<p><strong>ನವದೆಹಲಿ:</strong> ಭಾರತದಲ್ಲಿನ ಕೋವಿಡ್–19 ಹೊಸ ತಳಿಗಳು ಮೂಲ ತಳಿಗಿಂತಲೂ ಹೆಚ್ಚು ಸಾಂಕ್ರಾಮಿಕ ಹಾಗೂ ಅಪಾಯಕಾರಿಯಾಗಿರಬಲ್ಲವು ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ಮುಖ್ಯಸ್ಥ ಡಾ.ರಣದೀಪ್ ಗುಲೆರಿಯಾ ಹೇಳಿದ್ದಾರೆ.</p>.<p>‘ಎನ್ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಭಾರತದಲ್ಲಿ ‘ಹರ್ಡ್ ಇಮ್ಯೂನಿಟಿ’ ಎಂಬುದು ಭ್ರಮೆ ಎಂದಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/covid-19-upsurge-in-four-states-no-significant-drop-in-kerala-807386.html" target="_blank">ನಾಲ್ಕು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ದೇಶದಲ್ಲಿ ಎರಡನೇ ಅಲೆ ಆತಂಕ</a></p>.<p>ಮಹಾರಾಷ್ಟ್ರ, ಕೇರಳ, ಮಧ್ಯ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಎರಡನೇ ಅಲೆಯ ಆತಂಕ ಸೃಷ್ಟಿಸಿದೆ.</p>.<p>ಹೊಸ ತಳಿಗಳು ಹೆಚ್ಚು ಮಾರಕವೇ ಅಥವಾ ಅಲ್ಲವೇ ಎಂಬುದಕ್ಕಿಂತಲೂ ಅವುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಗುಲೆರಿಯಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/there-is-no-matter-of-lock-down-strict-action-taken-in-borders-says-sudhakar-807414.html" itemprop="url">ಕೋವಿಡ್:ಗಡಿಯಲ್ಲಿ ಬಿಗಿ ಕ್ರಮ,ಲಾಕ್ ಡೌನ್ ಸದ್ಯಕ್ಕಿಲ್ಲ: ಸುಧಾಕರ್</a></p>.<p>ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮೂರು ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ಪುಣೆಯಲ್ಲಿ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.</p>.<p>ಮಹಾರಾಷ್ಟ್ರ, ಪಂಜಾಬ್, ಚತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಪ್ರತಿನಿತ್ಯ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/india-news/maha-health-experts-put-onus-on-people-for-spike-in-cases-807424.html" itemprop="url">ಮಹಾರಾಷ್ಟ್ರ: ಜನರ ನಿರ್ಲಕ್ಷ್ಯದಿಂದ ಪ್ರಕರಣಗಳಲ್ಲಿ ಏರಿಕೆ -ಆರೋಗ್ಯ ತಜ್ಞರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತದಲ್ಲಿನ ಕೋವಿಡ್–19 ಹೊಸ ತಳಿಗಳು ಮೂಲ ತಳಿಗಿಂತಲೂ ಹೆಚ್ಚು ಸಾಂಕ್ರಾಮಿಕ ಹಾಗೂ ಅಪಾಯಕಾರಿಯಾಗಿರಬಲ್ಲವು ಎಂದು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಯ (ಏಮ್ಸ್) ಮುಖ್ಯಸ್ಥ ಡಾ.ರಣದೀಪ್ ಗುಲೆರಿಯಾ ಹೇಳಿದ್ದಾರೆ.</p>.<p>‘ಎನ್ಡಿಟಿವಿ’ಗೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಭಾರತದಲ್ಲಿ ‘ಹರ್ಡ್ ಇಮ್ಯೂನಿಟಿ’ ಎಂಬುದು ಭ್ರಮೆ ಎಂದಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/covid-19-upsurge-in-four-states-no-significant-drop-in-kerala-807386.html" target="_blank">ನಾಲ್ಕು ರಾಜ್ಯಗಳಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ದೇಶದಲ್ಲಿ ಎರಡನೇ ಅಲೆ ಆತಂಕ</a></p>.<p>ಮಹಾರಾಷ್ಟ್ರ, ಕೇರಳ, ಮಧ್ಯ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ದೇಶದಲ್ಲಿ ಎರಡನೇ ಅಲೆಯ ಆತಂಕ ಸೃಷ್ಟಿಸಿದೆ.</p>.<p>ಹೊಸ ತಳಿಗಳು ಹೆಚ್ಚು ಮಾರಕವೇ ಅಥವಾ ಅಲ್ಲವೇ ಎಂಬುದಕ್ಕಿಂತಲೂ ಅವುಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವುದು ಒಳಿತು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಗುಲೆರಿಯಾ ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/there-is-no-matter-of-lock-down-strict-action-taken-in-borders-says-sudhakar-807414.html" itemprop="url">ಕೋವಿಡ್:ಗಡಿಯಲ್ಲಿ ಬಿಗಿ ಕ್ರಮ,ಲಾಕ್ ಡೌನ್ ಸದ್ಯಕ್ಕಿಲ್ಲ: ಸುಧಾಕರ್</a></p>.<p>ಮಹಾರಾಷ್ಟ್ರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಮೂರು ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ಪುಣೆಯಲ್ಲಿ ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.</p>.<p>ಮಹಾರಾಷ್ಟ್ರ, ಪಂಜಾಬ್, ಚತ್ತೀಸಗಢ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಮತ್ತೆ ಉಲ್ಬಣಗೊಂಡಿದೆ. ಪ್ರತಿನಿತ್ಯ ಸಾವಿರಾರು ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/india-news/maha-health-experts-put-onus-on-people-for-spike-in-cases-807424.html" itemprop="url">ಮಹಾರಾಷ್ಟ್ರ: ಜನರ ನಿರ್ಲಕ್ಷ್ಯದಿಂದ ಪ್ರಕರಣಗಳಲ್ಲಿ ಏರಿಕೆ -ಆರೋಗ್ಯ ತಜ್ಞರು</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>