<p><strong>ನವದೆಹಲಿ</strong>: ಭಾರತದ ಪ್ರವಾಸದಲ್ಲಿರುವ ನೇಪಾಳ ವಿದೇಶಾಂಗ ಸಚಿವ ಪ್ರದೀಪಕುಮಾರ್ ಗ್ಯಾವಲಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಭೇಟಿಯಾಗಿದ್ದಾರೆ.</p>.<p>ಭಾರತ ಮತ್ತು ನೇಪಾಳದ ನಡುವೆ ಗಡಿ ವಿಷಯವಾಗಿ ಸೃಷ್ಟಿಯಾಗಿರುವ ವಿವಾದವು ಎರಡೂ ದೇಶಗಳ ಸಚಿವರ ಮಟ್ಟದ ಸಭೆಯಲ್ಲಿ ಚರ್ಚೆಯಾಗುವ ಸಂಭವವಿದೆ.</p>.<p>ಭಾರತದ ಕೆಲವು ಪ್ರದೇಶಗಳು ತನಗೆ ಸೇರಿದವು ಎಂದು ಹೇಳಿಕೊಂಡ ನೇಪಾಳ, ಆ ಪ್ರದೇಶಗಳನ್ನು ಒಳಗೊಂಡ ಹೊಸ ಭೂಪಟವನ್ನು ಕಳೆದ ವರ್ಷ ಬಿಡುಗಡೆ ಮಾಡಿತ್ತು. ಭಾರತದ ಭೂಪ್ರದೇಶಗಳನ್ನು ಹೊಂದಿರುವ ರಾಜಕೀಯ ಭೂಪಟದ ಪರಿಷ್ಕರಣೆಗೆ ಅಗತ್ಯವಾಗಿರುವ ಸಾಂವಿಧಾನಿಕ ತಿದ್ದುಪಡಿಗೆ ನೇಪಾಳದ ಸಂಸತ್ತು ಅನುಮೋದನೆಯನ್ನೂ ನೀಡಿತ್ತು. ಈ ಬಗ್ಗೆ ಭಾರತ ಪ್ರತಿಭಟನೆ ದಾಖಲಿಸಿತ್ತು.</p>.<p>ನೇಪಾಳದೊಂದಿಗಿನ ಬಾಂಧವ್ಯದ ತಪ್ಪು ತಿಳಿವಳಿಕೆಯನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಭಾವಿಸಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹಿಂದೆ ಹೇಳಿದ್ದರು.</p>.<p>’ನಮ್ಮ ಬಾಂಧವ್ಯ ಕೇವಲ ಐತಿಹಾಸಿಕ, ಸಾಂಸ್ಕೃತಿಕ ಮಾತ್ರವಲ್ಲ ಬಾಂಧವ್ಯಕ್ಕೆ ಆಧ್ಯಾತ್ಮಕ ಬೆಸುಗೆಯೂ ಇದೆ. ಇದನ್ನು ಭಾರತ ಎಂದಿಗೂ ಮರೆಯುವುದಿಲ್ಲ' ಎಂದ ಅವರು ಭಾರತ–ನೇಪಾಳ ಸಂಬಂಧಕ್ಕೆ ಧಕ್ಕೆಯಾಗಲು ಹೇಗೆ ಸಾಧ್ಯ ಎಂದು ರಾಜನಾಥ್ ಸಿಂಗ್ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಾರತದ ಪ್ರವಾಸದಲ್ಲಿರುವ ನೇಪಾಳ ವಿದೇಶಾಂಗ ಸಚಿವ ಪ್ರದೀಪಕುಮಾರ್ ಗ್ಯಾವಲಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಭೇಟಿಯಾಗಿದ್ದಾರೆ.</p>.<p>ಭಾರತ ಮತ್ತು ನೇಪಾಳದ ನಡುವೆ ಗಡಿ ವಿಷಯವಾಗಿ ಸೃಷ್ಟಿಯಾಗಿರುವ ವಿವಾದವು ಎರಡೂ ದೇಶಗಳ ಸಚಿವರ ಮಟ್ಟದ ಸಭೆಯಲ್ಲಿ ಚರ್ಚೆಯಾಗುವ ಸಂಭವವಿದೆ.</p>.<p>ಭಾರತದ ಕೆಲವು ಪ್ರದೇಶಗಳು ತನಗೆ ಸೇರಿದವು ಎಂದು ಹೇಳಿಕೊಂಡ ನೇಪಾಳ, ಆ ಪ್ರದೇಶಗಳನ್ನು ಒಳಗೊಂಡ ಹೊಸ ಭೂಪಟವನ್ನು ಕಳೆದ ವರ್ಷ ಬಿಡುಗಡೆ ಮಾಡಿತ್ತು. ಭಾರತದ ಭೂಪ್ರದೇಶಗಳನ್ನು ಹೊಂದಿರುವ ರಾಜಕೀಯ ಭೂಪಟದ ಪರಿಷ್ಕರಣೆಗೆ ಅಗತ್ಯವಾಗಿರುವ ಸಾಂವಿಧಾನಿಕ ತಿದ್ದುಪಡಿಗೆ ನೇಪಾಳದ ಸಂಸತ್ತು ಅನುಮೋದನೆಯನ್ನೂ ನೀಡಿತ್ತು. ಈ ಬಗ್ಗೆ ಭಾರತ ಪ್ರತಿಭಟನೆ ದಾಖಲಿಸಿತ್ತು.</p>.<p>ನೇಪಾಳದೊಂದಿಗಿನ ಬಾಂಧವ್ಯದ ತಪ್ಪು ತಿಳಿವಳಿಕೆಯನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಭಾವಿಸಿರುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಹಿಂದೆ ಹೇಳಿದ್ದರು.</p>.<p>’ನಮ್ಮ ಬಾಂಧವ್ಯ ಕೇವಲ ಐತಿಹಾಸಿಕ, ಸಾಂಸ್ಕೃತಿಕ ಮಾತ್ರವಲ್ಲ ಬಾಂಧವ್ಯಕ್ಕೆ ಆಧ್ಯಾತ್ಮಕ ಬೆಸುಗೆಯೂ ಇದೆ. ಇದನ್ನು ಭಾರತ ಎಂದಿಗೂ ಮರೆಯುವುದಿಲ್ಲ' ಎಂದ ಅವರು ಭಾರತ–ನೇಪಾಳ ಸಂಬಂಧಕ್ಕೆ ಧಕ್ಕೆಯಾಗಲು ಹೇಗೆ ಸಾಧ್ಯ ಎಂದು ರಾಜನಾಥ್ ಸಿಂಗ್ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>