<p><strong>ತಿರುವನಂತಪುರ:</strong> ವಯನಾಡ್ನಲ್ಲಿ ಕಳೆದ ವರ್ಷ ಭಾರಿ ಮಳೆಗೆ ಭೂಕುಸಿತ ಸಂಭವಿಸಿ ಅಪಾರ ಹಾನಿಯಾಗಿದ್ದು ಜನರ ಮನದಿಂದ ಇನ್ನೂ ಮಾಸಿಲ್ಲ. ಭವಿಷ್ಯದಲ್ಲಿ ಇಂತಹ ಅವಘಡಗಳನ್ನು ತಡೆಯುವ ಉದ್ದೇಶದಿಂದ ಕರ್ನಾಟಕದ ಮಂಗಳೂರಿನಲ್ಲಿ ಹೊಸದಾಗಿ ಸ್ಥಾಪಿಸಿರುವ ರೇಡಾರ್ನ ನೆರವು ಪಡೆಯಲು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುಂದಾಗಿದೆ.</p>.<p>ವಯನಾಡ್ ಹಾಗೂ ಸುತ್ತಮುತ್ತಲ ಪ್ರದೇಶಕ್ಕೆ ಸಂಬಂಧಿಸಿ ಹವಾಮಾನ ಮುನ್ಸೂಚನೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸುವುದು ಮಂಗಳೂರಿನಲ್ಲಿರುವ ರೇಡಾರ್ ಅನ್ನು ಬಳಸುವ ಉದ್ದೇಶವಾಗಿದೆ ಎಂದು ಇಲಾಖೆ ಮೂಲಗಳು ಹೇಳಿವೆ.</p>.<p>‘ಸದ್ಯ ‘ನೌಕಾಸ್ಟ್’ ವ್ಯವಸ್ಥೆಯಡಿ ಹವಾಮಾನ ಕುರಿತು ಮಾಹಿತಿ ನೀಡಲಾಗುತ್ತಿದೆ. ಆಯಾ ಜಿಲ್ಲೆಗೆ ಸಂಬಂಧಪಟ್ಟಂತೆ ಮುನ್ಸೂಚನೆಗಳನ್ನು ನೀಡಲಾಗುವುದು. ಈ ನೂತನ ವ್ಯವಸ್ಥೆಯಿಂದ ನಿರ್ದಿಷ್ಟ ಸ್ಥಳ ಕುರಿತ ನಿಖರ ಮುನ್ಸೂಚನೆ ಸಾಧ್ಯವಾಗಲಿದೆ’ ಎಂದು ಐಎಂಡಿಯ ಪ್ರಾದೇಶಿಕ ನಿರ್ದೇಶಕಿ ನೀತಾ ಕೆ.ಗೋಪಾಲ್ ಮಂಗಳವಾರ ಹೇಳಿದ್ದಾರೆ.</p>.<p>‘ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್ ಹಾಗೂ ವಯನಾಡ್ನ ಕೆಲ ಭಾಗಗಳು ಸೇರಿ ಇಡೀ ಕೇರಳದ ಉತ್ತರ ಭಾಗದ ಜಿಲ್ಲೆಗಳಿಗೆ ಸಂಬಂಧಿಸಿದ ಹವಾಮಾನ ವೈಪರೀತ್ಯ ಕುರಿತ ಮುನ್ಸೂಚನೆಯನ್ನು ಮಂಗಳೂರಿನಲ್ಲಿನ ರೇಡಾರ್ ಬಳಸಿ ನೀಡಲಾಗುವುದು. ಮಾಹಿತಿನ್ನು ಇಂಗ್ಲಿಷ್ ಹಾಗೂ ಮಲಯಾಳದಲ್ಲಿ ನೀಡಲಾಗುವುದು’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಯನಾಡ್ನಲ್ಲಿ ಕಳೆದ ವರ್ಷ ಭಾರಿ ಮಳೆಗೆ ಭೂಕುಸಿತ ಸಂಭವಿಸಿ ಅಪಾರ ಹಾನಿಯಾಗಿದ್ದು ಜನರ ಮನದಿಂದ ಇನ್ನೂ ಮಾಸಿಲ್ಲ. ಭವಿಷ್ಯದಲ್ಲಿ ಇಂತಹ ಅವಘಡಗಳನ್ನು ತಡೆಯುವ ಉದ್ದೇಶದಿಂದ ಕರ್ನಾಟಕದ ಮಂಗಳೂರಿನಲ್ಲಿ ಹೊಸದಾಗಿ ಸ್ಥಾಪಿಸಿರುವ ರೇಡಾರ್ನ ನೆರವು ಪಡೆಯಲು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುಂದಾಗಿದೆ.</p>.<p>ವಯನಾಡ್ ಹಾಗೂ ಸುತ್ತಮುತ್ತಲ ಪ್ರದೇಶಕ್ಕೆ ಸಂಬಂಧಿಸಿ ಹವಾಮಾನ ಮುನ್ಸೂಚನೆ ವ್ಯವಸ್ಥೆಯನ್ನು ಮತ್ತಷ್ಟು ಉತ್ತಮಗೊಳಿಸುವುದು ಮಂಗಳೂರಿನಲ್ಲಿರುವ ರೇಡಾರ್ ಅನ್ನು ಬಳಸುವ ಉದ್ದೇಶವಾಗಿದೆ ಎಂದು ಇಲಾಖೆ ಮೂಲಗಳು ಹೇಳಿವೆ.</p>.<p>‘ಸದ್ಯ ‘ನೌಕಾಸ್ಟ್’ ವ್ಯವಸ್ಥೆಯಡಿ ಹವಾಮಾನ ಕುರಿತು ಮಾಹಿತಿ ನೀಡಲಾಗುತ್ತಿದೆ. ಆಯಾ ಜಿಲ್ಲೆಗೆ ಸಂಬಂಧಪಟ್ಟಂತೆ ಮುನ್ಸೂಚನೆಗಳನ್ನು ನೀಡಲಾಗುವುದು. ಈ ನೂತನ ವ್ಯವಸ್ಥೆಯಿಂದ ನಿರ್ದಿಷ್ಟ ಸ್ಥಳ ಕುರಿತ ನಿಖರ ಮುನ್ಸೂಚನೆ ಸಾಧ್ಯವಾಗಲಿದೆ’ ಎಂದು ಐಎಂಡಿಯ ಪ್ರಾದೇಶಿಕ ನಿರ್ದೇಶಕಿ ನೀತಾ ಕೆ.ಗೋಪಾಲ್ ಮಂಗಳವಾರ ಹೇಳಿದ್ದಾರೆ.</p>.<p>‘ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್ ಹಾಗೂ ವಯನಾಡ್ನ ಕೆಲ ಭಾಗಗಳು ಸೇರಿ ಇಡೀ ಕೇರಳದ ಉತ್ತರ ಭಾಗದ ಜಿಲ್ಲೆಗಳಿಗೆ ಸಂಬಂಧಿಸಿದ ಹವಾಮಾನ ವೈಪರೀತ್ಯ ಕುರಿತ ಮುನ್ಸೂಚನೆಯನ್ನು ಮಂಗಳೂರಿನಲ್ಲಿನ ರೇಡಾರ್ ಬಳಸಿ ನೀಡಲಾಗುವುದು. ಮಾಹಿತಿನ್ನು ಇಂಗ್ಲಿಷ್ ಹಾಗೂ ಮಲಯಾಳದಲ್ಲಿ ನೀಡಲಾಗುವುದು’ ಎಂದೂ ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>