<p><strong>ಕೆವಡಿಯಾ (ಗುಜರಾತ್) (ಪಿಟಿಐ): </strong>‘ಹೊಸ ಕಾನೂನುಗಳನ್ನು ಸ್ಪಷ್ಟವಾದ ರೀತಿಯಲ್ಲಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬೇಕು. ಇದರಿಂದ ಬಡವರು, ಸಾಮಾನ್ಯ ಜನರಿಗೂ ಕಾನೂನು ಸುಲಭವಾಗಿ ಅರ್ಥವಾಗುತ್ತದೆ. ನ್ಯಾಯದಾನವೂ ಸುಲಭವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಏಕತಾ ನಗರದಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಾಮಾವೇಶ’ದ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೊ ಸಂದೇಶದ ಮೂಲಕ ಪ್ರಧಾನಿ ಮಾತನಾಡಿದರು.</p>.<p>‘ಕಾನೂನನ್ನು ಅರ್ಥ ಮಾಡಿಕೊಳ್ಳಲು ಜನರಿಗೆ ಭಾಷೆ ಅಡ್ಡಿಯಾಗಬಾರದು’ ಎಂದು ಹೇಳಿದರು.</p>.<p>‘ನ್ಯಾಯ ಪಡೆಯುವಲ್ಲಿ ವಿಳಂಬವಾಗುತ್ತಿರುವುದು ನಮ್ಮ ದೇಶದ ಜನರು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಸಮರ್ಥ ರಾಷ್ಟ್ರ ಮತ್ತು ಸಾಮರಸ್ಯ ಸಮಾಜಕ್ಕೆ ಸೂಕ್ಷ್ಮ ನ್ಯಾಯಾಂಗ ವ್ಯವಸ್ಥೆ ಅತ್ಯಗತ್ಯ’ ಎಂದು ಪ್ರತಿಪಾದಿಸಿದರು.</p>.<p>‘ನಮ್ಮ ನ್ಯಾಯಾಂಗವು ಈ ಸಮಸ್ಯೆ ಪರಿಹರಿಸಲು ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಅಮೃತ ಕಾಲದಲ್ಲಿ, ಇದನ್ನು ನಿಭಾಯಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ’ ಎಂದು ತಿಳಿಸಿದರು.</p>.<p>ಲೋಕ ಅದಾಲತ್ಗಳಂತಹ ವ್ಯವಸ್ಥೆಗಳು ನ್ಯಾಯಾಲಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ಬಡವರಿಗೆ ಸುಲಭವಾಗಿ ನ್ಯಾಯ ದೊರೆಯುವಂತೆ ಮಾಡಲು ನೆರವಾಗಿವೆ ಎಂದು ಅವರು ಸ್ಮರಿಸಿದರು.</p>.<p>‘ನಮ್ಮ ಸರ್ಕಾರವು ಎಂಟು ವರ್ಷಗಳಲ್ಲಿ 1,500ಕ್ಕೂ ಹೆಚ್ಚು ಹಳೆಯ ಹಾಗೂ ಅಪ್ರಸ್ತುತ ಕಾನೂನುಗಳನ್ನು ರದ್ದುಗೊಳಿಸಿದೆ’ ಎಂದು ಮೋದಿ ತಿಳಿಸಿದರು.</p>.<p>‘ಕೆಲ ದೇಶಗಳು ಕಾನೂನನ್ನು ರೂಪಿಸುವಾಗಲೇ ಅದರ ಕಾಲ ಮಿತಿ ನಿರ್ಧರಿಸಲಾಗುತ್ತದೆ. ಆ ನಿಗದಿತ ದಿನಾಂಕ ಬಂದಾಗ, ಅದೇ ಕಾನೂನನ್ನು ಹೊಸ ಸಂದರ್ಭಗಳಲ್ಲಿ ಪರಿಶೀಲಿಸಲಾಗುತ್ತದೆ. ಭಾರತವೂ ಇದೇ ಮನೋಭಾವನೆಯಿಂದ ಮುನ್ನಡೆಯಬೇಕು’ ಎಂದು ಮೋದಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆವಡಿಯಾ (ಗುಜರಾತ್) (ಪಿಟಿಐ): </strong>‘ಹೊಸ ಕಾನೂನುಗಳನ್ನು ಸ್ಪಷ್ಟವಾದ ರೀತಿಯಲ್ಲಿ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬೇಕು. ಇದರಿಂದ ಬಡವರು, ಸಾಮಾನ್ಯ ಜನರಿಗೂ ಕಾನೂನು ಸುಲಭವಾಗಿ ಅರ್ಥವಾಗುತ್ತದೆ. ನ್ಯಾಯದಾನವೂ ಸುಲಭವಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.</p>.<p>ಇಲ್ಲಿಗೆ ಸಮೀಪದ ಏಕತಾ ನಗರದಲ್ಲಿ ನಡೆಯುತ್ತಿರುವ ಎರಡು ದಿನಗಳ ‘ಕಾನೂನು ಸಚಿವರು ಮತ್ತು ಕಾನೂನು ಕಾರ್ಯದರ್ಶಿಗಳ ಅಖಿಲ ಭಾರತ ಸಾಮಾವೇಶ’ದ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೊ ಸಂದೇಶದ ಮೂಲಕ ಪ್ರಧಾನಿ ಮಾತನಾಡಿದರು.</p>.<p>‘ಕಾನೂನನ್ನು ಅರ್ಥ ಮಾಡಿಕೊಳ್ಳಲು ಜನರಿಗೆ ಭಾಷೆ ಅಡ್ಡಿಯಾಗಬಾರದು’ ಎಂದು ಹೇಳಿದರು.</p>.<p>‘ನ್ಯಾಯ ಪಡೆಯುವಲ್ಲಿ ವಿಳಂಬವಾಗುತ್ತಿರುವುದು ನಮ್ಮ ದೇಶದ ಜನರು ಎದುರಿಸುತ್ತಿರುವ ಪ್ರಮುಖ ಸವಾಲುಗಳಲ್ಲಿ ಒಂದಾಗಿದೆ’ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ಸಮರ್ಥ ರಾಷ್ಟ್ರ ಮತ್ತು ಸಾಮರಸ್ಯ ಸಮಾಜಕ್ಕೆ ಸೂಕ್ಷ್ಮ ನ್ಯಾಯಾಂಗ ವ್ಯವಸ್ಥೆ ಅತ್ಯಗತ್ಯ’ ಎಂದು ಪ್ರತಿಪಾದಿಸಿದರು.</p>.<p>‘ನಮ್ಮ ನ್ಯಾಯಾಂಗವು ಈ ಸಮಸ್ಯೆ ಪರಿಹರಿಸಲು ಗಂಭೀರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಅಮೃತ ಕಾಲದಲ್ಲಿ, ಇದನ್ನು ನಿಭಾಯಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ’ ಎಂದು ತಿಳಿಸಿದರು.</p>.<p>ಲೋಕ ಅದಾಲತ್ಗಳಂತಹ ವ್ಯವಸ್ಥೆಗಳು ನ್ಯಾಯಾಲಯಗಳ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಮತ್ತು ಬಡವರಿಗೆ ಸುಲಭವಾಗಿ ನ್ಯಾಯ ದೊರೆಯುವಂತೆ ಮಾಡಲು ನೆರವಾಗಿವೆ ಎಂದು ಅವರು ಸ್ಮರಿಸಿದರು.</p>.<p>‘ನಮ್ಮ ಸರ್ಕಾರವು ಎಂಟು ವರ್ಷಗಳಲ್ಲಿ 1,500ಕ್ಕೂ ಹೆಚ್ಚು ಹಳೆಯ ಹಾಗೂ ಅಪ್ರಸ್ತುತ ಕಾನೂನುಗಳನ್ನು ರದ್ದುಗೊಳಿಸಿದೆ’ ಎಂದು ಮೋದಿ ತಿಳಿಸಿದರು.</p>.<p>‘ಕೆಲ ದೇಶಗಳು ಕಾನೂನನ್ನು ರೂಪಿಸುವಾಗಲೇ ಅದರ ಕಾಲ ಮಿತಿ ನಿರ್ಧರಿಸಲಾಗುತ್ತದೆ. ಆ ನಿಗದಿತ ದಿನಾಂಕ ಬಂದಾಗ, ಅದೇ ಕಾನೂನನ್ನು ಹೊಸ ಸಂದರ್ಭಗಳಲ್ಲಿ ಪರಿಶೀಲಿಸಲಾಗುತ್ತದೆ. ಭಾರತವೂ ಇದೇ ಮನೋಭಾವನೆಯಿಂದ ಮುನ್ನಡೆಯಬೇಕು’ ಎಂದು ಮೋದಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>