<p><strong>ನವದೆಹಲಿ:</strong> ಸಾರ್ವಜನಿಕ ಆರೋಗ್ಯ ಯೋಜನೆ ಅಡಿಯಲ್ಲಿ ಇನ್ನೂ ಸೇರ್ಪಡೆಯಾಗದ ಮಧ್ಯಮ ವರ್ಗದ ಜನರಿಗಾಗಿ ಹೊಸ ಆರೋಗ್ಯ ಯೋಜನೆ ರೂಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ನೀತಿ ಆಯೋಗ ಹೇಳಿದೆ.</p>.<p>‘ದೇಶದಲ್ಲಿ, ಕೆಳಹಂತದಲ್ಲಿರುವ ಶೇ 40ರಷ್ಟು ಜನರು ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯುತ್ತಿದ್ದಾರೆ. ಇವರನ್ನು ಹೊಸ ಯೋಜನೆಯಿಂದ ಹೊರಗಿಡಲಾಗುವುದು’ ಎಂದು ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>.<p>ಬಿಲ್ ಆ್ಯಂಡ್ ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಉಪಸ್ಥಿತಿಯಲ್ಲಿ, ‘ನವ ಭಾರತಕ್ಕಾಗಿ ಆರೋಗ್ಯ ವ್ಯವಸ್ಥೆ’ ಕುರಿತ ವರದಿ ಬಿಡುಗಡೆ ಮಾಡಿ ರಾಜೀವ್ ಕುಮಾರ್ ಮಾತನಾಡಿದರು.</p>.<p>‘ಮೇಲ್ವರ್ಗದ ಜನರಿಗೆ ತಮ್ಮ ವೈದ್ಯಕೀಯ ವೆಚ್ಚ ಭರಿಸುವ ಸಾಮರ್ಥ್ಯ ಇದೆ.ಬಡವರಿಗೆ ಈಗಾಗಲೇ ಆಯುಷ್ಮಾನ್ ಭಾರತ ಸೌಲಭ್ಯ ಕಲ್ಪಿಸಲಾಗಿದೆ. ಶೇ 50ರಷ್ಟು ಮಧ್ಯಮವರ್ಗದವರಿಗೆ<br />ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲ. ಆದ್ದರಿಂದ ಈ ವರ್ಗದ ಜನರಿಗೆದೀರ್ಘಾವಧಿಗೆ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಈ ವರದಿಯಲ್ಲಿ ಮಾರ್ಗಸೂಚಿಗಳನ್ನು ಹಾಕಿಕೊಳ್ಳಲಾಗಿದೆ’ ಎಂದು ಆಯೋಗದ ಸಲಹೆಗಾರ (ಆರೋಗ್ಯ) ಅಲೋಕ್ ಕುಮಾರ್ ತಿಳಿಸಿದ್ದಾರೆ.</p>.<p><strong>ಸಚಿವಾಲಯದ ಜತೆ ಗೇಟ್ಸ್ ಫೌಂಡೇಷನ್ ಒಪ್ಪಂದ</strong></p>.<p>ಪ್ರಾಥಮಿಕ ಆರೋಗ್ಯ ಸೌಲಭ್ಯ ಒದಗಿಸುವ ಕೇಂದ್ರದ ಯೋಜನೆಗಳಿಗೆ ತಾಂತ್ರಿಕ ಹಾಗೂ ನಿರ್ವಹಣಾ ನೆರವು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವಾಲಯದ ಜತೆ ಬಿಲ್ ಆ್ಯಂಡ್ ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ.</p>.<p>ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವುದು, ಪೌಷ್ಟಿಕಾಂಶ ಯೋಜನೆಗಳ ಸುಧಾರಣೆ ಸೇರಿದಂತೆ ಆರೋಗ್ಯ ಕ್ಷೇತ್ರದ ಹಲವು ವಿಭಾಗಗಳನ್ನು ಸದೃಢಗೊಳಿಸುವಲ್ಲಿ ಫೌಂಡೇಷನ್ ಬೆಂಬಲ ನೀಡಲಿದೆ.</p>.<p><strong>ಎಸ್ಡಿಜಿ ಸಾಧಿಸಲು ಸಾರ್ವಜನಿಕ ಆರೋಗ್ಯ ಯೋಜನೆ ಮಹತ್ವದ್ದು</strong></p>.<p>‘ಸುಸ್ಥಿರ ಅಭಿವೃದ್ಧಿ ಗುರಿ (ಎಸ್ಡಿಜಿ) 2030 ‘ಅಜೆಂಡಾ ಸಾಧಿಸಲು ಸಾರ್ವಜನಿಕ ಆರೋಗ್ಯ ಯೋಜನೆ ಮಹತ್ವದ ಅಂಶವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆ ಜಾರಿಗೆ ಭಾರತ ಬದ್ಧವಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.</p>.<p>‘ವೈದ್ಯಕೀಯ ಉತ್ಪನ್ನಗಳ ಲಭ್ಯತೆ: ಸುಸ್ಥಿರ ಅಭಿವೃದ್ಧಿ ಗುರಿ 2030’ ಕುರಿತು ಅಂತರರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಎಲ್ಲರಿಗೂ ಉನ್ನತ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ನಿರಂತರ ಕ್ರಮ ಕೈಗೊಳ್ಳುತ್ತಿದೆ. ವೈದ್ಯಕೀಯ ಉತ್ಪನ್ನಗಳ ಲಭ್ಯತೆ, ಅವುಗಳ ಕಾನೂನುಬದ್ಧ ಮಾರಾಟ ವ್ಯವಸ್ಥೆ ಕಲ್ಪಿಸುವುದು ಸಹ ಈ ಗುರಿ ತಲುಪಲು ಮಹತ್ವದ್ದಾಗಿದೆ. ಸಮಾವೇಶದ ಮುಖ್ಯ ಉದ್ದೇಶ ಇದೇ ಆಗಿದೆ’ ಎಂದು ತಿಳಿಸಿದ್ದಾರೆ.</p>.<p>ಆರೋಗ್ಯ ಸಚಿವಾಲಯ ಹಾಗೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಈ ಸಮಾವೇಶ ಆಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಾರ್ವಜನಿಕ ಆರೋಗ್ಯ ಯೋಜನೆ ಅಡಿಯಲ್ಲಿ ಇನ್ನೂ ಸೇರ್ಪಡೆಯಾಗದ ಮಧ್ಯಮ ವರ್ಗದ ಜನರಿಗಾಗಿ ಹೊಸ ಆರೋಗ್ಯ ಯೋಜನೆ ರೂಪಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ನೀತಿ ಆಯೋಗ ಹೇಳಿದೆ.</p>.<p>‘ದೇಶದಲ್ಲಿ, ಕೆಳಹಂತದಲ್ಲಿರುವ ಶೇ 40ರಷ್ಟು ಜನರು ಆಯುಷ್ಮಾನ್ ಭಾರತ ಯೋಜನೆ ಅಡಿಯಲ್ಲಿ ಸೌಲಭ್ಯ ಪಡೆಯುತ್ತಿದ್ದಾರೆ. ಇವರನ್ನು ಹೊಸ ಯೋಜನೆಯಿಂದ ಹೊರಗಿಡಲಾಗುವುದು’ ಎಂದು ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ತಿಳಿಸಿದ್ದಾರೆ.</p>.<p>ಬಿಲ್ ಆ್ಯಂಡ್ ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ಉಪಸ್ಥಿತಿಯಲ್ಲಿ, ‘ನವ ಭಾರತಕ್ಕಾಗಿ ಆರೋಗ್ಯ ವ್ಯವಸ್ಥೆ’ ಕುರಿತ ವರದಿ ಬಿಡುಗಡೆ ಮಾಡಿ ರಾಜೀವ್ ಕುಮಾರ್ ಮಾತನಾಡಿದರು.</p>.<p>‘ಮೇಲ್ವರ್ಗದ ಜನರಿಗೆ ತಮ್ಮ ವೈದ್ಯಕೀಯ ವೆಚ್ಚ ಭರಿಸುವ ಸಾಮರ್ಥ್ಯ ಇದೆ.