್ಲ? ಅವರ ಸಾವಿನ ಬಗ್ಗೆ ಸತ್ಯ ಹೊರಬರಲಿ' ಎಂದು ಸಾಕ್ಷಿ ಮಹಾರಾಜ್‌ ತಿಳಿಸಿದ್ದಾರೆ.

1897 ರ ಜನವರಿ 23 ರಂದು ಜನಿಸಿದ ಬೋಸ್ ಅವರ ಜನ್ಮದಿನಾಚರಣೆಯ ನೆನಪಿಗಾಗಿ ಪ್ರತಿವರ್ಷ ದೇಶದಲ್ಲಿ ಜನವರಿ 23 ಅನ್ನು 'ಪರಾಕ್ರಮ ದಿವಸ್' ಎಂದು ಆಚರಿಸಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT