<p><strong>ನವದೆಹಲಿ:</strong> ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದಿನಿಂದಲೇ (ಗುರುವಾರ) ನೇಪಾಳ ರಾಜಧಾನಿ ಕಠ್ಮಂಡುವಿಗೆ ಸೇವೆಗಳನ್ನು ಪುನರಾರಂಭಿಸಿವೆ ಎಂದು ವರದಿಯಾಗಿದೆ. </p><p>‘ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ’ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. </p><p>‘ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದೂ ನಾಯ್ಡು ಹೇಳಿದ್ದಾರೆ. </p><p>ಕಠ್ಮಂಡು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನವನ್ನು ಬಂದ್ ಮಾಡಲಾಗಿತ್ತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ವಿಮಾನ ನಿಲ್ದಾಣವು ಮತ್ತೆ ಕಾರ್ಯಾರಂಭಿಸಿದೆ. </p><p>‘ನೇಪಾಳದಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಇಂದು ಮತ್ತು ನಾಳೆ ದೆಹಲಿಯಿಂದ ಕಠ್ಮಂಡುವಿಗೆ ತೆರಳಲು ಮತ್ತು ಹಿಂತಿರುಗಲು ವಿಶೇಷ ವಿಮಾನಗಳು ಕಾರ್ಯ ನಿರ್ವಹಿಸಲಿವೆ’ ಎಂದು ಏರ್ ಇಂಡಿಯಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. </p><p>ನವದೆಹಲಿ ಮತ್ತು ಕಠ್ಮಂಡು ನಡುವೆ ಪ್ರತಿದಿನ 12 ವಿಮಾನಗಳನ್ನು ನಿರ್ವಹಿಸುವ ಏರ್ ಇಂಡಿಯಾ, ಮಂಗಳವಾರ ನಾಲ್ಕು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು. ಜತೆಗೆ, ಏರ್ ಇಂಡಿಯಾ ಎಕ್ಸ್ಪ್ರೆಸ್, ಇಂಡಿಗೊ, ಸ್ಪೈಸ್ಜೆಟ್ ಸೇರಿದಂತೆ ನೇಪಾಳ ಏರ್ಲೈನ್ಸ್ ಸಂಸ್ಥೆಗಳು ಕೂಡ ವಿಮಾನ ಹಾರಾಟವನ್ನು ರದ್ದುಗೊಳಿಸಿದ್ದವು. </p><p>ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿರ್ಬಂಧ ಆದೇಶ ಮತ್ತು ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.</p><p>ಕೆ.ಪಿ ಶರ್ಮಾ ಓಲಿ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಸೇನೆಯು ನಿರ್ಬಂಧಗಳನ್ನು ವಿಧಿಸುವ ಮೂಲಕ ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಈ ನಡುವೆ, ದೇಶದಲ್ಲಿ ಮಧ್ಯಂತರ ಸರ್ಕಾರ ರಚಿಸುವ ಕುರಿತ ಪ್ರಯತ್ನಗಳಿಗೂ ಚಾಲನೆ ದೊರೆತಿದೆ.</p>.ನೇಪಾಳ | ಮಧ್ಯಂತರ ಸರ್ಕಾರ ರಚನೆಗೆ ಯತ್ನ; ಮುಂಚೂಣಿಯಲ್ಲಿ ಮೂವರ ಹೆಸರು.ಸಂಪಾದಕೀಯ | ಯುವಶಕ್ತಿಯ ಆಕ್ರೋಶ ಸ್ಫೋಟ; ಮಗ್ಗುಲು ಬದಲಿಸಿದ ನೇಪಾಳ .Nepal Unrest: ಕಠ್ಮಂಡು ವಿಮಾನ ನಿಲ್ದಾಣ ವಶಕ್ಕೆ ಪಡೆದ ನೇಪಾಳ ಸೇನೆ.ಆಳ–ಅಗಲ | ನೇಪಾಳ: ಸರ್ಕಾರದ ಸದ್ದಡಗಿಸಿದ ‘ಯುವ ಕ್ರಾಂತಿ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ವಿಮಾನಯಾನ ಸಂಸ್ಥೆಗಳು ಇಂದಿನಿಂದಲೇ (ಗುರುವಾರ) ನೇಪಾಳ ರಾಜಧಾನಿ ಕಠ್ಮಂಡುವಿಗೆ ಸೇವೆಗಳನ್ನು ಪುನರಾರಂಭಿಸಿವೆ ಎಂದು ವರದಿಯಾಗಿದೆ. </p><p>‘ಹಿಂಸಾಚಾರದಿಂದಾಗಿ ನೇಪಾಳದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಏರ್ ಇಂಡಿಯಾ ಮತ್ತು ಇಂಡಿಗೊ ಸಂಸ್ಥೆಗಳು ಹೆಚ್ಚುವರಿ ವಿಮಾನ ಸೇವೆ ಒದಗಿಸುತ್ತಿವೆ’ ಎಂದು ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ತಿಳಿಸಿದ್ದಾರೆ. </p><p>‘ಪ್ರಯಾಣಿಕರಿಂದ ಹೆಚ್ಚುವರಿ ದರ ಪಡೆಯದಂತೆ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದೂ ನಾಯ್ಡು ಹೇಳಿದ್ದಾರೆ. </p><p>ಕಠ್ಮಂಡು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನವನ್ನು ಬಂದ್ ಮಾಡಲಾಗಿತ್ತು. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದ್ದು, ವಿಮಾನ ನಿಲ್ದಾಣವು ಮತ್ತೆ ಕಾರ್ಯಾರಂಭಿಸಿದೆ. </p><p>‘ನೇಪಾಳದಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಇಂದು ಮತ್ತು ನಾಳೆ ದೆಹಲಿಯಿಂದ ಕಠ್ಮಂಡುವಿಗೆ ತೆರಳಲು ಮತ್ತು ಹಿಂತಿರುಗಲು ವಿಶೇಷ ವಿಮಾನಗಳು ಕಾರ್ಯ ನಿರ್ವಹಿಸಲಿವೆ’ ಎಂದು ಏರ್ ಇಂಡಿಯಾ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. </p><p>ನವದೆಹಲಿ ಮತ್ತು ಕಠ್ಮಂಡು ನಡುವೆ ಪ್ರತಿದಿನ 12 ವಿಮಾನಗಳನ್ನು ನಿರ್ವಹಿಸುವ ಏರ್ ಇಂಡಿಯಾ, ಮಂಗಳವಾರ ನಾಲ್ಕು ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು. ಜತೆಗೆ, ಏರ್ ಇಂಡಿಯಾ ಎಕ್ಸ್ಪ್ರೆಸ್, ಇಂಡಿಗೊ, ಸ್ಪೈಸ್ಜೆಟ್ ಸೇರಿದಂತೆ ನೇಪಾಳ ಏರ್ಲೈನ್ಸ್ ಸಂಸ್ಥೆಗಳು ಕೂಡ ವಿಮಾನ ಹಾರಾಟವನ್ನು ರದ್ದುಗೊಳಿಸಿದ್ದವು. </p><p>ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿರ್ಬಂಧ ಆದೇಶ ಮತ್ತು ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ.</p><p>ಕೆ.ಪಿ ಶರ್ಮಾ ಓಲಿ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ಸೇನೆಯು ನಿರ್ಬಂಧಗಳನ್ನು ವಿಧಿಸುವ ಮೂಲಕ ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಈ ನಡುವೆ, ದೇಶದಲ್ಲಿ ಮಧ್ಯಂತರ ಸರ್ಕಾರ ರಚಿಸುವ ಕುರಿತ ಪ್ರಯತ್ನಗಳಿಗೂ ಚಾಲನೆ ದೊರೆತಿದೆ.</p>.ನೇಪಾಳ | ಮಧ್ಯಂತರ ಸರ್ಕಾರ ರಚನೆಗೆ ಯತ್ನ; ಮುಂಚೂಣಿಯಲ್ಲಿ ಮೂವರ ಹೆಸರು.ಸಂಪಾದಕೀಯ | ಯುವಶಕ್ತಿಯ ಆಕ್ರೋಶ ಸ್ಫೋಟ; ಮಗ್ಗುಲು ಬದಲಿಸಿದ ನೇಪಾಳ .Nepal Unrest: ಕಠ್ಮಂಡು ವಿಮಾನ ನಿಲ್ದಾಣ ವಶಕ್ಕೆ ಪಡೆದ ನೇಪಾಳ ಸೇನೆ.ಆಳ–ಅಗಲ | ನೇಪಾಳ: ಸರ್ಕಾರದ ಸದ್ದಡಗಿಸಿದ ‘ಯುವ ಕ್ರಾಂತಿ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>