ಬಡವರಿಗೆ ಈಗಾಗಲೇ ಆಯುಷ್ಮಾನ್ ಭಾರತ ಸೌಲಭ್ಯ ಕಲ್ಪಿಸಲಾಗಿದೆ. ಶೇ 50ರಷ್ಟು ಮಧ್ಯಮವರ್ಗದವರಿಗೆ<br />ಯಾವುದೇ ವೈದ್ಯಕೀಯ ಸೌಲಭ್ಯಗಳಿಲ್ಲ. ಆದ್ದರಿಂದ ಈ ವರ್ಗದ ಜನರಿಗೆದೀರ್ಘಾವಧಿಗೆ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಈ ವರದಿಯಲ್ಲಿ ಮಾರ್ಗಸೂಚಿಗಳನ್ನು ಹಾಕಿಕೊಳ್ಳಲಾಗಿದೆ’ ಎಂದು ಆಯೋಗದ ಸಲಹೆಗಾರ (ಆರೋಗ್ಯ) ಅಲೋಕ್ ಕುಮಾರ್ ತಿಳಿಸಿದ್ದಾರೆ.</p>.<p><strong>ಸಚಿವಾಲಯದ ಜತೆ ಗೇಟ್ಸ್ ಫೌಂಡೇಷನ್ ಒಪ್ಪಂದ</strong></p>.<p>ಪ್ರಾಥಮಿಕ ಆರೋಗ್ಯ ಸೌಲಭ್ಯ ಒದಗಿಸುವ ಕೇಂದ್ರದ ಯೋಜನೆಗಳಿಗೆ ತಾಂತ್ರಿಕ ಹಾಗೂ ನಿರ್ವಹಣಾ ನೆರವು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವಾಲಯದ ಜತೆ ಬಿಲ್ ಆ್ಯಂಡ್ ಮೆಲಿಂದಾ ಗೇಟ್ಸ್ ಫೌಂಡೇಷನ್ ಸಹಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ.</p>.<p>ತಾಯಂದಿರು ಹಾಗೂ ಶಿಶುಗಳ ಮರಣ ಪ್ರಮಾಣ ಕಡಿಮೆ ಮಾಡುವುದು, ಪೌಷ್ಟಿಕಾಂಶ ಯೋಜನೆಗಳ ಸುಧಾರಣೆ ಸೇರಿದಂತೆ ಆರೋಗ್ಯ ಕ್ಷೇತ್ರದ ಹಲವು ವಿಭಾಗಗಳನ್ನು ಸದೃಢಗೊಳಿಸುವಲ್ಲಿ ಫೌಂಡೇಷನ್ ಬೆಂಬಲ ನೀಡಲಿದೆ.</p>.<p><strong>ಎಸ್ಡಿಜಿ ಸಾಧಿಸಲು ಸಾರ್ವಜನಿಕ ಆರೋಗ್ಯ ಯೋಜನೆ ಮಹತ್ವದ್ದು</strong></p>.<p>‘ಸುಸ್ಥಿರ ಅಭಿವೃದ್ಧಿ ಗುರಿ (ಎಸ್ಡಿಜಿ) 2030 ‘ಅಜೆಂಡಾ ಸಾಧಿಸಲು ಸಾರ್ವಜನಿಕ ಆರೋಗ್ಯ ಯೋಜನೆ ಮಹತ್ವದ ಅಂಶವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆ ಜಾರಿಗೆ ಭಾರತ ಬದ್ಧವಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.</p>.<p>‘ವೈದ್ಯಕೀಯ ಉತ್ಪನ್ನಗಳ ಲಭ್ಯತೆ: ಸುಸ್ಥಿರ ಅಭಿವೃದ್ಧಿ ಗುರಿ 2030’ ಕುರಿತು ಅಂತರರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಎಲ್ಲರಿಗೂ ಉನ್ನತ ದರ್ಜೆಯ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ನಿರಂತರ ಕ್ರಮ ಕೈಗೊಳ್ಳುತ್ತಿದೆ. ವೈದ್ಯಕೀಯ ಉತ್ಪನ್ನಗಳ ಲಭ್ಯತೆ, ಅವುಗಳ ಕಾನೂನುಬದ್ಧ ಮಾರಾಟ ವ್ಯವಸ್ಥೆ ಕಲ್ಪಿಸುವುದು ಸಹ ಈ ಗುರಿ ತಲುಪಲು ಮಹತ್ವದ್ದಾಗಿದೆ. ಸಮಾವೇಶದ ಮುಖ್ಯ ಉದ್ದೇಶ ಇದೇ ಆಗಿದೆ’ ಎಂದು ತಿಳಿಸಿದ್ದಾರೆ.</p>.<p>ಆರೋಗ್ಯ ಸಚಿವಾಲಯ ಹಾಗೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಈ ಸಮಾವೇಶ ಆಯೋಜಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>