<p><strong>ನವದೆಹಲಿ:</strong> ‘ಹೊಸ ಕಾರ್ಮಿಕ ಸಹಿಂತೆಗಳು ಕಾರ್ಮಿಕರಿಗೆ ದಿನಕ್ಕೆ ₹400 ಕನಿಷ್ಠ ವೇತನ, ₹25 ಲಕ್ಷ ಮೊತ್ತದ ಆರೋಗ್ಯ ಸುರಕ್ಷತೆ ಮತ್ತು ನಗರ ಪ್ರದೇಶಗಳಲ್ಲಿನ ಭಾರತೀಯ ಕಾರ್ಮಿಕರಿಗೆ ಉದ್ಯೋಗ ಖಾತರಿ ನೀಡುವುದನ್ನು ಖಚಿತಪಡಿಸುತ್ತದೆಯೇ’ ಎಂದು ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.</p>.<p>ಹೊಸ ಕಾರ್ಮಿಕ ಸಂಹಿತೆಯು ಕಾರ್ಮಿಕರಿಗೆ ಹೇಗೆ ‘ಶ್ರಮಿಕ್ ನ್ಯಾಯ’ವನ್ನು ಪರಿಣಾಮಕಾರಿಯಾಗಿ ಒದಗಿಸುತ್ತದೆ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಕಾರ್ಮಿಕ ಸಂಹಿತೆಗಳ ಪರಿಣಾಮಕಾರಿ ಅನುಷ್ಠಾನವನ್ನು ಕರ್ನಾಟಕ ಮತ್ತು ರಾಜಸ್ಥಾನದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರಗಳಿಂದ ಕಲಿಯುವಂತೆ ಸಲಹೆ ನೀಡಿದೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಈಗಾಗಲೇ ಅಸ್ತಿತ್ವದಲ್ಲಿದ್ದ 29 ಕಾರ್ಮಿಕ ಕಾಯ್ದೆಗಳನ್ನು ನಾಲ್ಕು ಸಂಹಿತೆಗಳಲ್ಲಿ ಸೇರಿಸಿ, ಇನ್ನೂ ಅಧಿಸೂಚನೆ ಹೊರಡಿಸಿರುವ ಹಂತದಲ್ಲೇ ಇದೊಂದು ಕ್ರಾಂತಿಕಾರಿ ಸುಧಾರಣೆ ಎಂದು ಪ್ರಚಾರ ಮಾಡಲಾಗುತ್ತಿದೆ. ಆದರೆ, ಈ ಸಂಹಿತೆಗಳು ಭಾರತದ ಕಾರ್ಮಿಕರ ಐದು ಅಗತ್ಯ ಬೇಡಿಕೆಗಳನ್ನು ಈಡೇರಿಸುತ್ತದೆಯೇ?’ ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<p class="title">‘ಎಲ್ಲ ರೀತಿಯ ಅಸಂಘಟಿತ ಕಾರ್ಮಿಕರಿಗೆ, ಎಂಜಿಎನ್ಆರ್ಇಜಿಎ ಸೇರಿದಂತೆ ದಿನಕ್ಕೆ ₹400 ರಾಷ್ಟ್ರೀಯ ಕನಿಷ್ಠ ವೇತನ. ಆರೋಗ್ಯ ಹಕ್ಕಿನ ಅಡಿಯಲ್ಲಿ ₹25 ಲಕ್ಷ ಮೊತ್ತದ ಆರೋಗ್ಯ ವಿಮೆ, ನಗರ ಪ್ರದೇಶಗಳಿಗೆ ಉದ್ಯೋಗ ಖಾತರಿ ನೀಡುವುದು, ಜೀವ ವಿಮೆ ಮತ್ತು ಅಪಘಾತ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತೆ ಮತ್ತು ಪ್ರಮುಖ ಸರ್ಕಾರಿ ಉದ್ಯೋಗದಲ್ಲಿ ಗುತ್ತಿಗೆ ಪದ್ಧತಿಯನ್ನು ನಿಲ್ಲಿಸುವ ಬದ್ಧತೆಯನ್ನು ಈ ಹೊಸ ಕಾರ್ಮಿಕ ಸಂಹಿತೆಗಳು ಪ್ರದರ್ಶಿಸುತ್ತವೆಯೇ’ ಎಂದು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಹೊಸ ಕಾರ್ಮಿಕ ಸಹಿಂತೆಗಳು ಕಾರ್ಮಿಕರಿಗೆ ದಿನಕ್ಕೆ ₹400 ಕನಿಷ್ಠ ವೇತನ, ₹25 ಲಕ್ಷ ಮೊತ್ತದ ಆರೋಗ್ಯ ಸುರಕ್ಷತೆ ಮತ್ತು ನಗರ ಪ್ರದೇಶಗಳಲ್ಲಿನ ಭಾರತೀಯ ಕಾರ್ಮಿಕರಿಗೆ ಉದ್ಯೋಗ ಖಾತರಿ ನೀಡುವುದನ್ನು ಖಚಿತಪಡಿಸುತ್ತದೆಯೇ’ ಎಂದು ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.</p>.<p>ಹೊಸ ಕಾರ್ಮಿಕ ಸಂಹಿತೆಯು ಕಾರ್ಮಿಕರಿಗೆ ಹೇಗೆ ‘ಶ್ರಮಿಕ್ ನ್ಯಾಯ’ವನ್ನು ಪರಿಣಾಮಕಾರಿಯಾಗಿ ಒದಗಿಸುತ್ತದೆ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಕಾರ್ಮಿಕ ಸಂಹಿತೆಗಳ ಪರಿಣಾಮಕಾರಿ ಅನುಷ್ಠಾನವನ್ನು ಕರ್ನಾಟಕ ಮತ್ತು ರಾಜಸ್ಥಾನದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರಗಳಿಂದ ಕಲಿಯುವಂತೆ ಸಲಹೆ ನೀಡಿದೆ.</p>.<p>ಈ ಕುರಿತು ‘ಎಕ್ಸ್’ ಮಾಡಿರುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಈಗಾಗಲೇ ಅಸ್ತಿತ್ವದಲ್ಲಿದ್ದ 29 ಕಾರ್ಮಿಕ ಕಾಯ್ದೆಗಳನ್ನು ನಾಲ್ಕು ಸಂಹಿತೆಗಳಲ್ಲಿ ಸೇರಿಸಿ, ಇನ್ನೂ ಅಧಿಸೂಚನೆ ಹೊರಡಿಸಿರುವ ಹಂತದಲ್ಲೇ ಇದೊಂದು ಕ್ರಾಂತಿಕಾರಿ ಸುಧಾರಣೆ ಎಂದು ಪ್ರಚಾರ ಮಾಡಲಾಗುತ್ತಿದೆ. ಆದರೆ, ಈ ಸಂಹಿತೆಗಳು ಭಾರತದ ಕಾರ್ಮಿಕರ ಐದು ಅಗತ್ಯ ಬೇಡಿಕೆಗಳನ್ನು ಈಡೇರಿಸುತ್ತದೆಯೇ?’ ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.</p>.<p class="title">‘ಎಲ್ಲ ರೀತಿಯ ಅಸಂಘಟಿತ ಕಾರ್ಮಿಕರಿಗೆ, ಎಂಜಿಎನ್ಆರ್ಇಜಿಎ ಸೇರಿದಂತೆ ದಿನಕ್ಕೆ ₹400 ರಾಷ್ಟ್ರೀಯ ಕನಿಷ್ಠ ವೇತನ. ಆರೋಗ್ಯ ಹಕ್ಕಿನ ಅಡಿಯಲ್ಲಿ ₹25 ಲಕ್ಷ ಮೊತ್ತದ ಆರೋಗ್ಯ ವಿಮೆ, ನಗರ ಪ್ರದೇಶಗಳಿಗೆ ಉದ್ಯೋಗ ಖಾತರಿ ನೀಡುವುದು, ಜೀವ ವಿಮೆ ಮತ್ತು ಅಪಘಾತ ವಿಮೆ ಸೇರಿದಂತೆ ಸಮಗ್ರ ಸಾಮಾಜಿಕ ಭದ್ರತೆ ಮತ್ತು ಪ್ರಮುಖ ಸರ್ಕಾರಿ ಉದ್ಯೋಗದಲ್ಲಿ ಗುತ್ತಿಗೆ ಪದ್ಧತಿಯನ್ನು ನಿಲ್ಲಿಸುವ ಬದ್ಧತೆಯನ್ನು ಈ ಹೊಸ ಕಾರ್ಮಿಕ ಸಂಹಿತೆಗಳು ಪ್ರದರ್ಶಿಸುತ್ತವೆಯೇ’ ಎಂದು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>