ಉತ್ತರ ಪ್ರದೇಶ ಸರ್ಕಾರವು 2020–21ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಂಗಳವಾರ ಮಂಡಿಸಿದೆ. ಅಯೋಧ್ಯೆಯ ಅಭಿವೃದ್ಧಿಗೆ ₹ 500 ಕೋಟಿಗೂ ಹೆಚ್ಚು ಅನುದಾನ ಮೀಸಲಿರಿಸಿದೆ.ಅಯೋಧ್ಯೆಯನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಹೇಳಿದ್ದಾರೆ.