<p><strong>ನವದೆಹಲಿ:</strong> ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಯುವಕರು ಪ್ರಾಣ ಕಳೆದುಕೊಂಡಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಜತೆಗೆ, ಶಾಂತಿಯುತ ರೀತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. </p><p>ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>‘ನೇಪಾಳದಲ್ಲಿನ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಹಿಂಸಾಚಾರದಲ್ಲಿ ಯುವಕರು ಮೃತಪಟ್ಟಿರುವುದಕ್ಕೆ ತೀವ್ರ ದುಃಖಿತರಾಗಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p><p>‘ಕಠ್ಮಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನೇಪಾಳದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆ ಮತ್ತು ನೇಪಾಳದ ಅಧಿಕಾರಿಗಳು ಹೊರಡಿಸಿದ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದ ನೇಪಾಳ ಸರ್ಕಾರ.ನೇಪಾಳ | ಸಾಮಾಜಿಕ ಜಾಲತಾಣ ನಿಷೇಧ ಖಂಡಿಸಿ ಪ್ರತಿಭಟನೆ: 19 ಸಾವು.ಲಿಪುಲೇಖ್ ವ್ಯಾಪಾರ ಒಪ್ಪಂದ ರದ್ದುಪಡಿಸಿ: ನೇಪಾಳ.ನೇಪಾಳ | ಸರ್ಕಾರದ ವಿರುದ್ಧ Gen Z ಕಿಡಿ; ಬಡವರ ಮಕ್ಕಳು ಬೆಳೀಬಾರ್ದಾ ಅಂದ ಯುವಜನತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ಯುವಕರು ಪ್ರಾಣ ಕಳೆದುಕೊಂಡಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಜತೆಗೆ, ಶಾಂತಿಯುತ ರೀತಿಯಲ್ಲಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುವ ವಿಶ್ವಾಸ ಇದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. </p><p>ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ವಾಪಸ್ ಪಡೆಯಬೇಕು ಮತ್ತು ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಕಠ್ಮಂಡು ಸೇರಿದಂತೆ ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್ ಪ್ರತಿಭಟನೆ ಸೋಮವಾರ ಹಿಂಸಾಚಾರಕ್ಕೆ ತಿರುಗಿತ್ತು. ಈ ಘಟನೆಯಲ್ಲಿ 19 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. </p><p>‘ನೇಪಾಳದಲ್ಲಿನ ಬೆಳವಣಿಗೆಗಳನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಹಿಂಸಾಚಾರದಲ್ಲಿ ಯುವಕರು ಮೃತಪಟ್ಟಿರುವುದಕ್ಕೆ ತೀವ್ರ ದುಃಖಿತರಾಗಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p><p>‘ಕಠ್ಮಂಡು ಸೇರಿದಂತೆ ನೇಪಾಳದ ಹಲವು ನಗರಗಳಲ್ಲಿ ಕರ್ಫ್ಯೂ ವಿಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನೇಪಾಳದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆ ಮತ್ತು ನೇಪಾಳದ ಅಧಿಕಾರಿಗಳು ಹೊರಡಿಸಿದ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.</p>.ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದ ನೇಪಾಳ ಸರ್ಕಾರ.ನೇಪಾಳ | ಸಾಮಾಜಿಕ ಜಾಲತಾಣ ನಿಷೇಧ ಖಂಡಿಸಿ ಪ್ರತಿಭಟನೆ: 19 ಸಾವು.ಲಿಪುಲೇಖ್ ವ್ಯಾಪಾರ ಒಪ್ಪಂದ ರದ್ದುಪಡಿಸಿ: ನೇಪಾಳ.ನೇಪಾಳ | ಸರ್ಕಾರದ ವಿರುದ್ಧ Gen Z ಕಿಡಿ; ಬಡವರ ಮಕ್ಕಳು ಬೆಳೀಬಾರ್ದಾ ಅಂದ ಯುವಜನತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>