ಐಐಸಿಎಫ್ ಅಧ್ಯಕ್ಷ ಜುಫರ್ ಅಹ್ಮದ್ ಫಾರೂಕಿ ಮಾತನಾಡಿ, ‘ಮಸೀದಿ ನಿರ್ಮಾಣದ ನಿಟ್ಟಿನಲ್ಲಿ ನಾವು ದೇಣಿಗೆ ಸಂಗ್ರಹಕ್ಕೆ ಸಾರ್ವಜನಿಕ ಚಳವಳಿ ನಡೆಸಿಲ್ಲ. ಜೊತೆಗೆ ಈ ಕುರಿತು ಯಾರ ಬಳಿಯೂ ಕೇಳಿಕೊಂಡಿಲ್ಲ. ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿಕಟ ಸಂಬಂಧ ಹೊಂದಿದ ಹಿಂದೂ ಸಂಘಟನೆಗಳು ಮೂರು ದಶಕಗಳ ಹಿಂದಿನಿಂದಲೂ ದೇಣಿಗೆ ಸಂಗ್ರಹವನ್ನು ಆರಂಭಿಸಿದ್ದವು. ಈ ಮೂಲಕ ಭಾರತದ 4 ಕೋಟಿ ಜನರಿಂದ ₹3,000 ಕೋಟಿ (₹30 ಬಿಲಿಯನ್) ಸಂಗ್ರಹಿಸಿದೆ’ ಎಂದರು.