ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ ವಿದೇಶಾಂಗ ಸಚಿವರಿಂದ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಭೇಟಿ

Last Updated 16 ಜನವರಿ 2021, 6:40 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಪ್ರವಾಸದಲ್ಲಿರುವ ನೇಪಾಳ ವಿದೇಶಾಂಗ ಸಚಿವ ಪ್ರದೀಪಕುಮಾರ್‌ ಗ್ಯಾವಲಿ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಶನಿವಾರ ಭೇಟಿಯಾಗಿದ್ದಾರೆ.

ಭಾರತ ಮತ್ತು ನೇಪಾಳದ ನಡುವೆ ಗಡಿ ವಿಷಯವಾಗಿ ಸೃಷ್ಟಿಯಾಗಿರುವ ವಿವಾದವು ಎರಡೂ ದೇಶಗಳ ಸಚಿವರ ಮಟ್ಟದ ಸಭೆಯಲ್ಲಿ ಚರ್ಚೆಯಾಗುವ ಸಂಭವವಿದೆ.

ಭಾರತದ ಕೆಲವು ಪ್ರದೇಶಗಳು ತನಗೆ ಸೇರಿದವು ಎಂದು ಹೇಳಿಕೊಂಡ ನೇಪಾಳ, ಆ ಪ್ರದೇಶಗಳನ್ನು ಒಳಗೊಂಡ ಹೊಸ ಭೂಪಟವನ್ನು ಕಳೆದ ವರ್ಷ ಬಿಡುಗಡೆ ಮಾಡಿತ್ತು. ಭಾರತದ ಭೂಪ್ರದೇಶಗಳನ್ನು ಹೊಂದಿರುವ ರಾಜಕೀಯ ಭೂಪಟದ ಪರಿಷ್ಕರಣೆಗೆ ಅಗತ್ಯವಾಗಿರುವ ಸಾಂವಿಧಾನಿಕ ತಿದ್ದುಪಡಿಗೆ ನೇಪಾಳದ ಸಂಸತ್ತು ಅನುಮೋದನೆಯನ್ನೂ ನೀಡಿತ್ತು. ಈ ಬಗ್ಗೆ ಭಾರತ ಪ್ರತಿಭಟನೆ ದಾಖಲಿಸಿತ್ತು.

ನೇಪಾಳದೊಂದಿಗಿನ ಬಾಂಧವ್ಯದ ತಪ್ಪು ತಿಳಿವಳಿಕೆಯನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಭಾವಿಸಿರುವುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ಹಿಂದೆ ಹೇಳಿದ್ದರು.

’ನಮ್ಮ ಬಾಂಧವ್ಯ ಕೇವಲ ಐತಿಹಾಸಿಕ, ಸಾಂಸ್ಕೃತಿಕ ಮಾತ್ರವಲ್ಲ ಬಾಂಧವ್ಯಕ್ಕೆ ಆಧ್ಯಾತ್ಮಕ ಬೆಸುಗೆಯೂ ಇದೆ. ಇದನ್ನು ಭಾರತ ಎಂದಿಗೂ ಮರೆಯುವುದಿಲ್ಲ' ಎಂದ ಅವರು ಭಾರತ–ನೇಪಾಳ ಸಂಬಂಧಕ್ಕೆ ಧಕ್ಕೆಯಾಗಲು ಹೇಗೆ ಸಾಧ್ಯ ಎಂದು ರಾಜನಾಥ್‌ ಸಿಂಗ್‌ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT