ಉತ್ತರ ಪ್ರದೇಶದ ಉನ್ನಾವೊದಲ್ಲಿ ಬೋಸ್ ಜನ್ಮದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್, 'ಕಾಂಗ್ರೆಸ್ ಪಕ್ಷವು ಸುಭಾಷ್ ಚಂದ್ರ ಬೋಸ್ ಅವರನ್ನು ಕೊಂದಿದೆ ಎಂಬುದು ನನ್ನ ಆರೋಪವಾಗಿದೆ. ಬೋಸ್ ಅವರ ಜನಪ್ರಿಯತೆಯ ಮುಂದೆ ಮಹಾತ್ಮ ಗಾಂಧೀಜಿ ಮತ್ತು ಪಂಡಿತ್ ನೆಹರೂ ಅವರಿಗೆ ನಿಲ್ಲಲು ಸಾಧ್ಯವಾಗಿರಲಿಲ್ಲ' ಎಂದು ಹೇಳಿದ್ದಾರೆ.