<p><strong>ಕೋಲ್ಕತ್ತಾ: </strong>ನೇಪಾಳದಾದ್ಯಂತ ‘ಜೆನ್–ಝೀ’ ಬ್ಯಾನರ್ ಅಡಿಯಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದು, ಗಡಿ ಭಾಗದಲ್ಲಿ ಬಂಗಾಳಿಗರು ಶಾಂತಿಯಿಂದ ಇರುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ. </p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನಂತರ ಅಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p><p>‘ನಾವು ನಮ್ಮ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳನ್ನು ಪ್ರೀತಿಸುತ್ತೇವೆ. ಆದರೆ, ಅಲ್ಲಿನ ತೊಂದರೆಗಳು ನಮಗೆ ಸಂಬಂಧಿಸಿದ್ದಲ್ಲ. ನಾವು ಮಧ್ಯ ಪ್ರವೇಶಿಸಲು ಕೂಡ ಸಾಧ್ಯವಿಲ್ಲ. ನೇಪಾಳದ ಗಡಿಯಲ್ಲಿರುವ ಪ್ರದೇಶಗಳಲ್ಲಿ ಜನರು ಶಾಂತಿಯಿಂದ ಇರುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ. </p><p>ವಿದೇಶಾಂಗ ನೀತಿಯು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ನೇಪಾಳದೊಂದಿಗಿನ ರಾಜತಾಂತ್ರಿಕ ಸಂಬಂಧದ ಬಗ್ಗೆ ಗಮನಹರಿಸಲಿ. ನಮ್ಮ ನೆರೆಯ ದೇಶದಲ್ಲಿ ನಾವು ಶಾಂತಿಯನ್ನು ಬಯಸುತ್ತೇವೆ ಎಂದು ತಿಳಿಸಿದ್ದಾರೆ.</p><p>ನೇಪಾಳದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ದಯವಿಟ್ಟು ಪತ್ರಕರ್ತರು ನಿಮ್ಮ ಜೀವವನ್ನು ಪಣಕ್ಕಿಟ್ಟು ವರದಿ ಮಾಡಲು ಅಲ್ಲಿಗೆ ತೆರಳಬೇಡಿ. ಒಂದು ವೇಳೆ ತೆರಳಲೇಬೇಕಾದರೆ, ಪೊಲೀಸರಿಗೆ ಮೊದಲೇ ಮಾಹಿತಿ ನೀಡಿ ಎಂದು ಸಲಹೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತಾ: </strong>ನೇಪಾಳದಾದ್ಯಂತ ‘ಜೆನ್–ಝೀ’ ಬ್ಯಾನರ್ ಅಡಿಯಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ನಡೆಯುತ್ತಿದ್ದು, ಗಡಿ ಭಾಗದಲ್ಲಿ ಬಂಗಾಳಿಗರು ಶಾಂತಿಯಿಂದ ಇರುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮನವಿ ಮಾಡಿದ್ದಾರೆ. </p><p>ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳನ್ನು ನಿಷೇಧಿಸಿದ ನಂತರ ಅಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದೆ. ಅಲ್ಲಿನ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.</p><p>‘ನಾವು ನಮ್ಮ ನೆರೆಯ ದೇಶಗಳಾದ ನೇಪಾಳ, ಶ್ರೀಲಂಕಾ ಹಾಗೂ ಬಾಂಗ್ಲಾದೇಶಗಳನ್ನು ಪ್ರೀತಿಸುತ್ತೇವೆ. ಆದರೆ, ಅಲ್ಲಿನ ತೊಂದರೆಗಳು ನಮಗೆ ಸಂಬಂಧಿಸಿದ್ದಲ್ಲ. ನಾವು ಮಧ್ಯ ಪ್ರವೇಶಿಸಲು ಕೂಡ ಸಾಧ್ಯವಿಲ್ಲ. ನೇಪಾಳದ ಗಡಿಯಲ್ಲಿರುವ ಪ್ರದೇಶಗಳಲ್ಲಿ ಜನರು ಶಾಂತಿಯಿಂದ ಇರುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ. </p><p>ವಿದೇಶಾಂಗ ನೀತಿಯು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಅವರು ನೇಪಾಳದೊಂದಿಗಿನ ರಾಜತಾಂತ್ರಿಕ ಸಂಬಂಧದ ಬಗ್ಗೆ ಗಮನಹರಿಸಲಿ. ನಮ್ಮ ನೆರೆಯ ದೇಶದಲ್ಲಿ ನಾವು ಶಾಂತಿಯನ್ನು ಬಯಸುತ್ತೇವೆ ಎಂದು ತಿಳಿಸಿದ್ದಾರೆ.</p><p>ನೇಪಾಳದಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ದಯವಿಟ್ಟು ಪತ್ರಕರ್ತರು ನಿಮ್ಮ ಜೀವವನ್ನು ಪಣಕ್ಕಿಟ್ಟು ವರದಿ ಮಾಡಲು ಅಲ್ಲಿಗೆ ತೆರಳಬೇಡಿ. ಒಂದು ವೇಳೆ ತೆರಳಲೇಬೇಕಾದರೆ, ಪೊಲೀಸರಿಗೆ ಮೊದಲೇ ಮಾಹಿತಿ ನೀಡಿ ಎಂದು ಸಲಹೆ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>